Don't Miss!
- News Kalaburagi Rain: ಸೂರ್ಯನಗರಿ ಕಲಬುರಗಿಯಲ್ಲಿ ಭಾರೀ ಗಾಳಿ, ಆಲಿಕಲ್ಲು ಸಮೇತ ದಾರಾಕಾರ ಮಳೆ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾನವೀಯತೆ ಮೆರೆದ ರಾಧಿಕಾ ಕುಮಾರಸ್ವಾಮಿ: ಕಷ್ಟದಲ್ಲಿರುವ ಜನರಿಗೆ ಆಹಾರ ಪದಾರ್ಥಗಳ ಪೂರೈಕೆ
ಇಡೀ ಜಗತ್ತೇ ಈಗ ಅಕ್ಷರಶಃ ತಲ್ಲಣದ ಸ್ಥಿತಿಯಲ್ಲಿದೆ. ಕೊರೊನಾ ವೈರಸ್ ಹಾವಳಿಯಿಂದ ಜನರು ತತ್ತರಿಸಿದ್ದಾರೆ. ಅದರಲ್ಲಿಯೂ ಬಡವರು, ದಿನಗೂಲಿ ಕಾರ್ಮಿಕರ ಬದುಕು ತೀರಾ ಸಂಕಷ್ಟದಲ್ಲಿದೆ. ಅವರಿಗೆ ಈಗ ದುಡಿಮೆಯಿಲ್ಲ. ಒಂದು ದಿನ ದುಡಿದರಷ್ಟೇ ಅಂದಿನ ಹೊಟ್ಟೆ ತುಂಬುವುದು ಎನ್ನುವ ಸ್ಥಿತಿಯಲ್ಲಿದ್ದವರಿಗೆ ಈಗ ಉದ್ಯೋಗವೂ ಇಲ್ಲ, ಸಂಪಾದನೆಯೂ ಇಲ್ಲ. ಹೀಗಿರುವಾಗ ಮನೆಯೊಳಗೇ ಕುಳಿತುಕೊಳ್ಳಬೇಕಾದ ಸ್ಥಿತಿಯಲ್ಲಿ ಅವರ ಹೊಟ್ಟೆಪಾಡೇನು?
ಹೀಗೆ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಲು ಅನೇಕರು ನೆರವಾಗುತ್ತಿದ್ದಾರೆ. ಕೆಲವರು ಆರ್ಥಿಕ ನೆವರು ನೀಡುತ್ತಿದ್ದರೆ, ಇನ್ನು ಅನೇಕರು ಅವರಿಗೆ ತಮ್ಮಿಂದ ಸಾಧ್ಯವಾದಷ್ಟು ದವಸ ಧಾನ್ಯ ಮುಂತಾದವುಗಳನ್ನು ವಿತರಣೆ ಮಾಡುವ ಮೂಲಕ ನೆರವಾಗುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಬೀದಿಗಿಳಿದು ಜನರಿಗೆ, ಜಾನುವಾರುಗಳಿಗೆ ಸಹಾಯ ಮಾಡುತ್ತಿದ್ದಾರೆ. ಅವರ ಸಾಲಿಗೆ ನಟಿ ರಾಧಿಕಾ ಕುಮಾರಸ್ವಾಮಿ ಕೂಡ ಸೇರಿಕೊಂಡಿದ್ದಾರೆ.
ನಿಮ್ಮ ಹೆಸರು ಕೂಡ ನೆನಪಿರೊಲ್ಲ, ಹಾಗೆ ಆಗ್ತೀರಿ: ಎಚ್ಚರಿಕೆ ನೀಡಿದ ಕ್ರೇಜಿಸ್ಟಾರ್ ರವಿಚಂದ್ರನ್
ಕಷ್ಟದಲ್ಲಿರುವ ಜನರಿಗೆ ಸಹಾಯ
ಲಾಕ್ಡೌನ್ ಕಾರಣದಿಂದ ಅನೇಕ ಜನರ ಬದುಕು ಬೀದಿಗೆ ಬಂದಿದೆ. ಸಂಚಾರಿ ವಿಜಯ್, ಶೈನ್ ಶೆಟ್ಟಿ, ದೀಪಿಕಾ ದಾಸ್, ಸಾಧು ಕೋಕಿಲ ಮುಂತಾದ ಕಲಾವಿದರು ಬಡಜನರು ಹೆಚ್ಚಾಗಿ ಇರುವ ಸ್ಥಳಗಳಿಗೆ ತೆರಳಿ ಆಹಾರ ಸಾಮಗ್ರಿಗಳನ್ನು ಹಂಚುತ್ತಿದ್ದಾರೆ. ರಾಧಿಕಾ ಕುಮಾರಸ್ವಾಮಿ ಕೂಡ ಈ ಮಹತ್ವದ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ.
ವಿಡಿಯೋ ಹಂಚಿಕೊಂಡ ರಾಧಿಕಾ ಕುಮಾರಸ್ವಾಮಿ
ತಮ್ಮ ಕಾರ್ಯದ ಬಗ್ಗೆ ರಾಧಿಕಾ ಕುಮಾರಸ್ವಾಮಿ ಹೆಮ್ಮೆ ಮತ್ತು ಖುಷಿಯನ್ನು ಹಂಚಿಕೊಂಡಿದ್ದಾರೆ. ಬೆಂಗಳೂರಿನ ಸ್ಥಳವೊಂದರಲ್ಲಿ ಜನರಿಗೆ ಆಹಾರ ಪದಾರ್ಥಗಳನ್ನು ವಿತರಿಸುವ ವಿಡಿಯೋವನ್ನು ಅವರು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದು ನಮ್ಮ ಜವಾಬ್ದಾರಿ
ಮನುಷ್ಯರಾಗಿ ನಾವು ನಮ್ಮ ನಡುವಿನ ಅತಿ ಸಂಕಷ್ಟದಲ್ಲಿರುವ ಜನರಿಗೆ ಅವರ ಅಗತ್ಯದ ಸಮಯದಲ್ಲಿ ಸಹಾಯ ಮಾಡುವುದು ನಮ್ಮ ಜವಾಬ್ದಾರಿ ಎಂದು ನನಗೆ ಅನಿಸಿದೆ ಎಂಬುದಾಗಿ ರಾಧಿಕಾ ಕುಮಾರಸ್ವಾಮಿ ಹೇಳಿದ್ದಾರೆ.
ಜನರಿಗೆ ಸಹಾಯ ಮಾಡುವ ಉದ್ದೇಶ
ಹೀಗೆ ಕಷ್ಟದಲ್ಲಿರುವ ಜನರಿಗೆ ನೆರವಾಗುವ ಉದ್ದೇಶದಿಂದ ಅವರು ಬೆಂಗಳೂರಿನ ಬಡ ಜನರಿಗೆ ಆಹಾರ ಪದಾರ್ಥಗಳನ್ನು ನೀಡಿದ್ದಾಗಿ ತಿಳಿಸಿದ್ದಾರೆ. ಈ ಮೂಲಕ ರಾಧಿಕಾ, ಅನೇಕರಿಗೆ ಮಾದರಿಯಾಗುವ ಮಹತ್ಕಾರ್ಯವನ್ನು ಮಾಡಿದ್ದಾರೆ.
ಸಾಮಾಜಿಕ ಅಂತರ ಕಾಪಾಡಲು ಮನವಿ
ರಾಧಿಕಾ ಆಹಾರ ಪದಾರ್ಥಗಳ ವಿತರಣೆಗೆ ತೆರಳಿದ್ದಾಗ ನೂರಾರು ಮಂದಿ ಸರದಿಯಲ್ಲಿ ಸಾಲುಗಟ್ಟಿ ನಿಂತಿರುವ ದೃಶ್ಯ ಕಂಡುಬಂತು. ಪದಾರ್ಥಗಳನ್ನು ಪಡೆದುಕೊಳ್ಳುವಾಗ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ರಾಧಿಕಾ ಮನವಿ ಮಾಡಿದರು.
ಮಾಸ್ಕ್ ಹಾಕಿಯೇ ಫೋಟೊ ತೆಗೆಸಿಕೊಂಡರು
ರಾಧಿಕಾ ಅವರಿಂದ ಆಹಾರ ಪದಾರ್ಥಗಳನ್ನು ಪಡೆದುಕೊಂಡ ಜನರೂ ಖುಷಿಗೊಂಡರು. ನೀರು ಕೊಡಲೇ, ಏನಾದರೂ ಕುಡಿಯಿರಿ ಎಂದು ಉಪಚಾರ ಮಾಡಿದರು. ಅದಕ್ಕೆ ರಾಧಿಕಾ, 'ತೊಂದರೆಯಿಲ್ಲ, ಈಗಷ್ಟೇ ನೀರು ಕುಡಿದು ಬಂದಿದ್ದೇನೆ ಎಂದರು. ಇನ್ನು ಅನೇಕರು ಮುಖಕ್ಕೆ ಮಾಸ್ಕ್ ಧರಿಸಿಯೇ ಅವರೊಂದಿಗೆ ಫೋಟೊ ತೆಗೆಸಿಕೊಂಡರು.