Don't Miss!
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- News ಐತಿಹಾಸಿಕ ಪ್ರಸಿದ್ಧ ವದ್ದಿಕೆರೆ ಸಿದ್ದಪ್ಪನ ಬಗ್ಗೆ ನಿಮಗೆಷ್ಟು ಗೊತ್ತು?-ಇಲ್ಲಿದೆ ಸಂಪೂರ್ಣ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿದ್ಧಗಂಗಾ ಮಠಕ್ಕೆ ರಾಘಣ್ಣ ಭೇಟಿ: 112 ಮಕ್ಕಳಿಗೆ ಶಿವಕುಮಾರ ಶ್ರೀ ಹೆಸರು
'ನಡೆದಾಡುವ ದೇವರು' ಎಂದೇ ಕರೆಸಿಕೊಳ್ಳುತ್ತಿದ್ದ ಡಾ ಶಿವಕುಮಾರ ಸ್ವಾಮೀಜಿ ಅವರ 112ನೇ ಹುಟ್ಟುಹಬ್ಬದ ಪ್ರಯುಕ್ತ ನಟ ರಾಘವೇಂದ್ರ ರಾಜ್ ಕುಮಾರ್ ನಿನ್ನೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದರು.
ಈ ವೇಳೆ 112 ಮಕ್ಕಳಿಗೆ ಶಿವಕುಮಾರಶ್ರೀ ಎಂದು ಹೆಸರಿಡಲಾಯಿತು. ಸಿದ್ಧಗಂಗಾ ಸ್ವಾಮೀಜಿಯ 112ನೇ ಜನುಮದಿನ ಆದ ಕಾರಣ 112 ಮಕ್ಕಳಿಗೆ ಹೆಸರಿಡುವಂತಹ ಕಾರ್ಯಕ್ರಮವನ್ನ ಮಠದಿಂದ ಹಮ್ಮಿಕೊಳ್ಳಲಾಗಿತ್ತು. ರಾಘವೇಂದ್ರ ರಾಜ್ ಕುಮಾರ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಮಕ್ಕಳಿಗೆ ಹೆಸರಿಟ್ಟರು.
'ದೊಡ್ಮನೆ' ನಟರ ಮೇಲಿತ್ತು ಸಿದ್ಧಗಂಗಾ ಶ್ರೀಗಳ ಆಶೀರ್ವಾದ
ಅಣ್ಣಾವ್ರ ಕುಟುಂಬಕ್ಕೆ ಮೊದಲಿನಿಂದಲೂ ಶಿವಕುಮಾರ ಸ್ವಾಮೀಜಿ ಅವರ ಮೇಲೆ ಹೆಚ್ಚು ನಂಬಿಕೆ, ಗೌರವ, ಪ್ರೀತಿ ಇದೆ. ರಾಜ್ ಕುಮಾರ್, ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಹೀಗೆ ದೊಡ್ಮನೆ ಸದಸ್ಯರೆಲ್ಲರೂ ಸಿದ್ಧಗಂಗಾ ಮಠದ ಭಕ್ತರು ಎನ್ನುವುದು ವಿಶೇಷ.
ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಶ್ರೀಗಳ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅಂದ್ಹಾಗೆ, ಸಿದ್ಧಗಂಗಾ ಮಠದ ಡಾ ಶಿವಕುಮಾರ ಸ್ವಾಮೀಜಿ ಅವರು ಜನವರಿ 21ರಂದು ಶಿವೈಕ್ಯರಾಗಿದ್ದರು.