Don't Miss!
- Finance Tumakuru namma metro: ಮಾದಾವರದಿಂದ ತುಮಕೂರು ಮೆಟ್ರೋ ಕಾರಿಡಾರ್ ಅಪಡೇಟ್
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಘವೇಂದ್ರ ರಾಜ್ಕುಮಾರ್ ಆರೋಗ್ಯದಲ್ಲಿ ಚೇತರಿಕೆ, ಇಂದು ಆಸ್ಪತ್ರೆಯಿಂದ ಬಿಡುಗಡೆ
ಖ್ಯಾತ ನಟ, ನಿರ್ಮಾಪಕ ರಾಘವೇಂದ್ರ ರಾಜ್ಕುಮಾರ್ ಅವರಿಗೆ ಆರೋಗ್ಯದಲ್ಲಿ ವ್ಯತ್ಯಯವಾದ ಕಾರಣ ನಿನ್ನೆ (ಫೆಬ್ರವರಿ 16) ರ ರಾತ್ರಿ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿದ್ದರು.
ರಾಘವೇಂದ್ರ ರಾಜ್ಕುಮಾರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ನಿನ್ನೆ ಸಿನಿಮಾದ ಚಿತ್ರೀಕರಣದಲ್ಲಿ ಭಾಗವಹಿಸಿದ್ದ ರಾಘವೇಂದ್ರ ರಾಜ್ಕುಮಾರ್ ಅವರಿಗೆ ಆಯಾಸ ಉಂಟಾಗಿ, ಅನಾರೋಗ್ಯ ಕಂಡುಬಂದಿತ್ತು, ಹಾಗಾಗಿ ಕೂಡಲೇ ಅವರು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ನೀಡಿದ್ದ ಮಾಹಿತಿಯಂತೆ ರಾಘವೇಂದ್ರ ರಾಜ್ಕುಮಾರ್ ಅವರಿಗೆ ನೀರಸ ಉಂಟಾಗಿತ್ತು, ಎದೆ ಬಡಿತ ಜೋರಾಗಿತ್ತು, ಹಾಗಾಗಿ ಅವರನ್ನು ನಿಘಾದಲ್ಲಿ ಇಡಲಾಗಿತ್ತು.
ನಿನ್ನೆ ತಡ ರಾತ್ರಿ ಮಾಧ್ಯಮಗಳೊಟ್ಟಿಗೆ ಮಾತನಾಡಿದ್ದ ರಾಘವೇಂದ್ರ ರಾಜ್ಕುಮಾರ್ ಪುತ್ರ ವಿನಯ್ ರಾಜ್ಕುಮಾರ್, 'ಆರಾಮವಾಗಿದ್ದಾರೆ, ಶೂಟಿಂಗ್ ಇತ್ತಲ್ಲ ಅಲ್ಲಿ ತುಸು ಸುಸ್ತಾಗಿದ್ದಾರೆ. ಮುನ್ನೆಚ್ಚರಿಕೆಯಿಂದಾಗಿ ಇಲ್ಲಿ ಬಂದು ಅಡ್ಮಿಟ್ ಮಾಡಿದ್ದೇವೆ. ಸಾಮಾನ್ಯ ಚೆಕ್ಅಪ್ಗಳು ನಡೆದಿವೆ. ಏನೂ ಸಮಸ್ಯೆ ಇಲ್ಲ, ನಾಳೆ (ಫೆಬ್ರವರಿ 17) ಕ್ಕೆ ಡಿಸ್ಚಾರ್ಜ್ ಮಾಡುತ್ತಾರೆ' ಎಂದಿದ್ದರು.
ರಾತ್ರಿ ಆಸ್ಪತ್ರೆ ಬಳಿ ಬಂದಿದ್ದ ಶ್ರೀಮುರಳಿ ಸಹ ರಾಘವೇಂದ್ರ ರಾಜ್ಕುಮಾರ್ ಆರಾಮವಾಗಿದ್ದಾರೆ ಎಂದಿದ್ದರು. 'ನಾನು ರಾಘವೇಂದ್ರ ರಾಜ್ಕುಮಾರ್ ಅವರನ್ನು ಮಾತನಾಡಿಸಿದೆ. ಅವರು ಆರಾಮವಾಗಿದ್ದಾರೆ. ಕರ್ನಾಟಕದ ಜನರ ಪ್ರೀತಿ ಅವರ ಮೇಲೆ, ಅವರ ಕುಟುಂಬದ ಮೇಲೆ ಇದೆ, ಹೀಗಿದ್ದಾಗ ಅವರಿಗೆ ಏನೂ ಆಗಲು ಸಾಧ್ಯವಿಲ್ಲ' ಎಂದರು ಶ್ರೀಮುರಳಿ.
ನಿನ್ನೆ ರಾತ್ರಿಯೇ ಪುನೀತ್ ರಾಜ್ಕುಮಾರ್, ಶಿವರಾಜ್ ಕುಮಾರ್ ಹಾಗೂ ಇನ್ನೂ ಕೆಲವು ಕುಟುಂಬ ಸದಸ್ಯರು ಆಸ್ಪತ್ರೆಗೆ ಭೇಟಿ ನೀಡಿ ರಾಘವೇಂದ್ರ ರಾಜ್ಕುಮಾರ್ ಅವರ ಆರೋಗ್ಯ ವಿಚಾರಿಸಿದರು.
Recommended Video
ರಾಘವೇಂದ್ರ ರಾಜ್ಕುಮಾರ್ ಅವರಿಗೆ ಕೆಲವು ತಿಂಗಳ ಹಿಂದೆ ತೀವ್ರ ಅನಾರೋಗ್ಯವಾಗಿತ್ತು, ಪೆರಾಲಿಸಿಸ್ಗೆ ಗುರಿಯಾಗಿದ್ದ ಅವರಿಗೆ ವಿದೇಶದಲ್ಲಿ ಚಿಕಿತ್ಸೆ ನೀಡಲಾಯಿತು. ಆರೋಗ್ಯದಲ್ಲಿ ಚೇತರಿಕೆ ಕಂಡ ರಾಘವೇಂದ್ರ ರಾಜ್ಕುಮಾರ್ ಈಗ ಮತ್ತೆ ಸಿನಿಮಾಗಳಲ್ಲಿ ನಟಿಸಲು ಆರಂಭಿಸಿದ್ದಾರೆ.