Don't Miss!
- News India Rain: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆ, ಹಿಮಪಾತ ಸಾಧ್ಯತೆ: ಭಾರತದ ಈ ಭಾಗದಲ್ಲಿ ತಂಪೆರೆಯಲಿರುವ ವರುಣ
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Technology Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜಗ್ಗೇಶ್ ನಟನೆಯ 'ರಂಗನಾಯಕ'ನಿಗೆ ರಾಧಿಕಾ ಕುಮಾರಸ್ವಾಮಿ ನಾಯಕಿ?
ಸಾಕಷ್ಟು ಕುತೂಹಲ ಕೆರಳಿಸಿರುವ ನವರಸನಾಯಕ ಜಗ್ಗೇಶ್ ಮತ್ತು 'ಮಠ' ಗುರುಪ್ರಸಾದ್ ಜೋಡಿಯ ಮೂರನೇ ಸಿನಿಮಾ 'ರಂಗನಾಯಕ'ಕ್ಕೆ ಅದ್ಧೂರಿ ಚಾಲನೆ ನೀಡಿ ಐದು ತಿಂಗಳೇ ಕಳೆದಿದೆ. ಚಿತ್ರದ ಟೀಸರ್ ಬಿಡುಗಡೆಯ ಬಳಿಕ ಮತ್ತೆ ಸಿನಿಮಾದ ಸುದ್ದಿಯೇ ಇರಲಿಲ್ಲ. ಈ ನಡುವೆ ಮತ್ತೆ ಸುದ್ದಿಗೆ ಬಂದಿದ್ದ ಸಿನಿಮಾ, ಏಪ್ರಿಲ್ 2ರಿಂದ ಚಿತ್ರೀಕರಣ ಆರಂಭಿಸುವ ಮಾಹಿತಿ ನೀಡಿತ್ತು.
ಆದರೆ ಸದ್ಯದ ಪರಿಸ್ಥಿತಿಯಲ್ಲಿ 'ರಂಗನಾಯಕ'ನ ಶೂಟಿಂಗ್ ಆರಂಭವಾಗುವುದು ಕಷ್ಟ. ಎರಡು ಯಶಸ್ವಿ ಸಿನಿಮಾಗಳ ಬಳಿಕ ದೂರವಾಗಿದ್ದ ಈ ಜೋಡಿ ಮತ್ತೆ ಒಂದಾಗಿರುವುದು ಸಿನಿಮಾ ಅಭಿಮಾನಿಗಳಿಗೆ ಖುಷಿ ನೀಡಿದೆ. ಅದ್ಭುತ ನಗುವಿನ ಹಬ್ಬದ ನಿರೀಕ್ಷೆಯಲ್ಲಿರುವ ಸಿನಿಮಾ ರಸಿಕರು ಅದರ ಅನುಭವ ಪಡೆಯಲು ಇನ್ನೂ ಅನೇಕ ತಿಂಗಳು ಕಾಯುವುದು ಅನಿವಾರ್ಯ. 'ರಂಗನಾಯಕ'ನಿಗೆ ಒಬ್ಬ ನಾಯಕಿ ಇರಬೇಕಲ್ಲ? ಅದರ ಬಗ್ಗೆ ಈಗ ಚರ್ಚೆ ಆರಂಭವಾಗಿದೆ.
ರಾಧಿಕಾ ಕುಮಾರಸ್ವಾಮಿ ನಾಯಕಿ?
ಮೂಲಗಳ ಪ್ರಕಾರ 'ರಂಗನಾಯಕ' ಚಿತ್ರತಂಡವನ್ನು ರಾಧಿಕಾ ಕುಮಾರಸ್ವಾಮಿ ಸೇರಿಕೊಳ್ಳಲಿದ್ದಾರೆ. ಚಿತ್ರದ ಮುಖ್ಯ ಪಾತ್ರದಲ್ಲಿ ನಟಿಸಲು ರಾಧಿಕಾ ಅವರನ್ನು ಸಂಪರ್ಕಿಸಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಚಿತ್ರತಂಡ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
ಜಗ್ಗೇಶ್- ಗುರುಪ್ರಸಾದ್ ಜೋಡಿಯ 'ರಂಗನಾಯಕ'ನ ಕಥೆ ಏನಾಯ್ತು?
ರಚಿತಾ ರಾಮ್ ಹೆಸರೂ ಇದೆ
'ರಂಗನಾಯಕ'ನ ನಾಯಕಿಯ ಪಾತ್ರಕ್ಕೆ ಡಿಂಪಲ್ ಕ್ವೀನ್ ರಚಿತಾ ರಾಮ್ ಹೆಸರೂ ಸಹ ಚಾಲ್ತಿಯಲ್ಲಿದೆ. ಚಿತ್ರದಲ್ಲಿ ಇಬ್ಬರು ನಾಯಕಿಯರು ಇರುತ್ತಾರಾ, ಅಥವಾ ಒಬ್ಬರೇ ನಾಯಕಿ ಇರುತ್ತಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ನಾಯಕಿಯರ ಆಯ್ಕೆಯ ವಿಚಾರದಲ್ಲಿ ಚರ್ಚೆ ನಡೆದಿದ್ದು, ರಾಧಿಕಾ ಅಥವಾ ರಚಿತಾ ರಾಮ್ ಅಲ್ಲದೆ, ಹೊಸಬರನ್ನು ಆಯ್ಕೆ ಮಾಡುವ ಬಗ್ಗೆಯೂ ಚಿಂತನೆ ನಡೆದಿದೆ.
ಭೈರಾದೇವಿಯಲ್ಲಿ ರಾಧಿಕಾ
ಇತ್ತ ರಾಧಿಕಾ ತಮ್ಮ ಮಹತ್ವಾಕಾಂಕ್ಷಿ ಸಿನಿಮಾ 'ಭೈರಾದೇವಿ'ಯ ಬಿಡುಗಡೆಗೆ ತಯಾರಿ ನಡೆಸಿದ್ದಾರೆ. ದುನಿಯಾ ವಿಜಯ್, ರಮೇಶ್ ಅರವಿಂದ್ ಕೂಡ ಈ ಚಿತ್ರದ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಶ್ರೀಜೈ ನಿರ್ದೇಶನದ ಈ ಚಿತ್ರವನ್ನು ಕನ್ನಡವಲ್ಲದೆ, ತಮಿಳು ಹಾಗೂ ತೆಲುಗಿನಲ್ಲಿಯೂ ಬಿಡುಗಡೆ ಮಾಡಲು ಸಿದ್ಧತೆ ನಡೆಸಲಾಗಿದೆ.
ನನ್ನ-ಗುರು ಜೋಡಿ ಕನ್ನಡಿಗರಿಗೆ ನಗುವಿನ ಹಬ್ಬ: ನವರಸನಾಯಕ ಜಗ್ಗೇಶ್
ತೋತಾಪುರಿಯಲ್ಲಿ ಬಿಜಿ
ಜಗ್ಗೇಶ್ ಮತ್ತು ನಿರ್ದೇಶಕ ವಿಜಯಪ್ರಸಾದ್ ಕಾಂಬಿನೇಷನ್ನ ಎರಡನೆಯ ಸಿನಿಮಾ 'ತೋತಾಪುರಿ' ಚಿತ್ರೀಕರಣ ಸಾಗಿದೆ. ಅದಿತಿ ಪ್ರಭುದೇವ, ಸುಮನ್ ರಂಗನಾಥ್ ಹಾಗೂ ಡಾಲಿ ಧನಂಜಯ 'ತೋತಾಪುರಿ'ಯಲ್ಲಿ ಅಭಿನಯಿಸಿದ್ದಾರೆ.
ಒಂದೇ ಬಾರಿಗೆ ಎರಡು ಭಾಗ
ಒಂದು ಸಿನಿಮಾ ಬಿಡುಗಡೆಯಾಗುವ ಮುನ್ನವೇ ಅದರ ಎರಡೂ ಭಾಗಗಳನ್ನು ಚಿತ್ರೀಕರಣ ಪೂರ್ಣಗೊಳಿಸುತ್ತಿರುವುದು ಈ ಚಿತ್ರದ ವಿಶೇಷ. ನಿಜ. 'ತೋತಾಪುರಿ' ಎರಡು ಭಾಗಗಳಲ್ಲಿ ಸಿದ್ಧವಾಗುತ್ತಿದೆ. ಚಿತ್ರರಂಗದಲ್ಲಿ ಇದೊಂದು ದಾಖಲೆಯೇ ಸರಿ. 'ತೊಟ್ಟು ಕೀಳ್ಬೇಕು' ಎನ್ನುವುದು ಮೊದಲ ಭಾಗದ ಕ್ಯಾಪ್ಷನ್ ಆದರೆ, 'ತೊಟ್ಟು ಕಿತ್ತಾಯ್ತು' ಎರಡನೆಯ ಭಾಗದ ಉಪ ಶೀರ್ಷಿಕೆಯಾಗಿದೆ.