Don't Miss!
- News ಶಿವಮೊಗ್ಗ ಲೋಕಸಭಾ ಕ್ಷೇತ್ರ: ಶಾಂತಿಯುತ ಮತದಾನಕ್ಕಾಗಿ ಅಧಿಕಾರಿಗಳಿಗೆ ಖಡಕ್ ಸೂಚನೆ
- Sports ಟಿ20 ವಿಶ್ವಕಪ್-2024: "ಬಾಗಿಲು ಮುಚ್ಚಿದ್ದೇನೆ" ಎಂದಿದ್ದೇಕೆ ಸ್ಪಿನ್ ಮಾಂತ್ರಿಕ ನರೈನ್
- Lifestyle ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Automobiles ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಯುವರತ್ನ' ಚಿತ್ರೀಕರಣ ಮುಕ್ತಾಯ: ಅಪ್ಪು ಎಂಟ್ರಿಗೆ ಅಭಿಮಾನಿಗಳು ರೆಡಿಯಾಗಿ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಯುವರತ್ನ ಸಿನಿಮಾ ಚಿತ್ರೀಕರಣ ಮುಗಿಸಿದೆ. ಲಾಕ್ಡೌನ್ನಿಂದ ಕೊನೆಯ ಹಂತದ ಶೂಟಿಂಗ್ ಸ್ಥಗಿತಗೊಳಿಸಿದ್ದ ಚಿತ್ರತಂಡ ಈಗ ಸಂಪೂರ್ಣವಾಗಿ ಮುಗಿಸಿ ಕುಂಬಳಕಾಯಿ ಹೊಡೆದಿದೆ.
ಕೊನೆಯ ದಿನದ ಚಿತ್ರೀಕರಣದಲ್ಲಿ ನಟ ಪುನೀತ್ ರಾಜ್ ಕುಮಾರ್ ಮತ್ತು ನಾಯಕಿ ಸಯೇಶಾ ಸೈಗಲ್ ಭಾಗಿಯಾಗಿದ್ದರು.
ಪುನೀತ್ 'ಜೇಮ್ಸ್' ಚಿತ್ರಕ್ಕೆ ಎಂಟ್ರಿಕೊಟ್ಟ ತೆಲುಗು ಸ್ಟಾರ್ ನಟ!
ಈ ವೇಳೆ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರ್, ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಸಹ ಪಾಲ್ಗೊಂಡಿದ್ದರು. ಈ ಸಂತಸವನ್ನು ನಿರ್ದೇಶಕ ಸಂತೋಷ್ ಆನಂದ್ರಾಮ್ ತಮ್ಮ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.
''ಯುವರತ್ನ ಚಿತ್ರೀಕರಣ ನಿನ್ನೆ ಮುಕ್ತಾಯವಾಯಿತು. ನನ್ನ ಬೆನ್ನು ತಟ್ಟಿ ಸಿನಿಮಾವನ್ನ ಯಶಸ್ವಿ ಆಗಿ ಮುಗಿಸಿಕೊಟ್ಟ ಪುನೀತ್ ಸರ್ ಗೆ, ವಿಜಯ್ ಸರ್ ಗೆ, ವೆಂಕಟ್ ಸರ್ ಗೆ, ಶಿವು ಸರ್ ಗೆ ನನ್ನ ಡೈರೆಕ್ಷನ್ ತಂಡಕ್ಕೆ ಹಾಗು ಹೊಂಬಾಳೆ ಕುಟುಂಬಕ್ಕೆ ನನ್ನ ಹೃದಯ ಪೂರ್ವಕ ಧನ್ಯವಾದಗಳು ನನ್ನ ತಂಡ ನನ್ನ ಶಕ್ತಿ'' ಎಂದು ಟ್ವೀಟ್ ಮಾಡಿದ್ದಾರೆ.
ಟಾಕಿ ಪೋಷನ್, ಬಾಕಿಯಿದ್ದ ಹಾಡುಗಳ ಚಿತ್ರೀಕರಣ ಎಲ್ಲವೂ ಮುಗಿದಿದೆ. ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸ ಮಾತ್ರ ಬಾಕಿಯಿದ್ದು, ಆದಷ್ಟೂ ಬೇಗ ಮುಗಿಸಿ ತೆರೆಮೇಲೆ ಬರಲು ಸಜ್ಜಾಗಲಿದೆ.
Recommended Video
ಅಂದ್ಹಾಗೆ, ಅಕ್ಟೋಬರ್ 15 ರಿಂದ ಚಿತ್ರಮಂದಿರಗಳ ತೆರೆಯಲಿದ್ದು, ಸದ್ಯಕ್ಕೆ ಯಾವುದೇ ಹೊಸ ಸಿನಿಮಾಗಳು ರಿಲೀಸ್ ಆಗುವುದಿಲ್ಲ. ಹಳೆಯ ಹಿಟ್ ಚಿತ್ರಗಳು ಮತ್ತೆ ರಿ-ರಿಲೀಸ್ ಆಗುತ್ತಿದೆ.