Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪುನೀತ್ ದೂಕುಡು ರೀಮೇಕ್ ಗೆ ಹೊಸ ಟೈಟಲ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಾಯಕ ನಟನಾಗಿ ತೆಲುಗಿನ ಬ್ಲಾಕ್ ಬಸ್ಟರ್ 'ದೂಕುಡು' ಚಿತ್ರವನ್ನು ಕನ್ನಡಕ್ಕೆ ತರುತ್ತಿರುವುದು ಗೊತ್ತೇ ಇದೆ. ಈ ರೀಮೇಕ್ ಚಿತ್ರಕ್ಕೆ ಕನ್ನಡ ಶೀರ್ಷಿಕೆ ಏನಿಡಬಹುದು ಎಂಬ ಕುತೂಹಲ ಅಭಿಮಾನಿಗಳನ್ನು ಮೊದಲಿಂದಲೂ ಕಾಡುತ್ತಿದೆ.
ಈಗಾಗಲೆ ಮೂರು ಬಾರಿ ಶೀರ್ಷಿಕೆ ಬದಲಾಗಿದೆ. ಮೊದಲು ಚಿತ್ರಕ್ಕೆ 'ರಾಜಕುಮಾರ' ಎಂದಿಡಲು ಚಿಂತಿಸಲಾಗಿತ್ತು. ಆದರೆ ಆ ಟೈಟಲ್ ಲಭ್ಯವಿಲ್ಲದ ಕಾರಣ ಅದನ್ನು ಕೈಬಿಡಲಾಯಿತು. ಬಳಿಕ 'ಅಧಿಪತಿ' ಎಂದುಕೊಂಡರು. ಅದ್ಯಾಕೋ ಸರಿ ಬರುತ್ತಿಲ್ಲ ಎಂದು 'ಅಶ್ವತ್ಥಾಮ' ಎಂದು ಬದಲಾಯಿಸಲಾಯಿತು. [ಪುನೀತ್ ಜತೆ ಸ್ಟೆಪ್ ಹಾಕಿದ ಮೋಹಕ ತಾರೆ ತ್ರಿಷಾ]
ತೆಲುಗು ಬಾಕ್ಸ್ ಆಫೀಸ್ ಚಿಂದಿ ಉಡಾಯಿಸಿದ 'ದೂಕುಡು' ರೀಮೇಕ್ ಚಿತ್ರಕ್ಕೆ ಕಡೆಗೆ ಕನ್ನಡ ಶೀರ್ಷಿಕೆ ಸಿಕ್ಕಂತಾಗಿದೆ. ಆಕ್ಷನ್ ಕಟ್ ಹೇಳುತ್ತಿರುವವರು ಕೆ.ಮಾದೇಶ್. 14 ರೀಲ್ಸ್ ಎಂಟರ್ ಟೈನ್ ಮೆಂಟ್ ಪ್ರೈ ಲಿ ಲಾಂಛನದಲ್ಲಿ ರಾಮ್ ಅಚಂಟ, ಗೋಪಿ ಅಚಂಟ, ಅನಿಲ್ ಸುಂಕರ, ಪ್ರವೀಣ್ ಕೊಲ್ಲ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಮೂಲಕ ಮೋಹಕ ಬೆಡಗಿ ತ್ರಿಷಾ ಕನ್ನಡಕ್ಕೆ ಅಡಿಯಿಟ್ಟಿದ್ದಾರೆ.
ಶ್ರೀನು ವೈಟ್ಲ ನಿರ್ದೇಶನದ 'ದೂಕುಡು' ಚಿತ್ರ ಬಾಕ್ಸ್ ಆಫೀಸಲ್ಲಿ ರು.100 ಕೋಟಿ ಗಳಿಸುವ ಮೂಲಕ ಟಾಲಿವುಡ್ ನಲ್ಲಿ ದಾಖಲೆ ನಿರ್ಮಿಸಿತ್ತು. ಹಳಿತಪ್ಪಿದ್ದ ಮಹೇಶ್ ಬಾಬು ಅವರ ವೃತ್ತಿಜೀವನದಲ್ಲಿ ಮಹತ್ತರ ತಿರುವು ನೀಡಿದ ಚಿತ್ರವಿದು. ನಂದಿ ಪ್ರಶಸ್ತಿ ಸೇರಿದಂತೆ ಫಿಲಂಫೇರ್ ಪ್ರಶಸ್ತಿಗಳಿಗೆ ಚಿತ್ರ ಪಾತ್ರವಾಗಿದೆ.
ಈ ಹಿಂದೆ ಮಹೇಶ್ ಬಾಬು ಅಭಿನಯದ 'ಒಕ್ಕಡು' ಚಿತ್ರ 'ಅಜಯ್' ಆಗಿ ಕನ್ನಡಕ್ಕೆ ರೀಮೇಕ್ ಆಗಿತ್ತು. ತೆಲುಗಿನ ಮತ್ತೊಂದು ಚಿತ್ರ 'ರೆಡಿ' ಕನ್ನಡಕ್ಕೆ 'ರಾಮ್' ಆಗಿ ರೀಮೇಕ್ ಆಗಿತ್ತು. ಈಗ ದೂಕುಡು ಚಿತ್ರದ ಸರದಿ. ಅಂದಹಾಗೆ ಮೂಲ ಚಿತ್ರದಲ್ಲಿ ಸಮಂತಾ ನಾಯಕಿ.
ಐದು ಹಾಡುಗಳಿರುವ ಈ ಚಿತ್ರಕ್ಕೆ ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ಎಸ್.ಎಸ್.ತಮನ್ ಸಂಗೀತ ನೀಡುತ್ತಿದ್ದಾರೆ. ಕನ್ನಡದಲ್ಲಿ ಇದು ಅವರ ಪ್ರಥಮ ಚಿತ್ರ. ಕೃಷ್ಣಕುಮಾರ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಎಂ.ಎಸ್.ರಮೇಶ್ ಸಂಭಾಷಣೆ ಬರೆದಿದ್ದಾರೆ. ಕೆ.ಎಸ್.ಚಂಪಕಧಾಮ(ಬಾಬು), ಎಸ್.ಕುಮಾರ್ ನಿರ್ಮಾಣ ನಿರ್ವಹಣೆ ಮಾಡುತ್ತಿದ್ದಾರೆ. (ಒನ್ಇಂಡಿಯಾ ಕನ್ನಡ)