Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ದುನಿಯಾ ವಿಜಯ್ ಮೇಲೆ ಏನಿದು ಹೊಸ ಅಪವಾದ.?
ಆರ್.ಚಂದ್ರು ಆಕ್ಷನ್ ಕಟ್ ಹೇಳುತ್ತಿರುವ 'ಕನಕ' ಹಾಗೂ ಪ್ರೀತಂ ಗುಬ್ಬಿ ನಿರ್ದೇಶನ ಮಾಡುತ್ತಿರುವ 'ಜಾನಿ ಜಾನಿ ಎಸ್ ಪಪ್ಪಾ' ಸಿನಿಮಾದಲ್ಲಿ ನಟ ದುನಿಯಾ ವಿಜಯ್ ಅಭಿನಯಿಸುತ್ತಿದ್ದಾರೆ. ಈ ಎರಡು ಚಿತ್ರಗಳಲ್ಲಿ ನಟ ದುನಿಯಾ ವಿಜಯ್ ಗೆ ನಟಿ ರಚಿತಾ ರಾಮ್ ನಾಯಕಿ ಎಂದು ಈ ಹಿಂದೆ ಸುದ್ದಿ ಆಗಿತ್ತು.
ಆದ್ರೀಗ, ಈ ಎರಡೂ ಚಿತ್ರಗಳಲ್ಲಿ ರಚಿತಾ ರಾಮ್ ನಟಿಸುತ್ತಿಲ್ಲ. 'ಕನಕ' ಹಾಗೂ 'ಜಾನಿ ಜಾನಿ ಎಸ್ ಪಪ್ಪಾ' ಚಿತ್ರಗಳಿಂದ ನಟಿ ರಚಿತಾ ರಾಮ್ ಔಟ್ ಆಗಲು ದುನಿಯಾ ವಿಜಯ್ ಕಾರಣ ಎಂಬ ಗುಲ್ಲು ಗಾಂಧಿನಗರದಲ್ಲಿ ಗಿರಕಿ ಹೊಡೆಯುತ್ತಿದೆ.
ಗುಳಿಕೆನ್ನೆ ಚೆಲುವೆಗೆ ಅದೃಷ್ಟ ಮತ್ತೆ ಕೈ ಕೊಟ್ಟಿದೆ.!
ದುನಿಯಾ ವಿಜಯ್ ಬಗ್ಗೆ ಕೇಳಿ ಬರುತ್ತಿರುವ ಈ ಅಪವಾದ ನಿಜವೇ.? ಉತ್ತರ ಇಲ್ಲಿದೆ ಓದಿರಿ...
ನನಗೂ-ಅದಕ್ಕೂ ಸಂಬಂಧ ಇಲ್ಲ
''ನಮ್ಮ ತಾಯಾಣೆಗೂ ರಚಿತಾ ರಾಮ್ ಆ ಎರಡೂ ಚಿತ್ರಗಳಿಂದ ಹೊರ ಹೋಗೋಕೆ ನಾನು ಕಾರಣವಲ್ಲ'' ಎಂದು 'ಉದಯವಾಣಿ' ಪತ್ರಿಕೆಗೆ ನಟ ದುನಿಯಾ ವಿಜಯ್ ಸ್ಪಷ್ಟಪಡಿಸಿದ್ದಾರೆ.
ದುನಿಯಾ ವಿಜಯ್ ಚಿತ್ರದಿಂದ ರಚಿತಾ ರಾಮ್ ಹೊರ ಬಂದಿದ್ದೇಕೆ?
ನನಗೆ ಗೊತ್ತಿರುವುದು ಇಷ್ಟೇ.!
''ಜಾನಿ ಜಾನಿ ಎಸ್ ಪಪ್ಪಾ' ಚಿತ್ರಕ್ಕೆ ರಮ್ಯಾ ಬದಲು ಯಾರನ್ನ ಆಯ್ಕೆ ಮಾಡಬೇಕು ಎಂಬ ಚರ್ಚೆ ನಡೆಯಿತು. ಈ ನಡುವೆ 'ಕನಕ' ಚಿತ್ರಕ್ಕೂ ರಚಿತಾ ರಾಮ್ ಆಯ್ಕೆ ಆದರು. ನಂತರ ಅವರು ಆ ಸಿನಿಮಾದಲ್ಲಿ ನಟಿಸುತ್ತಿಲ್ಲ ಎನ್ನುವುದಷ್ಟೇ ನನಗೆ ಗೊತ್ತು'' ಎನ್ನುತ್ತಾರೆ ನಟ ದುನಿಯಾ ವಿಜಯ್.
ಮತ್ತೆ 'ಜಾನಿ' ಜಪ ಮಾಡಲು ಆರಂಭಿಸಿದ ದುನಿಯಾ ವಿಜಯ್-ಪ್ರೀತಂ ಗುಬ್ಬಿ
ನಾಯಕಿ ವಿಚಾರದಲ್ಲಿ ಮೂಗು ತೂರಿಸುವುದಿಲ್ಲ
''ಯಾವುದೇ ಸಿನಿಮಾ ಆಗಿರಲಿ... ನಾನು ನಾಯಕಿ ಆಯ್ಕೆ ವಿಚಾರದಲ್ಲಿ ಮೂಗು ತೂರಿಸುವುದಿಲ್ಲ'' ಎಂದು ನಟ ದುನಿಯಾ ವಿಜಯ್ ಹೇಳಿದ್ದಾರೆ.
ಗಲ್ಲಿ ಗಾಸಿಪ್ ಏನು.?
'ಜಾನಿ ಜಾನಿ ಎಸ್ ಪಪ್ಪಾ' ಚಿತ್ರದಲ್ಲಿ ವಿಜಯ್ ಮತ್ತು ರಚಿತಾ ಮೊದಲ ಬಾರಿಗೆ ಒಟ್ಟಿಗೆ ನಾಯಕ-ನಾಯಕಿ ಆಗಿ ನಟಿಸಬೇಕಿತ್ತು. ಅದೇ ಗ್ಯಾಪ್ ನಲ್ಲಿ 'ಕನಕ' ಚಿತ್ರಕ್ಕೂ ರಚಿತಾ ಆಯ್ಕೆ ಆದರು. 'ಕನಕ' ಸಿನಿಮಾ ಮೊದಲು ಶುರುವಾಗಿರುವುದರಿಂದ, ಮೊದಲು ಬಿಡುಗಡೆ ಆಗುತ್ತದೆ. ಆಗ 'ಜಾನಿ ಜಾನಿ ಎಸ್ ಪಪ್ಪಾ' ಚಿತ್ರದಲ್ಲಿ ಫ್ರೆಶ್ ಫೀಲ್ ನೀಡುವುದಿಲ್ಲ ಎಂಬ ಕಾರಣಕ್ಕೆ ರಚಿತಾ ಅವರನ್ನು 'ಕನಕ' ಚಿತ್ರದಿಂದ ಬದಲಾಯಿಸುವುದಕ್ಕೆ ದುನಿಯಾ ವಿಜಯ್ ಹೇಳಿದ್ರಂತೆ. ಇದರಿಂದ ಬೇಸರಗೊಂಡ ರಚಿತಾ, ಎರಡೂ ಚಿತ್ರಗಳಿಂದ ಹೊರನಡೆದರಂತೆ ಎಂಬುದು ಗಲ್ಲಿ ಗಾಸಿಪ್ಪು.