Don't Miss!
- News Namma Metro: 2023-24ರಲ್ಲಿ ಮೆಟ್ರೋ ವಾರ್ಷಿಕ ಆದಾಯದಲ್ಲಿ ಭಾರೀ ಏರಿಕೆ: ಖರ್ಚು-ಆದಾಯದ ಮಾಹಿತಿ?
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Sports IPL 2024: ಮುಂಬೈ ಇಂಡಿಯನ್ಸ್ ವಿರುದ್ಧ ಶತಕ; ರೋಹಿತ್, ಕೊಹ್ಲಿಗೆ ಕ್ರೆಡಿಟ್ ನೀಡಿದ ಯಶಸ್ವಿ ಜೈಸ್ವಾಲ್!
- Technology Itel: ಭಾರತದಲ್ಲಿ ಐಟೆಲ್ S24 ಲಾಂಚ್! 108MP ಕ್ಯಾಮೆರಾ.. ಬೆಲೆ ಇಷ್ಟೇ
- Lifestyle ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪುನೀತ್ ಜೊತೆ ರಮ್ಯಾ ಚಳಿ ಚಳಿ ತಾಳೆನು ಈ ಚಳಿಯಾ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ಗೋಲ್ಡನ್ ಗರ್ಲ್ ರಮ್ಯಾ ಸಖತ್ ಹಾಟ್ ಸಾಂಗ್ನಲ್ಲಿ ಮತ್ತೊಮ್ಮೆ ಒಂದಾಗುತ್ತಿದ್ದಾರೆ. ಅದು ಯಾವ ಹಾಡು ಅಂತೀರಾ? 1983ರಲ್ಲಿ ತೆರೆಕಂಡ 'ಚಕ್ರವ್ಯೂಹ' ಚಿತ್ರದ ಅಂಬರೀಷ್ ಹಾಗೂ ಅಂಬಿಕಾ ಮಳೆಯಲಿ ನೆನೆಯುತ್ತಾ ಹೆಜ್ಜೆಹಾಕಿದ್ದ ಚಳಿ ಚಳಿ ತಾಳೆನು ಈ ಚಳಿಯಾ ಹಾಡು.
ಈ ಹಾಡಿಗೆ ರಮ್ಯಾ ಹಾಗೂ ಪುನೀತ್ ಈಗಾಗಲೆ ಪ್ರಾಕ್ಟೀಸ್ ಮಾಡಿದ್ದಾರೆ. ಇದೆಲ್ಲಾ ಅಂಬರೀಷ್ ಅವರ 60ನೇ ಹುಟ್ಟುಹಬ್ಬದ ನಿಮಿತ್ತ ನಡೆಯುತ್ತಿರುವ ಅಂಬಿ ಸಂಭ್ರಮಕ್ಕಾಗಿ ಸಿದ್ಧತೆ. ಅಂಬಿ ಸಂಭ್ರಮ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಚಳಿ ಚಳಿ ತಾಳೆನು ಹಾಡಿಗೆ ಇವರಿಬ್ಬರೂ ಹೆಜ್ಜೆ ಹಾಕಲಿದ್ದಾರೆ.
ಚಿ. ಉದಯಶಂಕರ್ ಸಾಹಿತ್ಯಕ್ಕೆ ಶಂಕರ್ ಮತ್ತು ಗಣೇಶ್ ಸಂಗೀತ ಸಂಯೋಜನೆ ಸೊಗಸಾಗಿದೆ. ಜಾನಕಿ ಮತ್ತು ಬಾಲಸುಬ್ರಹ್ಮಣ್ಯಂ ಗಾಯನಕ್ಕೆ ಅಂಬರೀಷ್ ಮತ್ತು ಅಂಬಿಕಾ ಜೀವತುಂಬಿದ್ದರು. ಈಗ ಅದೇ ಹಾಡಿಗೆ ರಮ್ಯಾ ಮತ್ತು ಪುನೀತ್ ಮತ್ತೊಮ್ಮೆ ಜೀವ ತುಂಬಲಿದ್ದಾರೆ.
"ಮಂಡ್ಯದ ಗಂಡು ಮುತ್ತಿನ ಚೆಂಡು" ಹಾಡಿಗೆ ಹೆಜ್ಜೆ ಹಾಕಲಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್. ಈ ಹಾಡಿಗೆ ಅವರೇ ಸೂಕ್ತ ನಟ ಎನ್ನಿಸುತ್ತದೆ. ಇನ್ನು ಕಿಚ್ಚ ಸುದೀಪ್ ಸೋಲೋ ಹಾಡು "ನಾನು ಯಾರು ಯಾವ ಊರು" ('ಅಂತ' ಚಿತ್ರ)ಹಾಡಿಗೆ ಹೆಜ್ಜೆ ಹಾಕಲಿದ್ದಾರೆ.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಜೊತೆ ಮೂವರು ಬೆಡಗಿಯರು ಸೊಂಟ ಬಳುಕಿಸಲಿದ್ದಾರೆ. ರಾಧಿಕಾ ಪಂಡಿತ್, ಐಂದ್ರಿತಾ ರೇ ಹಾಗೂ ಹರಿಪ್ರಿಯಾ ಮೂರು ಭಿನ್ನ ಹಾಡುಗಳಲ್ಲಿ ಶಿವಣ್ಣನ ಜೊತೆ ಹೆಜ್ಜೆ ಹಾಕಲಿದ್ದಾರೆ. ಇನ್ನು ನಮ್ಮ ಲೂಸ್ ಮಾದ ಯೋಗೀಶ್ 'ರಾಣಿ ಮಹಾರಾಣಿ' ಚಿತ್ರದ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ.
'ದಿಗ್ಗಜರು' ಚಿತ್ರದಲ್ಲಿ ಅಂಬರೀಷ್ ಹಾಗೂ ವಿಷ್ಣುವರ್ಧನ್ "ಕುಚಿಕು ಕುಚಿಕು" ಎಂದು ಹಾಡಿ ಕುಣಿದು ಎಲ್ಲರ ಮನಗೆದ್ದಿದ್ದರು. ಈಗ ಅದೇ ಹಾಡಿಗೆ ಕಿಚ್ಚ ಸುದೀಪ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೆಜ್ಜೆ ಹಾಕಿ ಅಭಿಮಾನಿಗಳನ್ನು ರಂಜಿಸಲಿದ್ದಾರೆ.
ಅಂಬಿ ಸಂಭ್ರಮಕ್ಕಾಗಿ ಅರಮನೆ ಮೈದಾನದಲ್ಲಿ (ಕೃಷ್ಣವಿಹಾರ್) ಅದ್ಧೂರಿ ವೇದಿಕೆ ಸಿದ್ಧವಾಗಿದೆ. ಇಂದು ಸಂಜೆ 6.30ಕ್ಕೆ ಕಾರ್ಯಕ್ರಮ ಶುರುವಾಗಲಿದ್ದು ಚಿತ್ರೋದ್ಯಮದ ಪರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಲಿ ಕಾರ್ಯಕ್ರಮ ನಡೆಸಿಕೊಡಲಿದೆ.
ಕನ್ನಡ ಚಿತ್ರರಂಗದ ಅಷ್ಟೂ ತಾರೆಗಳು ನರ್ತಿಸಿ, ನಗಿಸಿ ಅಭಿಮಾನಿಗಳಿಗೆ ರಸದೌತಣ ನೀಡಲಿದ್ದಾರೆ. ಈ ಸಾಂಸ್ಕೃತಿಕ ಕಾರ್ಯಕ್ರಮದ ನೇತೃತ್ವವನ್ನು ಎಸ್ ನಾರಾಯಣ್ ಹಾಗೂ ರಾಕ್ ಲೈನ್ ವೆಂಕಟೇಶ್ ವಹಿಸಿಕೊಂಡಿದ್ದಾರೆ. ಸಮಾರಂಭಕ್ಕೆ ಚಿತ್ರರಂಗದ ಗಣ್ಯರು ಸೇರಿದಂತೆ ರಾಜಕೀಯ ಮುತ್ಸದ್ದಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಈಗಾಗಲೆ ಅಂಬರೀಷ್ ಅವರು ಬಾಲಿವುಡ್ ನಟ ಶತ್ರುಘ್ನ ಸಿನ್ಹಾ, ಸೂಪರ್ ಸ್ಟಾರ್ ರಜನಿಕಾಂತ್, ಮೆಗಾ ಸ್ಟಾರ್ ಚಿರಂಜೀವಿ ಸೇರಿದಂತೆ ಬಹುತೇಕರನ್ನು ಖುದ್ದಾಗಿ ಆಹ್ವಾನಿಸಿದ್ದಾರೆ. ಇವರಲ್ಲಿ ಬಹುತೇಕರು ಸಮಾರಂಭಕ್ಕೆ ಬರುವ ಸಾಧ್ಯತೆಗಳಿವೆ. (ಒನ್ಇಂಡಿಯಾ ಕನ್ನಡ)