Don't Miss!
- Finance Tumakuru namma metro: ಮಾದಾವರದಿಂದ ತುಮಕೂರು ಮೆಟ್ರೋ ಕಾರಿಡಾರ್ ಅಪಡೇಟ್
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೇಘನಾ ರಾಜ್ ಭೇಟಿಯಾಗಿ ಧೈರ್ಯ ತುಂಬಿದ ರಾಘವೇಂದ್ರ ರಾಜ್ ಕುಮಾರ್ ಕುಟುಂಬ
ನಟ ಚಿರಂಜೀವಿ ಸರ್ಜಾ ಸಾವನ್ನಪ್ಪಿ 8 ದಿನಗಳು ಕಳೆದಿವೆ. ಚಿರಂಜೀವಿ ಸರ್ಜಾ ಅವರ ಹಠಾತ್ ಅಗಲಿಕೆ ಕುಟುಂಬಕ್ಕೆ ದೊಡ್ಡ ಆಘಾತ ತಂದಿದೆ. ಚಿರು ಇನ್ನಿಲ್ಲ ಎನ್ನುವ ಸತ್ಯವನ್ನು ಊಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಚಿರು ಕಳೆದುಕೊಂಡು ಇಡೀ ಕುಟುಂಬ ನೋವಿನಲ್ಲಿದೆ.
Recommended Video
ಈ ಹಿನ್ನಲೆಯಲ್ಲಿ ರಾಘವೇಂದ್ರ ರಾಜ್ ಕುಮಾರ್ ಫ್ಯಾಮಿಲಿ ಇತ್ತೀಚಿಗೆ ಸರ್ಜಾ ಕುಟುಂಬವನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಕಳೆದ ಭಾನುವಾರ ಜೂನ್ 7 ಚಿರು ಸರ್ಜಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಚಿರು ಸಾವಿಗೆ ಇಡೀ ಸ್ಯಾಂಡಲ್ ವುಡ್ ಮಂದಿ ಕಂಬನಿ ಮಿಡಿದಿದೆ. ಚಿಕ್ಕ ವಯಸ್ಸಿನಲ್ಲಿಯೇ ಇಹಲೋಕ ತ್ಯಜಿಸಿದ ಚಿರು ಸಾವು ಕುಟುಂಬದವರಿಗೆ ಆಘಾತವುಂಟು ಮಾಡಿದೆ.
ಚಿರು ನಿಧನ ಹೊಂದುವ ಹಿಂದಿನ ದಿನ ಕ್ಲಿಕ್ಕಿಸಿದ ಫೋಟೋ ಹಂಚಿಕೊಂಡ ಧ್ರುವ ಸರ್ಜಾ
ಸರ್ಜಾ ಕುಟುಂಬಕ್ಕೆ ಸಾಂತ್ವನ ಹೇಳಿದ ರಾಘವೇಂದ್ರ ರಾಜ್ ಕುಮಾರ್
ದುಃಖದಲ್ಲಿರುವ ಸರ್ಜಾ ಕುಟುಂಬದವರನ್ನು ರಾಘವೇಂದ್ರ ರಾಜ್ ಕುಮಾರ್ ಭೇಟಿಯಾಗಿ ಕುಟುಂಬಸ್ಥರನ್ನು ಮಾತನಾಡಿಸಿ ಅವರಿಗೆ ಧೈರ್ಯ ಹೇಳಿದ್ದಾರೆ. ಇನ್ನು ರಾಘವೇಂದ್ರ ರಾಜ್ ಕುಮಾರ್ ದಂಪತಿ ಮತ್ತು ಅವರ ಪುತ್ರರಾದ ವಿನಯ್ ರಾಜ್ ಕುಮಾರ್ ಮತ್ತು ಯವ ರಾಜ್ ಕುಮಾರ್ ಕೂಡ ಇದ್ದರು. ಧ್ರುವ ಸರ್ಜಾ, ಅರ್ಜುನ್ ಸರ್ಜಾ, ತಾಯಿಯನ್ನು ಮಾತನಾಡಿಸಿ ಸಾಂತ್ವನ ಹೇಳಿದ್ದಾರೆ.
ಚಿರು ಯಾವತ್ತೂ ಚಿರಂಜೀವಿನೇ...: ಹರಿಪ್ರಿಯಾ ಭಾವುಕ ಮಾತು
ಮೇಘನಾ ಭೇಟಿಯಾಗಿ ಧೈರ್ಯ ತುಂಬಿದ ರಾಘಣ್ಣ
ಸರ್ಜಾ ಮನೆಗೆ ಭೇಟಿ ನೀಡಿದ ನಂತರ ರಾಘವೇಂದ್ರ ರಾಜ್ ಕುಮಾರ್ ಕುಟುಂಬ ಸುಂದರ್ ರಾಜ್ ಮನೆಗೂ ಭೇಟಿ ನೀಡಿದ್ದಾರೆ. ಸುಂದರ್ ರಾಜ್, ಪ್ರಮಿಳಾ ಜೋಷಾಯ್ ಮತ್ತು ಮಗಳು ಮೇಘನಾ ಅವರನ್ನು ಭೇಟಿಯಾಗಿ ಧೈರ್ಯ ತುಂಬಿದ್ದಾರೆ. ದುಃಖದಲ್ಲಿರುವ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ
ಅಣ್ಣನ ನೆನಪಲ್ಲಿ ಧ್ರುವ ಸರ್ಜಾ
ನಟ ಧ್ರುವ ಸರ್ಜಾ ಅಣ್ಣನ ನೆನಪನ್ನು ಸಾಮಾಜಿಕ ಜಾಲತಾಣದ ಮೂಲಕ ವ್ಯಕ್ತಪಡಿಸುತ್ತಿದ್ದಾರೆ. ಅಣ್ಣ ಮತ್ತೆ ವಾಪಸ್ ಬಾ, ನೀನೆ ನನ್ನ ಪ್ರಪಂಚ ಎಂದು ಬರೆದುಕೊಳ್ಳುತ್ತಿದ್ದಾರೆ. ಪ್ರತೀ ದಿನ ಕಾಡುವ ಅಣ್ಣನ ನೆನಪು ನೋವನ್ನು ಮತ್ತಷ್ಟು ಹೆಚ್ಚಿಸುತ್ತಿದೆ. ದುಃಖದಲ್ಲಿರುವ ಸರ್ಜಾ ಕುಟುಂಬಕ್ಕೆ ರಾಘವೇಂದ್ರ ರಾಜ್ ಕುಮಾರ್ ಕುಟುಂಬ ಧೈರ್ಯ ತುಂಬಿದೆ.