Don't Miss!
- News Government Employees; ಸರ್ಕಾರಿ ನೌಕರರ ಜೀವ ವಿಮೆ ಪಾಲಿಸಿ ಅವಧಿ ಏರಿಕೆ
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹರಕೆ ತೀರಿಸಲು ಗೆಜ್ಜಲಗೆರೆ ಸಾಯಿಬಾಬಾನ ಸನ್ನಿಧಿಗೆ ರಾಘಣ್ಣ
ಡಾ.ರಾಜ್ ಕುಟುಂಬ ಇದೀಗ ದೇವರ ಮೊರೆ ಹೋಗಿದ್ದಾರೆ. ಇದೀಗ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಸಮೀಪವಿರುವ ಶಿರಡಿ ಸಾಯಿಬಾಬ ದೇವಾಲಯಕ್ಕೆ ಭೇಟಿ ನೀಡಿ ಬಾಬಾ ಅವರ ಕೃಪಾಕಟಾಕ್ಷೆ ಪಾತ್ರರಾಗಿದ್ದಾರೆ.
ಈ ಮೊದಲು ರಾಜ್ ಕುಟುಂಬದ ಕುಡಿ ಚಿತ್ರ ನಿರ್ಮಾಪಕ, ನಟ ರಾಘವೇಂದ್ರ ರಾಜ್ ಕುಮಾರ್ ಅವರು ಪಾರ್ಶ್ವವಾಯು ಪೀಡಿತರಾಗಿ ಒಂದು ಕೈಯ ಸ್ವಾಧೀನ ಕಳೆದುಕೊಂಡಿದ್ದ ಸಂದರ್ಭದಲ್ಲಿ ಶಿರಡಿ ಸಾಯಿಬಾಬ ಕ್ಷೇತ್ರಕ್ಕೆ ಭೇಟಿ ನೀಡಿದ್ದರು.
ಈ ಸಂದರ್ಭದಲ್ಲಿ ಶಿರಡಿ ಸಾಯಿಬಾಬ ಕೃಪೆಯಿಂದ ರಾಘವೇಂದ್ರ ಅವರು ಸಂಪೂರ್ಣ ಗುಣಮುಖರಾಗಿದ್ದು, ಬೆಳ್ಳಿ ಸಿಂಹಾಸನ ನೀಡುವುದಾಗಿ ಹರಕೆ ಹೊತ್ತಿದ್ದರು. ಇದೀಗ ಜುಲೈ 30ರಂದು ರಾಜ್ ಕುಟುಂಬ ವರ್ಗದವರು ಶಿರಡಿ ಸಾಯಿಬಾಬ ದೇವಾಲಯಕ್ಕೆ ಬೆಳ್ಳಿ ಸಿಂಹಾಸನ ಅರ್ಪಿಸಲಿದ್ದಾರೆ.
ಏನಾಗಿತ್ತು? :ಈ ಹಿಂದೆ ಪಾರ್ಶ್ವವಾಯುವಿಗೆ ತುತ್ತಾಗಿದ್ದ ರಾಘವೆಂದ್ರ ರಾಜ್ ಕುಮಾರ್ ಅವರಿಗೆ ಒಂದು ಕೈನ ಸ್ವಾಧೀನ ಕಳೆದುಕೊಂಡಿತ್ತು. ದೇಶ, ವಿದೇಶದಲ್ಲಿರುವ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗಲಿಲ್ಲ.
ಈ ಸಂದರ್ಭದಲ್ಲಿ ರಾಜ್ ಕುಟುಂಬದವರು ಮದ್ದೂರು ತಾಲೂಕು ಗೆಜ್ಜಲಗೆರೆ ಸಮೀಪವಿರುವ ಶಿರಡಿ ಸಾಯಿಬಾಬ ದೇವಾಲಯಕ್ಕೆ ಭೇಟಿ ನೀಡಿ, ಬಾಬಾ ಅವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ರಾಘಣ್ಣ ಭಕ್ತಿಪರವಶರಾಗಿ ತಾವೇ ನಿದಾನಕ್ಕೆ ಕೈ ಮುಗಿಯಲಾರಂಭಿಸಿದರಂತೆ.
ಇದರಿಂದ ಸಂತೋಷಗೊಂಡ ರಾಜ್ ಕುಟುಂಬ ಇದು ಬಾಬಾ ಅವರ ಪವಾಡ ಅಂತಾನೇ ನಂಬಿ ಇದೀಗ ಬಾಬಾ ಅವರಿಗೆ ವಿಶೇಷ ಸೇವೆ ಮಾಡುತ್ತಿದ್ದಾರೆ. ಇದೀಗ ವರನಟ ಡಾ.ರಾಜ್ ಕುಮಾರ್ ಅವರ ಹೆಸರಿನಲ್ಲಿ ಜುಲೈ 30ರಂದು ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಹಾಗೂ ಅವರ ಎಲ್ಲಾ ಕುಟುಂಬ ವರ್ಗದವರು ಶಿರಡಿ ಸಾಯಿ ಬಾಬಾ ಅವರಿಗೆ ಬೆಳ್ಳಿ ಸಿಂಹಾಸನ ಅರ್ಪಿಸಲಿದ್ದಾರೆ.