Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉತ್ತರ ಕರ್ನಾಟಕದಲ್ಲಿ ಮಳೆ ಹಾನಿ: ಹುಟ್ಟುಹಬ್ಬ ಬೇಡ ಎಂದ ರಾಘಣ್ಣ
Recommended Video
ಉತ್ತರ ಕರ್ನಾಟಕದಲ್ಲಿ ಆಗಿರುವ ಮಳೆ ಹಾನಿಯಿಂದ ನಟ ರಾಘವೇಂದ್ರ ರಾಜ್ ಕುಮಾರ್ ನೊಂದಿದ್ದಾರೆ. ಹೀಗಾಗಿ, ಈ ವರ್ಷದ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದೆ ಇರಲು ನಿರ್ಧಾರ ಮಾಡಿದ್ದಾರೆ.
ಆಗಸ್ಟ್ 15 ರಾಘವೇಂದ್ರ ರಾಜ್ ಕುಮಾರ್ ಹುಟ್ಟಿದ ದಿನ. ಪ್ರತಿ ವರ್ಷ ಕೂಡ ಅಭಿಮಾನಿಗಳ ಜೊತೆಗೆ ಬರ್ತ್ ಡೇ ಆಚರಣೆ ಮಾಡುತ್ತಿದ್ದ ರಾಘವೇಂದ್ರ ರಾಜ್ ಕುಮಾರ್ ಈ ಬಾರಿ ಇದಕ್ಕೆ ಬ್ರೇಕ್ ಹಾಕಿದ್ದಾರೆ. ಉತ್ತರ ಕರ್ನಾಟಕದಲ್ಲಿ ಇರುವ ಪರಿಸ್ಥಿತಿ ನಡುವೆ ಸಂಭ್ರಮಿಸೋದು ಸರಿಯಲ್ಲ ಎಂದಿದ್ದಾರೆ.
ಉತ್ತರ ಕರ್ನಾಟಕದ ಜಾನುವಾರುಗಳಿಗೆ ಮೇವು ನೀಡಿದ ನಟಿ ಲೀಲಾವತಿ
ಈ ಬಗ್ಗೆ ವಿಡಿಯೋದಲ್ಲಿ ಮಾತನಾಡಿರುವ ಅವರು ''ಆಗಸ್ಟ್ 15 ರಂದು, ಈ ವರ್ಷ ನನ್ನ ಹುಟ್ಟುಹಬ್ಬ ಮಾಡಿಕೊಳ್ಳುತ್ತಿಲ್ಲ. ನಾನು ಊರಿನಲ್ಲಿ ಇರುವುದಿಲ್ಲ. ದೇವಸ್ಥಾನಕ್ಕೆ ಹೋಗಿ ಉತ್ತರ ಕರ್ನಾಟಕದ ಜನರಿಗಾಗಿ ಪ್ರಾರ್ಥನೆ ಮಾಡುತ್ತೇನೆ. ಕೇಕ್, ಪಟಾಕಿ, ಹಾರಕ್ಕೆ ದುಡ್ಡು ಖರ್ಚು ಮಾಡುವ ಬದಲು ಅದನ್ನು ಜನರಿಗೆ ನೀಡಿ'' ಎಂದು ಹೇಳಿದ್ದಾರೆ.
''ಅಪ್ಪಾಜಿ ಇದ್ದರು ಇದೇ ಕೆಲಸ ಮಾಡುತ್ತಿದ್ದರು. ಉತ್ತರ ಕರ್ನಾಟಕದ ಜನ ಕಷ್ಟದಲ್ಲಿ ಇರುವಾಗ ನಾನು ಖುಷಿ ಪಡುವುದು ಸರಿ ಅಲ್ಲ.'' ಎಂದು ರಾಘವೇಂದ್ರ ರಾಜ್ ಕುಮಾರ್ ತಮ್ಮ ನಿರ್ಧಾರವನ್ನು ಅಭಿಮಾನಿಗಳ ಮುಂದೆ ಇಟ್ಟಿದ್ದಾರೆ.