Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೌರಿ-ಗಣೇಶ ಹಬ್ಬಕ್ಕೆ ರಾಘಣ್ಣನ 'ಆಡಿಸಿದಾತ' ಚಿತ್ರದ ಟ್ರೈಲರ್
ರಾಘವೇಂದ್ರ ರಾಜ್ ಕುಮಾರ್ ಅಭಿನಯಿಸುತ್ತಿರುವ 25ನೇ ಚಿತ್ರದ ಟ್ರೈಲರ್ ಗೌರಿ ಗಣೇಶ ಹಬ್ಬದ ಪ್ರಯುಕ್ತ ಬಿಡುಗಡೆಯಾಗುತ್ತಿದೆ. ತ್ರಯಂಬಕ ಚಿತ್ರದ ಬಳಿಕ ರಾಘಣ್ಣ ನಟಿಸುತ್ತಿರುವ ಚಿತ್ರ ಇದಾಗಿದ್ದು, ಸಹಜವಾಗಿ ಕುತೂಹಲ ಮೂಡಿಸಿದೆ.
Recommended Video
ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಆಗಿದ್ದು, ಫಣೀಶ್ ಭಾರದ್ವಾಜ್ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ದುರ್ಗದ ಹುಲಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಹೆಚ್.ಹಾಲೇಶ್ ಚಿತ್ರಕ್ಕೆ ಬಂಡವಾಳ ಹಾಕುತ್ತಿದ್ದಾರೆ.
ಶಿವರಾಜ್ ಕುಮಾರ್ ಮಗಳಿಗೆ ಭಾವುಕ ಶುಭಾಶಯ ಹೇಳಿದ ರಾಘವೇಂದ್ರ ರಾಜ್ಕುಮಾರ್
ಮೊದಲ ಹಂತದ ಟಾಕಿ ಪೋಷನ್ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಸದ್ಯದಲ್ಲೇ ಎರಡನೇ ಹಂತದ ಶೂಟಿಂಗ್ನ್ನು ಬೆಂಗಳೂರಿನಲ್ಲಿ ಆರಂಭಿಸಲಿದೆ. ಈಗಾಗಲೇ ಎರಡು ಹಾಡುಗಳು ಚಿತ್ರೀಕರಣ ಸಹ ಮುಕ್ತಾಯವಾಗಿದೆ.
ರಾಘವೇಂದ್ರ ರಾಜಕುಮಾರ್ ಮುಖ್ಯ ಭೂಮಿಕೆಯಲ್ಲಿರುವ ಈ ಚಿತ್ರದಲ್ಲಿ ಹಿರಿಯ ನಿರ್ದೇಶಕ ದೊರೆ ಭಗವಾನ್ ಸಹ ವಿಶೇಷ ಪಾತ್ರವೊಂದನ್ನು ನಿಭಾಯಿಸುತ್ತಿದ್ದಾರೆ. ಇನ್ನುಳಿದಂತೆ ಗುರುದತ್, ಬಾಲರಾಜ್, ಸುಶ್ಮಿತ ದಾಮೋದರ್ ಮುಂತಾದವರು ತಾರಾಬಳಗದಲ್ಲಿದ್ದಾರೆ.
ಮಣಿಕಾಂತ್ ಕದ್ರಿ ಸಂಗೀತ ಒಳಗೊಂಡಿರುವ ಈ ಚಿತ್ರಕ್ಕೆ ಆನಂದ್ ಇಳಯರಾಜ ಅವರ ಛಾಯಾಗ್ರಹಣವಿದೆ. ಹರೀಶ್ ಕೊಮ್ಮಿ (ಮಫ್ತಿ) ಸಂಕಲನ ಹಾಗೂ ಬಾಲ ನೃತ್ಯ ಸಂಯೋಜನೆ ಮಾಡುತ್ತಿದ್ದಾರೆ.