Don't Miss!
- News Karnataka LS Election 2024 LIVE: ಇಂದು ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಬೇಸರದ ಸುದ್ದಿ: ಏನದು?
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ 'ಯುವರತ್ನ' ಸಿನಿಮಾಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಭಾರಿ ಕುತೂಹಲ ಮೂಡಿಸಿರುವ ಯುವರತ್ನ ಸಿನಿಮಾ ಏಪ್ರಿಲ್ 1ಕ್ಕೆ ತೆರೆಗೆ ಬರುತ್ತಿದೆ. ಕನ್ನಡ ಮತ್ತು ತೆಲುಗು ಎರಡು ಭಾಷೆಯಲ್ಲೂ ಏಕಕಾಲಕ್ಕೆ ರಿಲೀಸ್ ಆಗುತ್ತಿದೆ.
ಈಗಾಗಲೇ ಸಿನಿಮಾದಿಂದ ಎರಡು ಹಾಡುಗಳು ರಿಲೀಸ್ ಆಗಿದ್ದು ಅಭಿಮಾನಿಗಳ ನಿದ್ದೆಗೆಡಿಸಿದೆ. ಇದೀಗ ಮೂರನೆ ಹಾಡು ರಿಲೀಸ್ ಗೆ ಸಿದ್ಧವಾಗಿತ್ತು. ಫೆಬ್ರವರಿ 21ಕ್ಕೆ ಮೂರನೇ ಹಾಡನ್ನು ರಿಲೀಸ್ ಮಾಡುವುದಾಗಿ ಸಿನಿಮಾತಂಡ ಅನೌನ್ಸ್ ಮಾಡಿತ್ತು. 3ನೇ ಹಾಡು ಹೇಗಿರಲಿದೆ ಎನ್ನುವ ಕುತೂಹಲದಿಂದ ಅಭಿಮಾನಿಗಳು ಕಾಯುತ್ತಿದ್ದರು. ಆದರೀಗ ಹಾಡು ರಿಲೀಸ್ ಆಗುವುದಿಲ್ಲ ಎನ್ನುವ ಸುದ್ದಿ ಹೊರಬಿದ್ದಿದೆ.
ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ಬರ್ತಿದೆ 'ಸೋಲ್ ಆಫ್ ಯುವರತ್ನ'
ಪುನೀತ್ ರಾಜ್ ಕುಮಾರ್ ವಿಡಿಯೋ ಮೂಲಕ ಹಾಡು ರಿಲೀಸ್ ಆಗುತ್ತಿಲ್ಲ ಎನ್ನುವ ವಿಚಾರವನ್ನು ಅಭಿಮಾನಿಗಳಿಗೊಂದಿಗೆ ಹಂಚಿಕೊಂಡಿದ್ದಾರೆ. ತಾಂತ್ರಿಕ ಸಮಸ್ಯೆಯಿಂದ ಹಾಡು ರಿಲೀಸ್ ಆಗುತ್ತಿಲ್ಲ ಎಂದಿದ್ದಾರೆ. 'ಯುವರತ್ನ ಸಿನಿಮಾದ 3ನೇ ಹಾಡು 21ಕ್ಕೆ ರಿಲೀಸ್ ಆಗಬೇಕಿತ್ತು. ಆದರೆ ಚಿಕ್ಕ ತಾಂತ್ರಿಕ ಸಮಸ್ಯೆಯಿಂದ ಮುಂದಕ್ಕೆ ಹಾಕಲಾಗಿದೆ. ಆದಷ್ಟು ಬೇಗ ಆ ಹಾಡನ್ನು ರಿಲೀಸ್ ಮಾಡುತ್ತೇವೆ. ಎಲ್ಲರೂ ಸಹಕರಿಸುತ್ತೀರಿ ಎಂದು ಭಾವಿಸುತ್ತೇನೆ' ಎಂದು ಹೇಳಿದ್ದಾರೆ.
ಪಾಠಶಾಲಾ ಸೋಲ್ ಆಫ್ ಯುವರತ್ನ ಹಾಡಿಗಾಗಿ ಕಾದುಕುಳಿತಿದ್ದ ಅಭಿಮಾನಿಗಳಿಗೆ ಈ ಸುದ್ದಿ ನಿರಾಸೆ ಮೂಡಿಸಿದೆ. ಈಗಾಗಲೇ ಚಿತ್ರದ ಪ್ರಮೋಷನ್ ಕೆಲಸಗಳು ಪ್ರಾರಂಭವಾಗಿದ್ದು ವಿಭಿನ್ನ ರೀತಿಯಲ್ಲಿ ಪ್ರಚಾರ ಪ್ರಾರಂಭವಾಗಿದೆ.
ಯುವರತ್ನ, ಸಂತೋಷ್ ಆನಂದ್ ರಾಮ್ ಮತ್ತು ಪವರ್ ಸ್ಟಾರ್ ಕಾಂಬಿನೇಷನ್ ನಲ್ಲಿ ಬರ್ತಿರುವ ಎರಡನೇ ಸಿನಿಮಾ ಇದಾಗಿದೆ. ಚಿತ್ರದಲ್ಲಿ ಪುನೀತ್ ಗೆ ನಾಯಕಿಯಾಗಿ ಸಯೇಶಾ ಸೈಗಲ್ ಕಾಣಿಸಿಕೊಂಡಿದ್ದಾರೆ. ಸಯೇಶಾ ಅವರಿಗೆ ಇದು ಮೊದಲ ಕನ್ನಡ ಸಿನಿಮಾವಾಗಿದ್ದು, ಚಿತ್ರದ ಬಗ್ಗೆ ಸಖತ್ ಎಕ್ಸಾಯಿಟ್ ಆಗಿದ್ದಾರೆ.
Recommended Video
ಇನ್ನು ಚಿತ್ರದಲ್ಲಿ ಸೋನು ಗೌಡ, ರಾಧಿಕಾ ಶರತ್ ಕುಮಾರ್ ಕಾವ್ಯ ಶೆಟ್ಟಿ, ಧನಂಜಯ್, ದಿಗಂತ್, ಮತ್ತು ಪ್ರಕಾಶ್ ರೈ ಸೇರಿದಂತೆ ದೊಡ್ಡ ತಾರಬಳಗವೇ ಇದೆ.