Don't Miss!
- News Lok Sabha Election 2024: ಚಾಮರಾಜನಗರ ಕ್ಷೇತ್ರದಲ್ಲಿರುವ ಮತದಾರರ ವಿವರ-ಅಂಕಿಅಂಶಗಳ ಮಾಹಿತಿ
- Finance ನೂಡಲ್ಸ್ ಪ್ಯಾಕೆಟ್ ಒಳಗಿತ್ತು ವಜ್ರಗಳ ರಾಶಿ, ಬರೋಬ್ಬರಿ 6.46 ಕೋಟಿ ರೂ. ಮೌಲ್ಯದ ಚಿನ್ನ, ಡೈಮಂಡ್ ವಶ!
- Technology ಇಂದು ವಿವೋ T3x 5G ಸ್ಮಾರ್ಟ್ಫೋನ್ ಫಸ್ಟ್ ಸೇಲ್; ಬೆಲೆ 13,499ರೂ.!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸರ್ಜಾ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದ ರಾಘವೇಂದ್ರ ರಾಜ್ ಕುಮಾರ್ ಫ್ಯಾಮಿಲಿ
ನಟ ಚಿರಂಜೀವಿ ಸರ್ಜಾ ಸಾವನ್ನಪ್ಪಿ 8 ದಿನಗಳು ಕಳೆದಿವೆ. ಚಿರಂಜೀವಿ ಸರ್ಜಾ ಅವರ ಹಠಾತ್ ಅಗಲಿಕೆ ಕುಟುಂಬಕ್ಕೆ ದೊಡ್ಡ ಆಘಾತ ತಂದಿದೆ. ಚಿರು ಇನ್ನಿಲ್ಲ ಎನ್ನುವ ಸತ್ಯವನ್ನು ಊಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಚಿರು ಕಳೆದುಕೊಂಡ ಇಡೀ ಸರ್ಜಾ ಕುಟುಂಬ ನೋವಿನಲ್ಲಿದೆ.
ಈ ಹಿನ್ನಲೆ ರಾಘವೇಂದ್ರ ರಾಜ್ ಕುಮಾರ್ ಸರ್ಜಾ ಕುಟುಂಬವನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಕಳೆದ ಭಾನುವಾರ ಜೂನ್ 7 ಚಿರು ಸರ್ಜಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಚಿರು ಸಾವಿಗೆ ಇಡೀ ಸ್ಯಾಂಡಲ್ ವುಡ್ ಮಂದಿ ಕಂಬನಿ ಮಿಡಿದಿದೆ. ಚಿಕ್ಕ ವಯಸ್ಸಿನಲ್ಲಿಯೇ ಇಹಲೋಕ ತ್ಯಜಿಸಿದ ಚಿರು ಸಾವು ಕುಟುಂಬದವರಿಗೆ ಆಘಾತವುಂಟು ಮಾಡಿದೆ.
ಚಿರು ನಿಧನ ಹೊಂದುವ ಹಿಂದಿನ ದಿನ ಕ್ಲಿಕ್ಕಿಸಿದ ಫೋಟೋ ಹಂಚಿಕೊಂಡ ಧ್ರುವ ಸರ್ಜಾ
ದುಃಖದಲ್ಲಿರುವ ಸರ್ಜಾ ಕುಟುಂಬದವರನ್ನು ಭೇಟಿಯಾಗಿ ಕುಟುಂಬಸ್ಥರನ್ನು ಮಾತನಾಡಿಸಿ ಅವರಿಗೆ ಧೈರ್ಯ ಹೇಳಿದ್ದಾರೆ. ಇನ್ನು ರಾಘವೇಂದ್ರ ರಾಜ್ ಕುಮಾರ್ ದಂಪತಿ ಮತ್ತು ಅವರ ಪುತ್ರರಾದ ವಿನಯ್ ರಾಜ್ ಕುಮಾರ್ ಮತ್ತು ಯವ ರಾಜ್ ಕುಮಾರ್ ಕೂಡ ಇದ್ದರು. ಧ್ರುವ ಸರ್ಜಾ, ಅರ್ಜುನ್ ಸರ್ಜಾ, ತಾಯಿಯನ್ನು ಮಾತನಾಡಿಸಿ ಸಾಂತ್ವನ ಹೇಳಿದ್ದಾರೆ.
ನಟ ಧ್ರುವ ಸರ್ಜಾ ಅಣ್ಣನ ನೆನಪನ್ನು ಸಾಮಾಜಿಕ ಜಾಲತಾಣದ ಮೂಲಕ ವ್ಯಕ್ತಪಡಿಸುತ್ತಿದ್ದಾರೆ. 'ಅಣ್ಣ ಮತ್ತೆ ವಾಪಸ್ ಬಾ, ನೀನೆ ನನ್ನ ಪ್ರಪಂಚ' ಎಂದು ಬರೆದುಕೊಳ್ಳುತ್ತಿದ್ದಾರೆ. ಪ್ರತೀ ದಿನ ಕಾಡುವ ಅಣ್ಣನ ನೆನಪು ನೋವನ್ನು ಮತ್ತಷ್ಟು ಹೆಚ್ಚಿಸುತ್ತಿದೆ. ದುಃಖದಲ್ಲಿರುವ ಸರ್ಜಾ ಕುಟುಂಬಕ್ಕೆ ರಾಘವೇಂದ್ರ ರಾಜ್ ಕುಮಾರ್ ಕುಟುಂಬ ಧೈರ್ಯ ತುಂಬಿದೆ.