Don't Miss!
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- News Darshan: ಡಿ.ಕೆ. ಸುರೇಶ್ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಘಣ್ಣನ 25ನೇ ಚಿತ್ರ ಆರಂಭ: 'ಕಸ್ತೂರಿ ನಿವಾಸ' ನೆನಪಿಸಿದ ಟೈಟಲ್
ನಟ ರಾಘವೇಂದ್ರ ರಾಜ್ ಕುಮಾರ್ ತಮ್ಮ ಸೆಕೆಂಡ್ ಇನ್ನಿಂಗ್ಸ್ ಭರ್ಜರಿಯಾಗಿ ಆರಂಭಿಸಿದ್ದಾರೆ. ಬಣ್ಣ ಹಚ್ಚದೇ 13 ವರ್ಷ ಸುಮ್ಮನೆ ಕೂತಿದ್ದ ರಾಜ್ ಪುತ್ರ ಈಗ ಬ್ಯಾಕ್ ಟು ಬ್ಯಾಕ್ ಸಿನಿಮಾ ಮಾಡಲು ಮುಂದಾಗಿದ್ದಾರೆ.
'ಅಮ್ಮನ ಮನೆ' ಚಿತ್ರದ ಮೂಲಕ ಬೆಳ್ಳಿತೆರೆಗೆ ಮತ್ತೆ ಕಂಬ್ಯಾಕ್ ಮಾಡಿದ ರಾಘಣ್ಣ 'ತ್ರಯಂಬಕ' ಎಂಬ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಧ್ರುವ ಸರ್ಜಾ ಅಭಿನಯದ ಪೊಗರು ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಇನ್ನೊಂದು ಚಿತ್ರಕ್ಕೆ ಗ್ರೀನ್ ಕೊಡುವ ಮೂಲಕ ವೃತ್ತಿ ಜೀವನದ 25ನೇ ಚಿತ್ರ ಆರಂಭಿಸುತ್ತಿದ್ದಾರೆ.
ಹೌದು, ರಾಘವೇಂದ್ರ ರಾಜ್ ಕುಮಾರ್ ಅವರ 21ನೇ ಸಿನಿಮಾ ಮಾರ್ಚ್ 25ರಂದು ಶುರುವಾಗಲಿದೆ. 'ಆಡಿಸಿದಾತ' ಎಂದು ಈ ಚಿತ್ರಕ್ಕೆ ಹೆಸರಿಟ್ಟಿದ್ದು, ಫಣೀಶ್ ಭಾರಧ್ವಜ್ ನಿರ್ದೇಶನ ಮಾಡುತ್ತಿದ್ದಾರೆ. ಬಿ ಎಂ ಚೇತನ್ ಎಂಬುವರರು ಬಂಡವಾಳ ಹಾಕ್ತಿದ್ದಾರೆ.
Ammana mane review : ರಾಜೀವ ನಿಧಾನ.. ಸಂದೇಶವೇ ಪ್ರಧಾನ...
ಆಡಿಸಿದಾತ ಎಂದಾಕ್ಷಣ ಅಣ್ಣಾವ್ರ ಕಸ್ತೂರಿ ನಿವಾಸದ ಆಡಿಸಿದಾತ ಬೀಳಿಸಿನೋಡು....ಹಾಡು ನೆನಪಾಗುತ್ತೆ. ಈಗ ಅದೇ ಹಾಡಿನ ಸಾಲಿನಿಂದ ಶೀರ್ಷಿಕೆ ಇಟ್ಟುಕೊಂಡಿರುವ ಈ ಚಿತ್ರ ಕುತೂಹಲ ಮೂಡಿಸಿದೆ.
ರಾಘಣ್ಣ ಸಂದರ್ಶನ: 'ಅಮ್ಮನ ಮನೆ' ನಮ್ಮ ಅಮ್ಮ ಕಳುಹಿಸಿದ ಪ್ರಸಾದ
ಶ್ರೀನಿವಾಸ ಕಲ್ಯಾಣ ಚಿತ್ರದ ಮೂಲಕ ಬಾಲನಟನಾಗಿ ಎಂಟ್ರಿಯಾದ ರಾಘಣ್ಣ, ಚಿರಂಜೀವಿ ಸುಧಾಕರ್ ಸಿನಿಮಾದಲ್ಲಿ ನಾಯಕನಾಗಿ ಪರಿಚಯವಾದರು. ನಂತರ ನಂಜುಂಡಿ ಕಲ್ಯಾಣ, ಗಜಪತಿ ಗರ್ವಭಂಗ, ಅನುಕೂಲಕ್ಕೊಬ್ಬ ಗಂಡ, ಸ್ವಸ್ತಿಕ್, ಟುವ್ವಿ ಟುವ್ವಿ ಟುವ್ವಿ, ಶಿವರಂಜನಿ, ಪಕ್ಕದ್ಮನೆ ಹುಡುಗಿ ಅಂತಹ ಸಿನಿಮಾಗಳಲ್ಲಿ ನಟಿಸಿದ್ದಾರೆ.
ಈಗ ಆಡಿಸಿದಾತ ಚಿತ್ರಕ್ಕಾಗಿ ರಾಘಣ್ಣ ಅವರ ಫೋಟೋಶೂಟ್ ಕೂಡ ಮಾಡಿಸಿದ್ದು, ಹೊಸ ಲುಕ್ ನಲ್ಲಿ ಮಿಂಚುತ್ತಿದ್ದಾರೆ. ಅಂದ್ಹಾಗೆ, ಸೋಮವಾರ ಸಂಜೆ 5 ಗಂಟೆಗೆ ಕಂಠೀರವ ಸ್ಟುಡಿಯೋದಲ್ಲಿ 'ಆಡಿಸಿದಾತ' ಚಿತ್ರದ ಮುಹೂರ್ತ ಕಾರ್ಯಕ್ರಮ ನೆರವೇರಲಿದೆ.