Don't Miss!
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- News Acid Attack: ಆಸ್ತಿ ವಿವಾದ: ಮಗನ ಮೇಲೆ 'ಆಸಿಡ್' ಎರಚಿದ ತಂದೆ
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಧಿಕಾ ಕುಮಾರಸ್ವಾಮಿ ಈಗ 'ಭೈರಾ ದೇವಿ': ಸದ್ದಿಲ್ಲದೆ ಮುಗಿದಿದೆ ಮುಹೂರ್ತ
Recommended Video
ಲಾಂಗ್ ಗ್ಯಾಪ್ ನಂತರ ಸ್ಯಾಂಡಲ್ ವುಡ್ ನಲ್ಲಿ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿದ ರಾಧಿಕಾ ಕುಮಾರಸ್ವಾಮಿ 'ಸ್ವೀಟಿ' ಹಾಗೂ 'ರುದ್ರತಾಂಡವ' ಚಿತ್ರಗಳ ಮೂಲಕ ಮತ್ತೆ ಪ್ರೇಕ್ಷಕರ ಮನಗೆದ್ದರು.
'ಕಾಂಟ್ರ್ಯಾಕ್ಟ್', 'ರಾಜೇಂದ್ರ ಪೊನ್ನಪ್ಪ', 'ನಮಗಾಗಿ' ಚಿತ್ರಗಳ ಶೂಟಿಂಗ್ ನಲ್ಲಿ ಬಿಜಿಯಾಗಿರುವ ರಾಧಿಕಾ ಕುಮಾರಸ್ವಾಮಿ ಗ್ರೀನ್ ಸಿಗ್ನಲ್ ನೀಡಿರುವ ಹೊಸ ಚಿತ್ರದ ಮುಹೂರ್ತ ಸಮಾರಂಭ ಇಂದು ಸದ್ದಿಲ್ಲದೇ, ಸುದ್ದಿ ಮಾಡದೇ ಮುಗಿದು ಹೋಗಿದೆ.
ಹೌದು, ರಾಧಿಕಾ ಕುಮಾರಸ್ವಾಮಿ ಅಭಿನಯಿಸಲಿರುವ 'ಭೈರಾ ದೇವಿ' ಚಿತ್ರದ ಮುಹೂರ್ತ ಸಮಾರಂಭ ಇಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇರುವ ದೇವಸ್ಥಾನವೊಂದರಲ್ಲಿ ನಡೆದಿದೆ.
'ಭೈರಾ ದೇವಿ' ಚಿತ್ರದಲ್ಲಿ ರಾಧಿಕಾ ಕುಮಾರಸ್ವಾಮಿ ಜೊತೆಗೆ ರಮೇಶ್ ಅರವಿಂದ್ ಕೂಡ ಮುಖ್ಯಭೂಮಿಕೆಯಲ್ಲಿದ್ದಾರೆ. ಮೂರು ಭಾಷೆಗಳಲ್ಲಿ ಈ ಚಿತ್ರ ತಯಾರಾಗಲಿದ್ಯಂತೆ.
ಈ ಹಿಂದೆ ದುನಿಯಾ ವಿಜಯ್ ಅಭಿನಯದ 'ಆರ್.ಎಕ್ಸ್.ಸೂರಿ' ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ಶ್ರೀಜೈ, 'ಭೈರಾ ದೇವಿ' ಚಿತ್ರದ ನಿರ್ದೇಶಕ.
ಅಂದ್ಹಾಗೆ, 'ಭೈರಾ ದೇವಿ' ಚಿತ್ರದ ಕಥೆ ಏನು.? ಇದು ದೈವ ಶಕ್ತಿ ಹಾಗೂ ದುಷ್ಟ ಶಕ್ತಿ ನಡುವಿನ ಕಥೆ ಹೊಂದಿದ್ಯಾ.? ಎಂಬುದರ ಬಗ್ಗೆ ಕ್ಲಾರಿಟಿ ಇಲ್ಲ. ಯಾಕಂದ್ರೆ, ನಿರ್ದೇಶಕ ಶ್ರೀಜೈ ಇನ್ನೂ 'ಭೈರಾ ದೇವಿ' ಬಗ್ಗೆ ತುಟಿ ಎರಡು ಮಾಡಿಲ್ಲ.
'ಭೈರಾ ದೇವಿ' ಬಗ್ಗೆ ಹೆಚ್ಚಿನ ಮಾಹಿತಿ ಕೊಡ್ತಾಯಿರ್ತೀವಿ, ಫಿಲ್ಮಿಬೀಟ್ ಕನ್ನಡ ಓದ್ತಾಯಿರಿ..