Don't Miss!
- Automobiles ಫ್ಯಾಮಿಲಿ ಕಾರಾಗಿ ಜನರ ಮನಗೆದ್ದ ಹ್ಯುಂಡೈ ಅಲ್ಕಾಜರ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- News Tirupati Darshan Ticket: ತಿರುಪತಿ ದರ್ಶನಕ್ಕೆ ವಿಶೇಷ ಟಿಕೆಟ್ ಬಿಡುಗಡೆ: ಪೂಜಾ ಸೇವೆಯಲ್ಲಿ ಬಾಗವಹಿಸಲು ದಿನಾಂಕ ಆಯ್ಕೆ ಮಾಡಿ...
- Finance ಕಬ್ಬನ್ ಪಾರ್ಕ್ನಲ್ಲಿ ಮರ ಅಪ್ಪಿಕೊಳ್ಳುವ ಕಾರ್ಯಕ್ರಮಕ್ಕೆ ತಲಾ 1,500 ರೂ. ಶುಲ್ಕವಿಟ್ಟ ಕಂಪನಿ!
- Technology Itel: ಐಟೆಲ್ ಸೂಪರ್ ಗುರು 4G ಫೋನ್ ಲಾಂಚ್! ಯುಪಿಐ ಬೆಂಬಲ
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಮಗೆ ಮೋಸ ಆಗಿದೆ, ನಾವು ಯಾರಿಗೂ ಮೋಸ ಮಾಡಿಲ್ಲ: ರಾಧಿಕಾ ಕುಮಾರಸ್ವಾಮಿ
ನಟಿ ರಾಧಿಕಾ ಕುಮಾರಸ್ವಾಮಿ ಹೆಸರು, ವಂಚನೆ ಪ್ರಕರಣ ಆರೋಪಿ ಸ್ವಾಮಿ ಅಲಿಯಾಸ್ ಯುವರಾಜ್ ಜೊತೆಗೆ ಥಳುಕು ಹಾಕಿಕೊಂಡಿದೆ.
ಆರ್ಎಸ್ಎಸ್ ಮುಖಂಡ ಎಂದು ಹೇಳಿಕೊಂಡು ಬಿಜೆಪಿಯ ದೊಡ್ಡ-ದೊಡ್ಡ ಮುಖಂಡರಿಗೆ ಕೋಟ್ಯಂತರ ರೂಪಾಯಿ ಹಣ ವಂಚಿಸಿದ್ದ ಸ್ವಾಮಿ ಅಲಿಯಾಸ್ ಯುವರಾಜ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು ಪ್ರಕರಣದ ತನಿಖೆ ವೇಳೆ ಸ್ವಾಮಿ ಖಾತೆಯಿಂದ ರಾಧಿಕಾ ಕುಮಾರಸ್ವಾಮಿ ಹಾಗೂ ಅವರ ಸಹೋದರ ನ ಖಾತೆಗೆ ಹಣ ವರ್ಗಾವಣೆ ಆಗಿರುವುದು ಬಹಿರಂಗವಾಗಿದೆ.
RSS ಮುಖಂಡ ಅಂತೇಳಿ ಕೋಟಿಗಟ್ಟಲೆ ವಂಚಿಸಿದ ಯುವರಾಜ್: ಖ್ಯಾತ ನಟಿ, ಸಹೋದರನ ಹೆಸರು ಲಿಂಕ್?
ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಸಹೋದರ ರವಿರಾಜ್ ಜೊತೆಗೆ ಸುದ್ದಿಗೋಷ್ಠಿ ನಡೆಸಿದ ರಾಧಿಕಾ ಕುಮಾರಸ್ವಾಮಿ ಸ್ವಾಮಿ ಹಾಗೂ ತಮ್ಮ ಪರಿಚಯ ಹಾಗೂ ತಮ್ಮ ಮೇಲೆ ಎದ್ದಿರುವ ಆರೋಪಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಖಾತೆಗೆ 15 ಲಕ್ಷ ಹಣ ಬಂದಿದೆ ಅಷ್ಟೆ: ರಾಧಿಕಾ
'ಸಿನಿಮಾ ಮಾಡುವುದಾಗಿ ಸ್ವಾಮಿ ನಮ್ಮ ಬಳಿಗೆ ಬಂದಿದ್ದು, ಅವರ ಮಗಳ ಹೆಸರಿನಲ್ಲಿಯೇ ಬ್ಯಾನರ್ ಇತ್ತು. ಹಾಗಾಗಿ ನಾನು ಸಿನಿಮಾ ಮಾಡಲು ಒಪ್ಪಿಕೊಂಡೆ. ಅಡ್ವಾನ್ಸ್ ರೂಪದಲ್ಲಿ ಸ್ವಾಮಿಯು ತನ್ನ ಖಾತೆಯಿಂದ 15 ಲಕ್ಷ ಹಣವನ್ನು ಬೇರೆ ಖಾತೆಯಿಂದ 60 ಲಕ್ಷ ಹಣವನ್ನು ನನ್ನ ಖಾತೆಗೆ ವರ್ಗಾವಣೆ ಮಾಡಿದ್ದಾರೆ' ಎಂದು ಹೇಳಿದರು.
ಸ್ವಾಮಿಯ ಬಗ್ಗೆ ನಮಗೆ ಮಾಹಿತಿ ಇರಲಿಲ್ಲ: ರಾಧಿಕಾ
ಸ್ವಾಮಿಯ ಇತರೆ ಯಾವುದೇ ಕಾರ್ಯಗಳ ಬಗ್ಗೆ ನನಗೆ ಮಾಹಿತಿ ಇರಲಿಲ್ಲ. ಆತನ ಬಂಧನವಾದಾಗಲೇ ಆತನ ನಿಜ ರೂಪ ನನಗೆ ಗೊತ್ತಾಗಿದ್ದು. ಆತ ವಾಟ್ಸ್ಆಪ್ಗಳಲ್ಲಿ ದೊಡ್ಡ-ದೊಡ್ಡ ವ್ಯಕ್ತಿಗಳೊಂದಿಗೆ ಚಿತ್ರಗಳನ್ನು ಹಾಕಿಕೊಳ್ಳುತ್ತಿದ್ದರು. ಅವರು ಜೋತಿಷಿ ಆಗಿದ್ದ ಕಾರಣ ಹಲವು ವರ್ಷಗಳಿಂದ ಅವರ ಪರಿಚಯ ನನಗೆ ಇತ್ತು ಎಂದರು ರಾಧಿಕಾ.
ನಮಗೆ ಮೋಸ ಆಗಿದೆ, ನಾವು ಮೋಸ ಮಾಡಿಲ್ಲ: ರಾಧಿಕಾ
ನಾವು ಯಾರಿಗೂ ಮೋಸ ಮಾಡುವಂತಾ ಕಾರ್ಯವನ್ನು ಈವರೆಗೆ ಮಾಡಿಲ್ಲ. ಇನ್ನೂ ನಮಗೇ ಜೀವನದಲ್ಲಿ ಮೋಸ ಆಗಿದೆಯೇ ಹೊರತು ನಾವು ಈ ವರೆಗೆ ಯಾರಿಗೂ ಮೋಸ ಮಾಡಿಲ್ಲ. ರಾಜಕೀಯ ಉದ್ದೇಶದಿಂದ ಆತನಿಂದ ಹಣವನ್ನು ನಾವು ಪಡೆದಿಲ್ಲ, ನಾವು ಸಹ ಆತನಿಗೆ ಹಣ ನೀಡಿಲ್ಲ ಎಂದಿದ್ದಾರೆ ರಾಧಿಕಾ ಕುಮಾರಸ್ವಾಮಿ.
|
ನಮಗೂ ಎಂಜಿನಿಯರಿಂಗ್ ಕಾಲೇಜಿಗೂ ಸಂಬಂಧವಿಲ್ಲ: ರಾಧಿಕಾ
ಎಂಜಿನಿಯರಿಂಗ್ ಕಾಲೇಜೊಂದಕ್ಕೆ ಹಣ ವರ್ಗಾವಣೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ರಾಧಿಕಾ ಕುಮಾರಸ್ವಾಮಿ. ದುರ್ಗಾಪರಮೇಶ್ವರಿ ಎಂಜಿನಿಯರಿಂಗ್ ಕಾಲೇಜಿಗೂ ನಮಗೂ ಯಾವುದೇ ಸಂಬಂಧವಿಲ್ಲ. ನಮ ಒಡೆತನದಲ್ಲಿ ಯಾವ ಕಾಲೇಜುಗಳು ಸಹ ಇಲ್ಲ. ಸ್ವಾಮಿಗೂ ನಮಗೂ ರಾಜಕೀಯವಾದ ಅಥವಾ ಬೇರೆ ಹಣಕಾಸು ಸಂಬಂಧ ಏನೂ ಇಲ್ಲ ಎಂದು ಪದೇ-ಪದೇ ಹೇಳಿದರು ರಾಧಿಕಾ ಕುಮಾರಸ್ವಾಮಿ.