Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಸರಾ ಹಬ್ಬದ ಪ್ರಯುಕ್ತ ರಾಧಿಕಾ ಕುಮಾರಸ್ವಾಮಿ ಚಿತ್ರ ಮರುಬಿಡುಗಡೆ
ಸಿನಿಮಾ ಇಂಡಸ್ಟ್ರಿಯಲ್ಲಿ ಸಿನಿಮಾಗಳ ರಿ-ರಿಲೀಸ್ ಪರ್ವ ಆರಂಭವಾಗಿದೆ. ಕೊರೊನಾ ವೈರಸ್ನಿಂದ ಆರೇಳು ತಿಂಗಳು ಕಾಲ ಚಿತ್ರಮಂದಿರಗಳು ಮುಚ್ಚಿದ್ದವು. ಇದೀಗ, ಸಿನಿಮಾ ಥಿಯೇಟರ್ ತೆರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಅಕ್ಟೋಬರ್ 15 ರಿಂದ ಸಿನಿಮಾ ಪ್ರದರ್ಶಿಸಬಹುದು.
ಆದ್ರೆ, ಹೊಸ ಸಿನಿಮಾಗಳು ಯಾವುದು ಬಿಡುಗಡೆಯಾಗುತ್ತಿಲ್ಲ. ಈಗಾಗಲೇ ತೆರೆಕಂಡಿರುವ ಚಿತ್ರಗಳು ಇನ್ನೊಂದು ಅವಕಾಶ ಪಡೆದುಕೊಳ್ಳುತ್ತಿದೆ.
'ದಮಯಂತಿ' ರಾಧಿಕಾ ಕುಮಾರಸ್ವಾಮಿ ಮತ್ತೆ ಸುದ್ದಿಯಲ್ಲಿರುವುದು ಇದೇ ಕಾರಣಕ್ಕೆ!
ಇದೀಗ, ರಾಧಿಕಾ ಕುಮಾರಸ್ವಾಮಿ ನಟನೆಯ ದಮಯಂತಿ ಸಿನಿಮಾ ದಸರಾ ಹಬ್ಬದ ಪ್ರಯುಕ್ತ ಮತ್ತೆ ಚಿತ್ರಮಂದಿರಕ್ಕೆ ಬರ್ತಿದೆ. ಅಕ್ಟೋಬರ್ 23ರಂದು ದಮಯಂತಿ ಮರುಬಿಡುಗಡೆಯಾಗುತ್ತಿದೆ.
ನವರಸನ್ ನಿರ್ದೇಶಿಸಿದ್ದ ಈ ಚಿತ್ರ 2019ರ ನವೆಂಬರ್ ತಿಂಗಳಲ್ಲಿ ತೆರೆಕಂಡಿತ್ತು. ರಾಧಿಕಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಈ ಚಿತ್ರದಲ್ಲಿ ಸೌರವ್ ಲೋಕೇಶ್, ಶರಣ್ ಉಲ್ಟಿ, ಸಾಧು ಕೋಕಿಲಾ, ತಬಲಾ ನಾಣಿ, ನವೀನ್ ಕೃಷ್ಣ ಸೇರಿದಂತೆ ಹಲವರು ಕಾಣಿಸಿಕೊಂಡಿದ್ದರು.
ಕನ್ನಡದ ಜೊತೆ ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ದಮಯಂತಿ ಸಿನಿಮಾ ಬಿಡುಗಡೆಯಾಗಿತ್ತು. ಈ ಚಿತ್ರವನ್ನು ರಾಧಿಕಾ ಕುಮಾರಸ್ವಾಮಿ ಅವರೇ ನಿರ್ಮಿಸಿದ್ದರು.