Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗೆ ಆರ್ ಚಂದ್ರು ನಿರ್ದೇಶನ?
ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಬಳಿ ಸಾಲು ಸಾಲು ಸಿನಿಮಾಗಳಿವೆ. ಕೈ ತುಂಬ ಸಿನಿಮಾಗಳನ್ನು ಇಟ್ಟುಕೊಂಡಿರುವ ಶಿವಣ್ಣ ಈಗ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಅಂದ್ಹಾಗೆ ಕರುನಾಡ ಚಕ್ರವರ್ತಿಯ ಹೊಸ ಸಿನಿಮಾಗೆ ಆರ್ ಚಂದ್ರು ನಿರ್ದೇಶನ ಮಾಡುತ್ತಿದ್ದಾರೆ.
ಇತ್ತೀಚಿಗೆ ರಿಲೀಸ್ ಆದ 'ಐ ಲವ್ ಯು' ಚಿತ್ರದ ಸಕ್ಸಸ್ ನ ನಂತರ ಆರ್ ಚಂದ್ರು ಉಪೇಂದ್ರ ಅವರ ಜೊತೆ ಮತ್ತೊಂದು ಸಿನಿಮಾ ಮಾಡುತ್ತಾರೆ ಎಂದು ಹೇಳಲಾಗಿತ್ತು. ಆದ್ರೀಗ ಅದರ ಜೊತೆಗೆ ಶಿವಣ್ಣ ಅವರಿಗೂ ಆಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ. ಅಂದ್ಹಾಗೆ ಆರ್ ಚಂದ್ರು ಮತ್ತು ಶಿವಣ್ಣ ಈ ಮೊದಲು ಮೈಲಾರಿ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ.
ಶಿವರಾಜ್ ಕುಮಾರ್ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳಿಂದ ಪೂಜೆ
ಈಗ ಎರಡನೆ ಬಾರಿಗೆ ಮೈಲಾರಿ ಜೋಡಿ ಒಂದಾಗುವ ಸಾಧ್ಯತೆ ಇದೆ. ವಿಶೇಷ ಅಂದ್ರೆ ಈ ಚಿತ್ರಕ್ಕೆ ಜಂಗಮ ಎಂದು ಟೈಟಲ್ ಫಿಕ್ಸ್ ಮಾಡಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಈ ಚಿತ್ರವನ್ನು ಅಧಿಕೃತವಾಗಿ ಶಿವಣ್ಣ ಹುಟ್ಟುಹಬ್ಬ ಜುಲೈ 12ಕ್ಕೆ ಅನೌನ್ಸ್ ಮಾಡಲಿದ್ದಾರೆ. ಚಿತ್ರಕ್ಕೆ ಐ ಲವ್ ಯು ಚಿತ್ರದ ಸಂಗೀತ ನಿರ್ದೇಶಕ ಕಿರಣ್ ತೋಟಂಬೈಲು 'ಜಂಗಮ' ಚಿತ್ರಕ್ಕೂ ಸಂಗೀತ ನೀಡಲಿದ್ದಾರೆ.
ಕರುನಾಡ ಚಕ್ರವರ್ತಿ ಸದ್ಯ ಭುಜದ ಸರ್ಜರಿಗಾಗಿ ಲಂಡನ್ ಗೆ ತೆರಳಿದ್ದಾರೆ. ಈಗಾಗಲೆ ಶಿವಣ್ಣ ಅವರಿಗೆ ಸರ್ಜರಿ ಮಾಡಲಾಗಿದ್ದು ರೆಸ್ಟ್ ನಲ್ಲಿದ್ದಾರೆ. ಶಿವಣ್ಣ ಸಂಪೂರ್ಣ ಗುಣಮುಖರಾದ ನಂತರ 'ಜಂಗಮ' ಸಿನಿಮಾ ಪ್ರಾರಂಭವಾಗಲಿದೆ. ಶಿವಣ್ಣ ಸದ್ಯ 'ದ್ರೋಣ' ಚಿತ್ರದ ಚಿತ್ರೀಕರಣ ಮುಗಿಸಿದ್ದಾರೆ. ಜೊತೆಗೆ ಇನ್ನು ಹೆಸರಿಡದ ಪಿ ವಾಸು ನಿರ್ದೇಶನದ ಚಿತ್ರವನ್ನು ಕೂಡ ಕಂಪ್ಲೀಟ್ ಮಾಡಿದ್ದಾರೆ.
ಸದ್ಯ ಎ ಹರ್ಷ ನಿರ್ದೇಶನದ 'ಭಜರಂಗಿ-2' ಚಿತ್ರದಲ್ಲಿ ಶಿವಣ್ಣ ಬ್ಯುಸಿಯಾಗಿದ್ದರು. ಈಗಾಗಲೆ 'ಭಜರಂಗಿ-2' ಚಿತ್ರದ ಚಿತ್ರೀಕರಣ ಪ್ರಾರಂಭವಾಗಿತ್ತು. ಆದ್ರೆ ಶಿವಣ್ಣ ಸರ್ಜರಿಗೆಂದು ಲಂಡನ್ ಹೋದ ಕಾರಣ ಚಿತ್ರೀಕರಣಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ. ಸೆಪ್ಟಂಬರ್ ನಿಂದ ಶಿವಣ್ಣ ಮತ್ತೆ ಚಿತ್ರೀಕರಣದಲ್ಲಿ ಭಾಗಿಯಾಲಿದ್ದು ಮೊದಲು 'ಭಜರಂಗಿ-2' ಚಿತ್ರೀಕರಣದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.