Don't Miss!
- Automobiles Vande Bharat: ವಂದೇ ಭಾರತ್ ಸ್ಲೀಪರ್ ವಿಶೇಷತೆಗಳು: ಇಂಟೀರಿಯರ್ಗೆ ಫಿದಾ ಆಗ್ತೀರ!
- News Karnataka Lok Sabha: 28 ಕ್ಷೇತ್ರಗಳ ಜಾತಿವಾರು ಅಭ್ಯರ್ಥಿಗಳ ಯಾರು? ಮಾಹಿತಿ ಇಲ್ಲಿದೆ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೌರಿ-ಗಣೇಶ ಹಬ್ಬಕ್ಕೆ ರಾಘಣ್ಣನ 'ಆಡಿಸಿದಾತ' ಚಿತ್ರದ ಟ್ರೈಲರ್
ರಾಘವೇಂದ್ರ ರಾಜ್ ಕುಮಾರ್ ಅಭಿನಯಿಸುತ್ತಿರುವ 25ನೇ ಚಿತ್ರದ ಟ್ರೈಲರ್ ಗೌರಿ ಗಣೇಶ ಹಬ್ಬದ ಪ್ರಯುಕ್ತ ಬಿಡುಗಡೆಯಾಗುತ್ತಿದೆ. ತ್ರಯಂಬಕ ಚಿತ್ರದ ಬಳಿಕ ರಾಘಣ್ಣ ನಟಿಸುತ್ತಿರುವ ಚಿತ್ರ ಇದಾಗಿದ್ದು, ಸಹಜವಾಗಿ ಕುತೂಹಲ ಮೂಡಿಸಿದೆ.
Recommended Video
ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಆಗಿದ್ದು, ಫಣೀಶ್ ಭಾರದ್ವಾಜ್ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ದುರ್ಗದ ಹುಲಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಹೆಚ್.ಹಾಲೇಶ್ ಚಿತ್ರಕ್ಕೆ ಬಂಡವಾಳ ಹಾಕುತ್ತಿದ್ದಾರೆ.
ಶಿವರಾಜ್ ಕುಮಾರ್ ಮಗಳಿಗೆ ಭಾವುಕ ಶುಭಾಶಯ ಹೇಳಿದ ರಾಘವೇಂದ್ರ ರಾಜ್ಕುಮಾರ್
ಮೊದಲ ಹಂತದ ಟಾಕಿ ಪೋಷನ್ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಸದ್ಯದಲ್ಲೇ ಎರಡನೇ ಹಂತದ ಶೂಟಿಂಗ್ನ್ನು ಬೆಂಗಳೂರಿನಲ್ಲಿ ಆರಂಭಿಸಲಿದೆ. ಈಗಾಗಲೇ ಎರಡು ಹಾಡುಗಳು ಚಿತ್ರೀಕರಣ ಸಹ ಮುಕ್ತಾಯವಾಗಿದೆ.
ರಾಘವೇಂದ್ರ ರಾಜಕುಮಾರ್ ಮುಖ್ಯ ಭೂಮಿಕೆಯಲ್ಲಿರುವ ಈ ಚಿತ್ರದಲ್ಲಿ ಹಿರಿಯ ನಿರ್ದೇಶಕ ದೊರೆ ಭಗವಾನ್ ಸಹ ವಿಶೇಷ ಪಾತ್ರವೊಂದನ್ನು ನಿಭಾಯಿಸುತ್ತಿದ್ದಾರೆ. ಇನ್ನುಳಿದಂತೆ ಗುರುದತ್, ಬಾಲರಾಜ್, ಸುಶ್ಮಿತ ದಾಮೋದರ್ ಮುಂತಾದವರು ತಾರಾಬಳಗದಲ್ಲಿದ್ದಾರೆ.
ಮಣಿಕಾಂತ್ ಕದ್ರಿ ಸಂಗೀತ ಒಳಗೊಂಡಿರುವ ಈ ಚಿತ್ರಕ್ಕೆ ಆನಂದ್ ಇಳಯರಾಜ ಅವರ ಛಾಯಾಗ್ರಹಣವಿದೆ. ಹರೀಶ್ ಕೊಮ್ಮಿ (ಮಫ್ತಿ) ಸಂಕಲನ ಹಾಗೂ ಬಾಲ ನೃತ್ಯ ಸಂಯೋಜನೆ ಮಾಡುತ್ತಿದ್ದಾರೆ.