Don't Miss!
- News ಆಕ್ಸಿಸ್ ಬ್ಯಾಂಕ್ಗೆ ಬರೋಬ್ಬರಿ 7,129 ಕೋಟಿ ರೂಪಾಯಿ ಲಾಭ!
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಧಿಕಾ ಕುಮಾರಸ್ವಾಮಿ ರಾಜಕೀಯ ಪ್ರವೇಶಕ್ಕೆ ಕುಟುಂಬದಿಂದ ಒತ್ತಡ
ರಾಧಿಕಾ ಕುಮಾರಸ್ವಾಮಿ ಅವರ ರಾಜಕೀಯಕ್ಕೆ ಬರ್ತಾರೆ ಎಂಬ ಮಾತು ಹಲವು ವರ್ಷಗಳಿಂದ ಕೇಳಿಬರುತ್ತಲೇ ಇದೆ. ಆದ್ರೆ, ರಾಧಿಕಾ ಮಾತ್ರ ಈ ಸುದ್ದಿಯನ್ನು ನಿರಾಕರಿಸುತ್ತಲೇ ಬಂದಿದ್ದಾರೆ.
Recommended Video
ವಂಚಿತ ಯುವರಾಜ್ ಅವರ ಖಾತೆಯಿಂದ ರಾಧಿಕಾ ಕುಮಾರಸ್ವಾಮಿ ಖಾತೆಗೆ ಒಂದೂವರೆ ಕೋಟಿ ಹಣ ವರ್ಗಾವಣೆ ಆಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ರಾಧಿಕಾ ಅವರ ರಾಜಕೀಯ ಪ್ರವೇಶದ ಪ್ರಶ್ನೆ ಮತ್ತೆ ಎದುರಾಯ್ತು. ಇದಕ್ಕೆ ಪ್ರತಿಕ್ರಿಯಿಸಿದ ನಟಿ ''ಮನೆಯಲ್ಲಿ ರಾಜಕೀಯ ಪ್ರವೇಶ ಮಾಡುವಂತೆ ಒತ್ತಡ ಇತ್ತು'' ಎಂದು ಹೇಳಿದ್ದಾರೆ.
ವಂಚಿತ ಯುವರಾಜ್ ಜೊತೆ ಸಿನಿಮಾ ಮಾಡಲು ನಿರ್ಧರಿಸಿದ್ದ ರಾಧಿಕಾ, ಯಾವುದು ಆ ಮೆಗಾ ಪ್ರಾಜೆಕ್ಟ್?
''ನಾನು ರಾಜಕೀಯ ಬರ್ತೀನಿ ಅಂತ ಹೇಳಿಲ್ಲ, ನನ್ನ ಕುಟುಂಬದಲ್ಲಿ ರಾಜಕೀಯಕ್ಕೆ ಬಾ ಎಂದು ಒತ್ತಡ ಹಾಕ್ತಿದ್ರು. ಆದರೆ, ಸದ್ಯಕ್ಕೆ ನಾನು ಸಿನಿಮಾ ಮಾಡಬೇಕು ಎಂಬ ಆಸೆಯಲ್ಲಿದ್ದೇನೆ. ಇನ್ನು ಸ್ವಲ್ಪ ಸಮಯ ಸಿನಿ ಇಂಡಸ್ಟ್ರಿಯಲ್ಲಿ ಇರಲು ನಿರ್ಧರಿಸಿದ್ದೇನೆ. ಆಮೇಲೆ ರಾಜಕೀಯ ನೋಡೋಣ. ರಾಜಕೀಯಕ್ಕೆ ಬರಲೇಬೇಕು ಎಂಬ ಉದ್ದೇಶ ಸದ್ಯಕ್ಕಿಲ್ಲ'' ಎಂದು ಸ್ಪಷ್ಟನೆ ನೀಡಿದ್ದಾರೆ.
ಇನ್ನು ಬಂಧಿತ ಯುವರಾಜ್ ಅವರ ಜೊತೆಗಿನ ಸಂಪರ್ಕಕ್ಕೆ ಸಂಬಂಧಿಸಿದಂತೆ ಮಾತನಾಡಿದ ರಾಧಿಕಾ ''ಅವರು ನಮ್ಮ ಕುಟುಂಬದ ಜೊತೆ ಸುಮಾರು 17 ವರ್ಷದಿಂದ ಪರಿಚಯ ಹೊಂದಿದ್ದಾರೆ. ಸಿನಿಮಾ ಮಾಡೋಣ ಎಂಬ ಕಾರಣಕ್ಕಾಗಿ ನನ್ನ ಖಾತೆಗೆ 75 ಲಕ್ಷ (ಅವರ ಖಾತೆಯಿಂದ 15 ಲಕ್ಷ, ಬೇರೆಯೊಬ್ಬರ ಖಾತೆಯಿಂದ 60 ಲಕ್ಷ) ಹಣ ಹಾಕಿದ್ದರು ಅಷ್ಟೇ'' ಎಂದಿದ್ದಾರೆ.
ನಮಗೆ ಮೋಸ ಆಗಿದೆ, ನಾವು ಯಾರಿಗೂ ಮೋಸ ಮಾಡಿಲ್ಲ: ರಾಧಿಕಾ ಕುಮಾರಸ್ವಾಮಿ
ಈ ವಿಚಾರವಾಗಿ ಸಿಸಿಬಿ ಪೊಲೀಸರು ವಿಚಾರಣೆಗೆ ಕರೆದರು ನಾನು ಹೋಗಲು ಸಿದ್ಧ. ಇದನ್ನು ಬಿಟ್ಟು ಬೇರೆ ಯಾವುದೇ ಹಣಕಾಸಿನ ವ್ಯವಹಾರ ನಮ್ಮ ನಡುವೆ ನಡೆದಿಲ್ಲ'' ಎಂದು ನಟಿ ಸ್ಪಷ್ಟಪಡಿಸಿದ್ದಾರೆ.