Don't Miss!
- Finance ಅಯೋಧ್ಯೆಯಲ್ಲಿ ಓಲಾ ಕ್ಯಾಬ್ ಸೇವೆ ಆರಂಭ
- News Samsung: ಮಾರುಕಟ್ಟೆ ಗ್ರ್ಯಾಂಡ್ ಎಂಟ್ರಿ ನೀಡಿದೆ ನ್ಯೂ ಫೋನ್
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಹುಭಾಷಾ ಚಿತ್ರ ನಿರ್ಮಾಣಕ್ಕೆ ಕೈಹಾಕಿದ ಕನಕಪುರ ಶ್ರೀನಿವಾಸ್
'ಭಜರಂಗಿ ಭಾಯ್ ಜಾನ್' ಮತ್ತು 'ಬಾಹುಬಲಿ' ಚಿತ್ರಗಳ ವಿತರಣೆ ಹಕ್ಕು ಪಡೆದು ಯಶಸ್ಸು ಕಂಡಿರುವ ಆರ್.ಎಸ್.ಪ್ರೊಡಕ್ಷನ್ಸ್ ನಿರ್ಮಾಣ ಸಂಸ್ಥೆಯ ಕನಕಪುರ ಶ್ರೀನಿವಾಸ್ ಮತ್ತು ಕೆ.ಪಿ.ಶ್ರೀಕಾಂತ್ ಫುಲ್ ಝೂಮ್ ನಲ್ಲಿದ್ದಾರೆ.
ಅವರ ನಿರ್ಮಾಣದಲ್ಲಿ ಪವನ್ ಒಡೆಯರ್ ನಿರ್ದೇಶನದ 'ಜೆಸ್ಸಿ' ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಿದೆ. ಆರ್.ಎಸ್.ಪ್ರೊಡಕ್ಷನ್ ಬ್ಯಾನರ್ ನಲ್ಲಿನ ಯೋಗರಾಜ್ ಭಟ್ ನಿರ್ದೇಶನದ 'ದನ ಕಾಯೋನು' ಚಿತ್ರೀಕರಣ ಪೂರ್ಣಗೊಂಡಿದೆ. ['ಬಾಹುಬಲಿ' ವಿತರಣಾ ಹಕ್ಕಿನ ಹಿಂದಿದೆ ಮಾಸ್ಟರ್ ಪ್ಲಾನ್!]
ನಿರ್ದೇಶಕ ಚೇತನ್ ಮತ್ತು ಧ್ರುವ ಸರ್ಜಾ ಕಾಂಬಿನೇಷನ್ ನಲ್ಲಿ 'ಬಹದ್ದೂರ್' ಚಿತ್ರ ನಿರ್ಮಾಣ ಮಾಡಿದ್ದ ಇದೇ ಸಂಸ್ಥೆ ಇದೀಗ ಅದೇ ಚೇತನ್ ಮತ್ತು ಧ್ರುವ ಸರ್ಜಾಗಾಗಿ 'ಭರ್ಜರಿ' ಚಿತ್ರ ನಿರ್ಮಾಣ ಮಾಡುತ್ತಿದೆ.
ಈ ಮೂರು ಬಿಗ್ ಬಜೆಟ್ ಚಿತ್ರಗಳ ಜೊತೆಗೆ ಆರ್.ಎಸ್.ಪ್ರೊಡಕ್ಷನ್ಸ್ ಹೊಸ ಸಾಹಸಕ್ಕೆ ಕೈಹಾಕಿದೆ. ಅದೇನೆಂದರೆ, ನಾಗಶೇಖರ್ ಕಥೆ-ಚಿತ್ರಕಥೆ ಬರೆದು ಸಂಭಾಷಣೆ-ನಿರ್ದೇಶನ ಮಾಡುವುದಕ್ಕೆ ಹೊರಟಿರುವ ಬರೋಬ್ಬರಿ ನಾಲ್ಕು ಭಾಷೆಗಳಲ್ಲಿ ರೆಡಿಯಾಗುವ 'ಗಡಿಯಾರ' ಚಿತ್ರದ ಚಿತ್ರೀಕರಣಕ್ಕೆ ಚಾಲನೆ ನೀಡಲಿದೆ. [ಕರ್ನಾಟಕದಲ್ಲೂ ಇತಿಹಾಸ ನಿರ್ಮಿಸಿದ 'ಬಾಹುಬಲಿ']
ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ 'ಗಡಿಯಾರ' ಏಕಕಾಲಕ್ಕೆ ರೆಡಿಯಾಗಲಿದೆ. ದಕ್ಷಿಣ ಭಾರತದ ಖ್ಯಾತ ನಟಿ ತಾಪ್ಸಿ ಈ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ನಾಯಕ ಪಾತ್ರಕ್ಕೆ ಯಾರೂ ಇನ್ನೂ ಕನ್ಫರ್ಮ್ ಆಗಿಲ್ಲ.