Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
RSS ಮುಖಂಡ ಅಂತೇಳಿ ಕೋಟಿಗಟ್ಟಲೆ ವಂಚಿಸಿದ ಯುವರಾಜ್: ಖ್ಯಾತ ನಟಿ, ಸಹೋದರನ ಹೆಸರು ಲಿಂಕ್?
ಆರ್ಎಸ್ಎಸ್ ಮುಖಂಡ ಅಂತೇಳಿ ಪ್ರಮುಖ ವ್ಯಕ್ತಿ ಹಾಗೂ ಉದ್ಯಮಿಗಳಿಂದ ಕೋಟ್ಯಾಂತರ ರೂಪಾಯಿ ವಂಚಿಸಿರುವ ಆರೋಪದಲ್ಲಿ ಯುವರಾಜ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು, ಆರ್ಎಸ್ಎಸ್ ರಾಷ್ಟ್ರೀಯ ಮುಖಂಡರು ಸೇರಿದಂತೆ ಪ್ರಭಾವಿ ರಾಜಕಾರಣಿಗಳ ಹೆಸರು ಹೇಳಿಕೊಂಡು, 'ಎಲ್ಲರೂ ನನಗೆ ಆಪ್ತರು, ನಿಮಗೆ ಒಳ್ಳೆಯ ಸ್ಥಾನ ಕೊಡಿಸುತ್ತೇನೆ' ಎಂದು ಆಮಿಷ ತೋರಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿತ್ತು.
ಸಿಸಿಬಿ ಪೊಲೀಸರು ಯುವರಾಜ್ ಮನೆ ಮೇಲೆ ದಾಳಿ ನಡೆಸಿ ಅರೆಸ್ಟ್ ಮಾಡಿದ್ದರು. ಇದೀಗ, ವಿಚಾರಣೆ ವೇಳೆ ಕನ್ನಡದ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಮತ್ತು ಅವರ ಸಹೋದರನ ಖಾತೆಗೆ ಭಾರಿ ಮೊತ್ತದ ಹಣ ವರ್ಗಾವಣೆ ಮಾಡಿದ್ದಾರೆ ಎಂಬ ವಿಷಯ ತಿಳಿದಿದೆ. ಈ ಹಿನ್ನೆಲೆ ರಾಧಿಕಾ ಮತ್ತು ಸಹೋದರನಿಗೆ ಈ ಕೇಸ್ ಕಂಟಕ ಆಗಲಿದ್ಯಾ ಎಂಬ ಅನುಮಾನ ಶುರುವಾಗಿದೆ. ಈ ಸಂಬಂಧ ರಾಧಿಕಾ ಕುಮಾರಸ್ವಾಮಿ ಸಹೋದರ ರವಿರಾಜ್ ಟಿವಿ 9 ವಾಹಿನಿಗೆ ಪ್ರತಿಕ್ರಿಯೆ ನೀಡಿದ್ದು, ''ಆತ ನಮ್ಮ ಕುಟುಂಬಕ್ಕೆ ಪರಿಚಿತ, ಆದರೆ, ಹಣಕಾಸಿನ ವ್ಯವಹಾರ ನಡೆದಿಲ್ಲ'' ಎಂದು ತಿಳಿಸಿದ್ದಾರೆ. ಮುಂದೆ ಓದಿ....
ರಾಜ್ಯಪಾಲರನ್ನಾಗಿ ಮಾಡ್ತೀನಿ ಅಂತ 10 ಕೋಟಿ ವಂಚಿಸಿದ ಯುವರಾಜ !
ನಮ್ಮ ಕುಟುಂಬಕ್ಕೆ ಸ್ವಾಮೀಜಿಯಾಗಿ ಪರಿಚಿತರು
''ಯುವರಾಜ್ ಸ್ವಾಮಿ ಎಂಬ ವ್ಯಕ್ತಿ ನಮ್ಮ ಕುಟುಂಬಕ್ಕೆ 15 ವರ್ಷದಿಂದ ಪರಿಚಿತರು. ಅವರ ಭವಿಷ್ಯವನ್ನು ನಮ್ಮ ತಂದೆ-ತಾಯಿ ಹೆಚ್ಚು ನಂಬುತ್ತಿದ್ದರು. ನಮ್ಮ ತಂದೆ ಸಾವಿನ ವಿಚಾರದಲ್ಲೂ ಅವರು ಹೇಳಿದ ಭವಿಷ್ಯ ನಿಜವಾಗಿತ್ತು ಎಂದು ತಮ್ಮ ತಾಯಿ ಹೇಳಿದ್ದರು. ಹೀಗೆ, ನಮ್ಮ ಕುಟುಂಬಕ್ಕೆ ಪರಿಚಿತರು ಅಷ್ಟೇ. ಇದನ್ನು ಬಿಟ್ಟು ಬೇರೆ ಯಾವುದೇ ರೀತಿಯ ವ್ಯವಹಾರಿಕ ಸಂಬಂಧ ನಮ್ಮ ಮತ್ತು ಅವರು ನಡುವೆ ಇಲ್ಲ'' ಎಂದು ಟಿವಿ9 ವಾಹಿನಿಗೆ ಸ್ಪಷ್ಟನೆ ನೀಡಿದ್ದಾರೆ.
ಸಿಸಿಬಿ ವಿಚಾರಣೆಗೆ ಕರೆದಿದ್ದರು
ಯುವರಾಜ್ ಜೊತೆಗಿನ ಸಂಪರ್ಕದ ಹಿನ್ನೆಲೆ ಸಿಸಿಬಿ ಪೊಲೀಸರು ರವಿರಾಜ್ ಅವರನ್ನು ವಿಚಾರಣೆ ಮಾಡಿದ್ದರು ಎಂದು ಸ್ವತಃ ರವಿರಾಜ್ ಮಾಹಿತಿ ನೀಡಿದ್ದಾರೆ. 'ಸಿಸಿಬಿ ಪೊಲೀಸರು ವಿಚಾರಣೆಗೆ ಕರೆದಿದ್ದರು. ಒಂದು ಗಂಟೆ ಕಾಲ ವಿಚಾರಣೆಗೆ ಒಳಪಟ್ಟಿದ್ದೆ'' ಎಂದು ಒಪ್ಪಿಕೊಂಡಿದ್ದಾರೆ.
ರಾಧಿಕಾ ಹಣಕಾಸಿನ ವ್ಯವಹಾರದ ಬಗ್ಗೆ ಗೊತ್ತಿಲ್ಲ
ಬಂಧಿತ ಯುವರಾಜ್ ಖಾತೆಯಿಂದ ರಾಧಿಕಾ ಕುಮಾರಸ್ವಾಮಿ ಅವರಿಗೂ ಹಾಗು ರವಿರಾಜ್ ಇಬ್ಬರಿಗೂ ಹಣ ವರ್ಗಾವಣೆ ಆಗಿದೆ ಎಂದು ಹೇಳಲಾಗಿದೆ. ಈ ಸಂಬಂಧ ಪ್ರತಿಕ್ರಿಯಿಸಿದ ರವಿರಾಜ್ ''ನನ್ನ ಖಾತೆಗೆ ಹಣ ವರ್ಗಾವಣೆ ಆಗಿಲ್ಲ, ನನಗೂ ಮತ್ತು ಅವರ ನಡುವೆ ಯಾವುದೇ ಹಣಕಾಸಿನ ವ್ಯವಹಾರ ನಡೆದಿಲ್ಲ. ನನ್ನ ಸಹೋದರಿ ಕುರಿತು ನನಗೆ ಸದ್ಯಕ್ಕೆ ಮಾಹಿತಿ ಇಲ್ಲ'' ಎಂದು ಹೇಳಿದ್ದಾರೆ.
Recommended Video
ಮಧ್ಯಾಹ್ನ ಸುದ್ದಿಗೋಷ್ಠಿ?
ಸದ್ಯ ಬೆಂಗಳೂರಿನಿಂದ ಹೊರಗೆ ಇರುವ ರಾಧಿಕಾ ಕುಮಾರಸ್ವಾಮಿ ಮತ್ತು ರವಿರಾಜ್ ಮಧ್ಯಾಹ್ನದ ವೇಳೆ ಡಾಲರ್ಸ್ ಕಾಲೋನಿಯಲ್ಲಿರುವ ಮನೆಗೆ ಬರಲಿದ್ದಾರೆ. ಆ ನಂತರ 2.30ರ ವೇಳೆ ಸುದ್ದಿಗೋಷ್ಠಿ ನಡೆಸಿ ಈ ಕುರಿತು ಸ್ಪಷ್ಟನೆ ನೀಡಲಿದ್ದಾರೆ ಎಂದು ಸ್ವತಃ ರವಿರಾಜ್ ಅವರೇ ಮಾಹಿತಿ ನೀಡಿದ್ದಾರೆ.