Don't Miss!
- News ಇಂದು ಕರ್ನಾಟಕಕ್ಕೆ ಮೋದಿ :11 ಪ್ರಶ್ನೆಗಳ ಬಾಣ ಬಿಟ್ಟ ಸಿದ್ದರಾಮಯ್ಯ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉತ್ತರ ಕರ್ನಾಟಕದಲ್ಲಿ ಮಳೆ ಹಾನಿ: ಹುಟ್ಟುಹಬ್ಬ ಬೇಡ ಎಂದ ರಾಘಣ್ಣ
Recommended Video
ಉತ್ತರ ಕರ್ನಾಟಕದಲ್ಲಿ ಆಗಿರುವ ಮಳೆ ಹಾನಿಯಿಂದ ನಟ ರಾಘವೇಂದ್ರ ರಾಜ್ ಕುಮಾರ್ ನೊಂದಿದ್ದಾರೆ. ಹೀಗಾಗಿ, ಈ ವರ್ಷದ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದೆ ಇರಲು ನಿರ್ಧಾರ ಮಾಡಿದ್ದಾರೆ.
ಆಗಸ್ಟ್ 15 ರಾಘವೇಂದ್ರ ರಾಜ್ ಕುಮಾರ್ ಹುಟ್ಟಿದ ದಿನ. ಪ್ರತಿ ವರ್ಷ ಕೂಡ ಅಭಿಮಾನಿಗಳ ಜೊತೆಗೆ ಬರ್ತ್ ಡೇ ಆಚರಣೆ ಮಾಡುತ್ತಿದ್ದ ರಾಘವೇಂದ್ರ ರಾಜ್ ಕುಮಾರ್ ಈ ಬಾರಿ ಇದಕ್ಕೆ ಬ್ರೇಕ್ ಹಾಕಿದ್ದಾರೆ. ಉತ್ತರ ಕರ್ನಾಟಕದಲ್ಲಿ ಇರುವ ಪರಿಸ್ಥಿತಿ ನಡುವೆ ಸಂಭ್ರಮಿಸೋದು ಸರಿಯಲ್ಲ ಎಂದಿದ್ದಾರೆ.
ಉತ್ತರ ಕರ್ನಾಟಕದ ಜಾನುವಾರುಗಳಿಗೆ ಮೇವು ನೀಡಿದ ನಟಿ ಲೀಲಾವತಿ
ಈ ಬಗ್ಗೆ ವಿಡಿಯೋದಲ್ಲಿ ಮಾತನಾಡಿರುವ ಅವರು ''ಆಗಸ್ಟ್ 15 ರಂದು, ಈ ವರ್ಷ ನನ್ನ ಹುಟ್ಟುಹಬ್ಬ ಮಾಡಿಕೊಳ್ಳುತ್ತಿಲ್ಲ. ನಾನು ಊರಿನಲ್ಲಿ ಇರುವುದಿಲ್ಲ. ದೇವಸ್ಥಾನಕ್ಕೆ ಹೋಗಿ ಉತ್ತರ ಕರ್ನಾಟಕದ ಜನರಿಗಾಗಿ ಪ್ರಾರ್ಥನೆ ಮಾಡುತ್ತೇನೆ. ಕೇಕ್, ಪಟಾಕಿ, ಹಾರಕ್ಕೆ ದುಡ್ಡು ಖರ್ಚು ಮಾಡುವ ಬದಲು ಅದನ್ನು ಜನರಿಗೆ ನೀಡಿ'' ಎಂದು ಹೇಳಿದ್ದಾರೆ.
''ಅಪ್ಪಾಜಿ ಇದ್ದರು ಇದೇ ಕೆಲಸ ಮಾಡುತ್ತಿದ್ದರು. ಉತ್ತರ ಕರ್ನಾಟಕದ ಜನ ಕಷ್ಟದಲ್ಲಿ ಇರುವಾಗ ನಾನು ಖುಷಿ ಪಡುವುದು ಸರಿ ಅಲ್ಲ.'' ಎಂದು ರಾಘವೇಂದ್ರ ರಾಜ್ ಕುಮಾರ್ ತಮ್ಮ ನಿರ್ಧಾರವನ್ನು ಅಭಿಮಾನಿಗಳ ಮುಂದೆ ಇಟ್ಟಿದ್ದಾರೆ.