Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿಟ್ಟೆ ವಸಿಷ್ಠಗೆ ನಾಯಕಿಯಾದ ನಟಿ ರಚಿತಾ ರಾಮ್
ಇತ್ತೀಚಿಗೆ 'ಆಯುಷ್ಮಾನ್ ಭವ' ಸಿನಿಮಾದಲ್ಲಿ ರಚಿತಾ ರಾಮ್ ನಾಯಕಿಯಾಗಿದ್ದಾರೆ. ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಜೊತೆಗೆ ಮೊದಲ ಬಾರಿಗೆ ರಚಿತಾ ಜೋಡಿಯಾಗಿದ್ದಾರೆ. ಈ ಸಿನಿಮಾದ ನಂತರ ಮತ್ತೊಂದು ಹೊಸ ಸಿನಿಮಾಗೆ ರಚಿತಾ ಓಕೆ ಹೇಳಿದ್ದಾರೆ.
'ಟಗರು' ಚಿಟ್ಟೆ ಖ್ಯಾತಿಯ ನಟ ವಸಿಷ್ಠ ಸಿಂಹ ಮುಂದಿನ ಸಿನಿಮಾಗೆ ರಚಿತಾ ರಾಮ್ ನಾಯಕಿಯಾಗಿದ್ದಾರೆ. ವಿಶೇಷ ಅಂದರೆ, ಇದೇ ಮೊದಲ ಬಾರಿಗೆ ವಸಿಷ್ಟ ಜೊತೆಗೆ ರಚಿತಾ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾಗೆ 'ಪಂಥ' ಎಂದು ಶೀರ್ಷಿಕೆ ಇಡಲಾಗಿದೆ.
ಮೆಟ್ರೋ ಪ್ರಯಾಣ ಮಾಡಿ, ಆಸೆ ಈಡೇರಿಸಿಕೊಂಡ ರಚಿತಾ
'ಗೂಗಲ್' ಸಿನಿಮಾದ ನಂತರ ಗೀತರಚನೆಕಾರ ವಿ ನಾಗೇಂದ್ರ ಪ್ರಸಾದ್ ನಿರ್ದೇಶನ ಮಾಡುತ್ತಿರುವ ಸಿನಿಮಾವಾಗಿದೆ. ಮೊದಲ ಬಾರಿಗೆ ರಚಿತಾ ರಾಮ್ ಗೆ ನಾಗೇಂದ್ರ ಪ್ರಸಾದ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಡಿಬೇಟ್ ಆನ್ ದಿ ಬೆಟ್ ಎಂಬ ಸಬ್ ಟೈಟಲ್ ಚಿತ್ರಕ್ಕೆ ಇಟ್ಟಿದ್ದು, ಕಥೆಯ ಮೇಲೆ ನಿರೀಕ್ಷೆ ಹುಟ್ಟಿಕೊಂಡಿದೆ.
ಮುಂದಿನ ತಿಂಗಳು 'ಪಂಥ' ಸಿನಿಮಾ ಲಾಂಚ್ ಆಗಲಿದೆ. ಸಿನಿಮಾಗೆ ನಾಗೇಂದ್ರ ಪ್ರಸಾದ್ ಸಾಹಿತ್ಯ ಇರಲಿದೆ. ಎನ್ ಶ್ರೀಧರ್ ಮತ್ತು ಎಲ್ ಅಶ್ವತ್ ನಾರಾಯಣ್ ಸಿನಿಮಾಗೆ ಬಂಡವಾಳ ಹಾಕಿದ್ದಾರೆ.
ಪ್ರೇಮ್ ಬರ್ತ್ ಡೇ ಪಾರ್ಟಿಯಲ್ಲಿ ರಚಿತಾ ರಾಮ್ ಮಸ್ತ್ ಡ್ಯಾನ್ಸ್
ಈ ಸಿನಿಮಾಗಳ ಜೊತೆಗೆ ಧನಂಜಯ್ ನಟನೆಯ ಸಿನಿಮಾಗೆ ರಚಿತಾ ರಾಮ್ ನಾಯಕಿಯಾಗಿದ್ದಾರೆ. 'ಏಪ್ರಿಲ್' ಅವರ ಮುಂದಿನ ಸಿನಿಮಾಗಳಲ್ಲಿ ಒಂದು.