Don't Miss!
- Sports Rishabh Pant: ಟಿ20 ವಿಶ್ವಕಪ್ಗೆ ರಿಷಭ್ ಪಂತ್ ಭಾರತ ತಂಡದಲ್ಲಿರಬೇಕು
- News ಬಿಸಿಲಿನ ಶಾಖಕ್ಕೆ ಬೇಸತ್ತು ಎಸಿ ಹೆಲ್ಮೆಟ್ ಮೊರೆಹೋದ ಟ್ರಾಫಿಕ್ ಪೊಲೀಸರು-ಎಲ್ಲಿ?
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಧಿಕಾ ಪಂಡಿತ್-ನಿರೂಪ್ ಭಂಡಾರಿ ಅಭಿನಯದ ಚಿತ್ರಕ್ಕೆ ಹೆಸರು ಇಟ್ಟಾಯ್ತು.!
ರಾಕಿಂಗ್ ಸ್ಟಾರ್ ಯಶ್ ರನ್ನ ಮದುವೆ ಆದ್ಮೇಲೆ ಸ್ಯಾಂಡಲ್ ವುಡ್ ಪ್ರಿನ್ಸೆಸ್ ರಾಧಿಕಾ ಪಂಡಿತ್, ನಟ ನಿರೂಪ್ ಭಂಡಾರಿ ಜೊತೆಗೆ ತೆರೆ ಹಂಚಿಕೊಂಡರು. ಸದ್ದಿಲ್ಲದೆ, ರಾಧಿಕಾ ಪಂಡಿತ್-ನಿರೂಪ್ ಭಂಡಾರಿ ಅಭಿನಯದ ಚಿತ್ರದ ಶೂಟಿಂಗ್ ಕೂಡ ಮುಗಿದು ಹೋಗಿದೆ.
ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿ ಇರುವ ಈ ಚಿತ್ರಕ್ಕೆ ಇದೀಗ ಹೆಸರಿಡಲಾಗಿದೆ. ರಾಧಿಕಾ ಪಂಡಿತ್-ನಿರೂಪ್ ಭಂಡಾರಿ ಕಾಂಬಿನೇಶನ್ ಇರುವ ಈ ಸಿನಿಮಾಗೆ 'ಆದಿ ಲಕ್ಷ್ಮಿ ಪುರಾಣ' ಅಂತ ಶೀರ್ಷಿಕೆ ಇಡಲಾಗಿದೆ.
ಚಿತ್ರದ ಕಥೆಗೆ 'ಆದಿ ಲಕ್ಷ್ಮಿ ಪುರಾಣ' ಟೈಟಲ್ ಸೂಟ್ ಆಗುವುದರಿಂದ ಅದನ್ನೇ ಫಿಕ್ಸ್ ಮಾಡಲಾಗಿದೆ ಅಂತಾರೆ ನಿರ್ದೇಶಕಿ ವಿ.ಪ್ರಿಯಾ. ಮಣಿರತ್ನಂ ಹಾಗೂ ಸುಹಾಸಿನಿ ಬಳಿ ಸಹಾಯಕರಾಗಿ ಕೆಲಸ ಮಾಡಿದ್ದ ವಿ.ಪ್ರಿಯಾ, ಈಗಾಗಲೇ ತಮಿಳಿನಲ್ಲಿ ಎರಡು ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ.
ಹೊಸ ಸಿನಿಮಾ ಶೂಟಿಂಗ್ ನಲ್ಲಿ ಭಾಗಿಯಾದ ರಾಧಿಕಾ ಪಂಡಿತ್
ಈಗ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಿರುವ ವಿ.ಪ್ರಿಯಾ, ಕಥೆ-ಚಿತ್ರಕಥೆ ಬರೆದು 'ಆದಿ ಲಕ್ಷ್ಮಿ ಪುರಾಣ' ಚಿತ್ರವನ್ನ ನಿರ್ದೇಶಿಸಿದ್ದಾರೆ. ಇದೊಂದು ಲವ್ ಸ್ಟೋರಿ ಆಗಿದ್ದು, ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸುತ್ತಾರೆ ನಿರ್ದೇಶಕಿ ವಿ.ಪ್ರಿಯಾ.
ರಾಧಿಕಾ ಪಂಡಿತ್, ನಿರೂಪ್ ಭಂಡಾರಿ ಜೊತೆಗೆ ಸೌಮ್ಯ ಜಗನ್ ಮೂರ್ತಿ, ಜೋ ಸೈಮನ್, ಯಶವಂತ್ ಶೆಟ್ಟಿ, ಭರತ್ ಕಲ್ಯಾಣ್ ಸೇರಿದಂತೆ ರಂಗಭೂಮಿ ಕಲಾವಿದರ ದಂಡು 'ಆದಿ ಲಕ್ಷ್ಮಿ ಪುರಾಣ' ಚಿತ್ರದಲ್ಲಿದೆ. ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿ ಇರುವ ಈ ಚಿತ್ರದ ಬಿಡುಗಡೆ ದಿನಾಂಕ ಇನ್ನೂ ನಿಗದಿ ಆಗಿಲ್ಲ.