ಮೇಘನಾ ರಾಜ್ ಭೇಟಿಯಾಗಿ ಧೈರ್ಯ ತುಂಬಿದ ರಾಘವೇಂದ್ರ ರಾಜ್ ಕುಮಾರ್ ಕುಟುಂಬ
ನಟ ಚಿರಂಜೀವಿ ಸರ್ಜಾ ಸಾವನ್ನಪ್ಪಿ 8 ದಿನಗಳು ಕಳೆದಿವೆ. ಚಿರಂಜೀವಿ ಸರ್ಜಾ ಅವರ ಹಠಾತ್ ಅಗಲಿಕೆ ಕುಟುಂಬಕ್ಕೆ ದೊಡ್ಡ ಆಘಾತ ತಂದಿದೆ. ಚಿರು ಇನ್ನಿಲ್ಲ ಎನ್ನುವ ಸತ್ಯವನ್ನು ಊಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಚಿರು ಕಳೆದುಕೊಂಡು ಇಡೀ ಕುಟುಂಬ ನೋವಿನಲ್ಲಿದೆ.
Recommended Video
ಈ ಹಿನ್ನಲೆಯಲ್ಲಿ ರಾಘವೇಂದ್ರ ರಾಜ್ ಕುಮಾರ್ ಫ್ಯಾಮಿಲಿ ಇತ್ತೀಚಿಗೆ ಸರ್ಜಾ ಕುಟುಂಬವನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಕಳೆದ ಭಾನುವಾರ ಜೂನ್ 7 ಚಿರು ಸರ್ಜಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಚಿರು ಸಾವಿಗೆ ಇಡೀ ಸ್ಯಾಂಡಲ್ ವುಡ್ ಮಂದಿ ಕಂಬನಿ ಮಿಡಿದಿದೆ. ಚಿಕ್ಕ ವಯಸ್ಸಿನಲ್ಲಿಯೇ ಇಹಲೋಕ ತ್ಯಜಿಸಿದ ಚಿರು ಸಾವು ಕುಟುಂಬದವರಿಗೆ ಆಘಾತವುಂಟು ಮಾಡಿದೆ.

ಸರ್ಜಾ ಕುಟುಂಬಕ್ಕೆ ಸಾಂತ್ವನ ಹೇಳಿದ ರಾಘವೇಂದ್ರ ರಾಜ್ ಕುಮಾರ್
ದುಃಖದಲ್ಲಿರುವ ಸರ್ಜಾ ಕುಟುಂಬದವರನ್ನು ರಾಘವೇಂದ್ರ ರಾಜ್ ಕುಮಾರ್ ಭೇಟಿಯಾಗಿ ಕುಟುಂಬಸ್ಥರನ್ನು ಮಾತನಾಡಿಸಿ ಅವರಿಗೆ ಧೈರ್ಯ ಹೇಳಿದ್ದಾರೆ. ಇನ್ನು ರಾಘವೇಂದ್ರ ರಾಜ್ ಕುಮಾರ್ ದಂಪತಿ ಮತ್ತು ಅವರ ಪುತ್ರರಾದ ವಿನಯ್ ರಾಜ್ ಕುಮಾರ್ ಮತ್ತು ಯವ ರಾಜ್ ಕುಮಾರ್ ಕೂಡ ಇದ್ದರು. ಧ್ರುವ ಸರ್ಜಾ, ಅರ್ಜುನ್ ಸರ್ಜಾ, ತಾಯಿಯನ್ನು ಮಾತನಾಡಿಸಿ ಸಾಂತ್ವನ ಹೇಳಿದ್ದಾರೆ.

ಮೇಘನಾ ಭೇಟಿಯಾಗಿ ಧೈರ್ಯ ತುಂಬಿದ ರಾಘಣ್ಣ
ಸರ್ಜಾ ಮನೆಗೆ ಭೇಟಿ ನೀಡಿದ ನಂತರ ರಾಘವೇಂದ್ರ ರಾಜ್ ಕುಮಾರ್ ಕುಟುಂಬ ಸುಂದರ್ ರಾಜ್ ಮನೆಗೂ ಭೇಟಿ ನೀಡಿದ್ದಾರೆ. ಸುಂದರ್ ರಾಜ್, ಪ್ರಮಿಳಾ ಜೋಷಾಯ್ ಮತ್ತು ಮಗಳು ಮೇಘನಾ ಅವರನ್ನು ಭೇಟಿಯಾಗಿ ಧೈರ್ಯ ತುಂಬಿದ್ದಾರೆ. ದುಃಖದಲ್ಲಿರುವ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ

ಅಣ್ಣನ ನೆನಪಲ್ಲಿ ಧ್ರುವ ಸರ್ಜಾ
ನಟ ಧ್ರುವ ಸರ್ಜಾ ಅಣ್ಣನ ನೆನಪನ್ನು ಸಾಮಾಜಿಕ ಜಾಲತಾಣದ ಮೂಲಕ ವ್ಯಕ್ತಪಡಿಸುತ್ತಿದ್ದಾರೆ. ಅಣ್ಣ ಮತ್ತೆ ವಾಪಸ್ ಬಾ, ನೀನೆ ನನ್ನ ಪ್ರಪಂಚ ಎಂದು ಬರೆದುಕೊಳ್ಳುತ್ತಿದ್ದಾರೆ. ಪ್ರತೀ ದಿನ ಕಾಡುವ ಅಣ್ಣನ ನೆನಪು ನೋವನ್ನು ಮತ್ತಷ್ಟು ಹೆಚ್ಚಿಸುತ್ತಿದೆ. ದುಃಖದಲ್ಲಿರುವ ಸರ್ಜಾ ಕುಟುಂಬಕ್ಕೆ ರಾಘವೇಂದ್ರ ರಾಜ್ ಕುಮಾರ್ ಕುಟುಂಬ ಧೈರ್ಯ ತುಂಬಿದೆ.


Click it and Unblock the Notifications











