Don't Miss!
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Sports ಟಿ20 ವಿಶ್ವಕಪ್ 2024: ಟೀಮ್ ಇಂಡಿಯಾಗೆ ದೊಡ್ಡ ಚಿಂತೆಯಾದ ಈ ಆರಂಭಿಕನ ಫಾರ್ಮ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾರ್ಯಕ್ರಮಕ್ಕೆ ಹಾಜರಾಗಲು ರಾಘಣ್ಣ ಹಾಕಿದ ಕಂಡೀಷನ್!
ಇನ್ನು ಮುಂದೆ ರಾಘವೇಂದ್ರ ರಾಜಕುಮಾರ್ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸ ಬೇಕಾದರೆ, ಅಭಿಮಾನಿಗಳು ಅವರು ಹಾಕುವ ಕಂಡೀಷನಿಗೆ ಓಕೆ ಅನ್ನಬೇಕು.
ಅಭಿಮಾನಿಗಳನ್ನೇ ದೇವರೆಂದು ಕೊಂಡಿದ್ದ ರಾಜಕುಮಾರ್ ಪುತ್ರ ರಾಘಣ್ಣ, ಅಭಿಮಾನಿಗಳು ಆಯೋಜಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಂಡೀಷನ್ ಹಾಕ್ತಾರಾ ಎನ್ನುವ ಪ್ರಶ್ನೆಗೆ ಉತ್ತರ, ಹೌದು.
ಆದರೆ, ರಾಘಣ್ಣ ಹಾಕಿರುವ ಕಂಡೀಷನ್ ಸಮಾಜಮುಖಿ ಕೆಲಸಕ್ಕಾಗಿ, ಪರಿಸರ ಕಾಳಜಿಗಾಗಿ. ತಾನು ಇನ್ಮುಂದೆ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸ ಬೇಕಾದರೆ ಅಭಿಮಾನಿಗಳು ಬೇವಿನ ಗಿಡವನ್ನು ನೆಡಬೇಕು ಎನ್ನುವುದು ರಾಘಣ್ಣ ಹಾಕಿರುವ ಕಂಡೀಷನ್. (ರಾಜ್ ಹುಟ್ಟುಹಬ್ಬಕ್ಕೆ ಮುನ್ನ ರಾಘಣ್ಣ ಹೊಸ ಅಭಿಯಾನ)
ವರನಟ ಡಾ. ರಾಜಕುಮಾರ್ ಅವರ ಕಟ್ಟಾ ಅಭಿಮಾನಿಯೊಬ್ಬರು ಬೆಂಗಳೂರು ಕೆಂಗೇರಿಯ ಬಾಬುಸಾಹೇಬ್ ಪಾಳ್ಯದ ತಮ್ಮ ಮನೆಯ ಆವರಣದಲ್ಲೇ ರಾಜ್ ಪ್ರತಿಮೆ ಸ್ಥಾಪಿಸಿದ್ದರು. ಅದರ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಘಣ್ಣ ಅಭಿಮಾನಿಗಳಲ್ಲಿ ಬೇವಿನ ಗಿಡ ನೆಡುವಂತೆ ಮನವಿ ಮಾಡಿದ್ದಾರೆ.
ಕಾರ್ಯಕ್ರಮದಲ್ಲಿ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದ ರಾಘಣ್ಣ, ಇನ್ಮುಂದೆ ನಾನು ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸ ಬೇಕಾದರೆ ಗಿಡ ನೆಡಬೇಕು ಎನ್ನುವ ಕಂಡೀಷನ್ ಹಾಕುತ್ತೇನೆ. ಇದಕ್ಕೆ ಒಪ್ಪಿದರೆ ಮಾತ್ರ ನಾನು ಕಾರ್ಯಕ್ರಮಕ್ಕೆ ಬರುತ್ತೇನೆ ಎಂದಿದ್ದಾರೆ.
ನಗರದಲ್ಲಿ ಎಲ್ಲೆಲ್ಲಿ ಅಪ್ಪಾಜಿಯ ಪ್ರತಿಮೆ ಇದೆಯೋ ಅಲ್ಲೆಲ್ಲಾ ಗಿಡ ನೆಡುವ ಕೆಲಸ ಆರಂಭವಾಗ ಬೇಕಾಗಿದೆ. ಇದಕ್ಕೆ ಅಭಿಮಾನಿಗಳ ಸಹಕಾರ ಅಗತ್ಯ ಎಂದು ರಾಘಣ್ಣ ಅಭಿಮಾನಿ ದೇವರುಗಳಲ್ಲಿ ಮನವಿ ಮಾಡಿದ್ದಾರೆ.
ಕೆಂಗೇರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿಶ್ವ ಒಕ್ಕಲಿಗ ಸಂಸ್ಥಾನದ ಶ್ರೀ. ಚಂದ್ರಶೇಖರ ಸ್ವಾಮೀಜಿ, ರಾಜ್ ಅಭಿಮಾನಿ ಸಂಘದ ಅಧ್ಯಕ್ಷ ಸಾ ರಾ ಗೋವಿಂದು ಮುಂತಾದವರು ಭಾಗವಹಿಸಿದ್ದರು.
ಡಾ. ರಾಜ್ ಹುಟ್ಟುಹಬ್ಬಕ್ಕೆ ಮುನ್ನ (ಏಪ್ರಿಲ್ 24) ಕನಿಷ್ಠ ಹತ್ತು ಸಾವಿರ ಬೇವಿನ ಗಿಡವನ್ನು ನೆಡಲು ಪಣತೊಟ್ಟಿರುವ ರಾಘಣ್ಣ, ಮುಂದಿನ ವರ್ಷದ ಅಪ್ಪಾಜಿಯ ಹುಟ್ಟುಹಬ್ಬಕ್ಕೆ ಮುನ್ನ ಕನಿಷ್ಠ ಒಂದು ಲಕ್ಷ ಗಿಡವನ್ನು ನೆಡುವ ಉದ್ದೇಶವನ್ನು ಹೊಂದಿದ್ದಾರೆ.