Don't Miss!
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
14 ವರ್ಷ ವನವಾಸ ಮುಗಿಸಿದ ರಾಘವೇಂದ್ರ ರಾಜ್ ಕುಮಾರ್
Recommended Video
ರಾಘವೆಂದ್ರ ರಾಜ್ ಕುಮಾರ್ ಅಂದ ತಕ್ಷಣ ಅವರು ಅಭಿನಯಿಸಿದ ಸಿನಿಮಾಗಳು ನೆನಪಾಗುತ್ತವೆ. ವಿಶೇಷ ಅಂದರೆ ರಾಘಣ್ಣ ಅಭಿನಯಸಿದ ಚಿತ್ರಗಳ ಹಾಡುಗಳೆಲ್ಲವೂ ಸೂಪರ್ ಹಿಟ್. ಹಿಂದಿಗೂ ರಾಘವೇಂದ್ರ ರಾಜ್ ಕುಮಾರ್ ಅವರ ಸಿನಿಮಾಗಳು ಟಿವಿಯಲ್ಲಿ ಬಂದರೆ ಅಭಿಮಾನಿಗಳು ಖುಷಿ ಖುಷಿಯಿಂದ ನೋಡುತ್ತಾರೆ. ಅಷ್ಟರ ಮಟ್ಟಿಗೆ ರಾಘಣ್ಣನ ಚಿತ್ರಗಳು ನೋಡುಗರನ್ನ ಆಕರ್ಷಣೆ ಮಾಡಿತ್ತು.
ರಾಘವೆಂದ್ರ ರಾಜ್ ಕುಮಾರ್ ಕೇವಲ ಅಭಿನಯ ಮಾತ್ರವಲ್ಲದೆ ಗಾಯನ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದರು. ಅವರದ್ದೇ ಚಿತ್ರದಲ್ಲಿ ಹಾಡುಗಳನ್ನೂ ಹಾಡಿದ್ದರು. ಅವರ ಕಂಠದಿಂದ ಬಂದ ಹಾಡುಗಳಿಗೂ ಅದೆಷ್ಟೋ ಅಭಿಮಾನಿಗಳಿದ್ದಾರೆ. ಆದರೆ ರಾಘಣ್ಣ ಆರೋಗ್ಯ ಸಮಸ್ಯೆಯಿಂದ ಹಾಡುವುದನ್ನು ಹಾಗೂ ಅಭಿನಯಿಸುವುದನ್ನು ನಿಲ್ಲಿಸಿದ್ದರು.
ಹೆಸರು ಬದಲಾವಣೆ ಗುಟ್ಟು ಬಿಚ್ಚಿಟ್ಟ ರಾಜ್ ಮೊಮ್ಮಗ
ಸುಮಾರು 14 ವರ್ಷದ ಹಿಂದೆ 'ಪಕ್ಕದ ಮನೆ ಹುಡುಗಿ' ಚಿತ್ರವೇ ರಾಘವೇಂದ್ರ ರಾಜ್ ಕುಮಾರ್ ಅಭಿನಯಿಸಿದ ಕಡೆಯ ಸಿನಿಮಾ. ಅದಾದ ನಂತರ ನಿರ್ಮಾಣದ ಕೆಲಸವನ್ನ ನೋಡಿಕೊಂಡಿದ್ದರು. ಆದರೆ ರಾಘಣ್ಣ ಮತ್ತೆ ಬೆಳ್ಳಿ ಪರದೆ ಮೇಲೆ ಮಿಂಚಲಿದ್ದಾರೆ ಎನ್ನುವ ಸೂಚನೆ ಸಿಕ್ಕಿದೆ. ಹಾಗಾದರೆ ಯಾವ ಸಿನಿಮಾದಲ್ಲಿ ಅಭಿನಯಿಸುತ್ತಾರೆ? ಇಲ್ಲಿದೆ ಸಂಪೂರ್ಣ ಮಾಹಿತಿ ಮುಂದೆ ಓದಿ
ವಿಲನ್ ಆದ ರಾಘವೇಂದ್ರ ರಾಜ್ ಕುಮಾರ್
ರಾಘವೇಂದ್ರ ರಾಜ್ ಕುಮಾರ್ ಮತ್ತೆ ಸಿನಿಮಾದಲ್ಲಿ ಅಭಿನಯಿಸಲು ಮನಸ್ಸು ಮಾಡಿದ್ದಾರೆ. ಚಿಲಂ ಎಂಬ ಸಿನಿಮಾದಲ್ಲಿ ರಾಘಣ್ಣ ಇದೇ ಮೊದಲ ಬಾರಿಗೆ ಖಳನಟನಾಗಿ ಅಭಿನಯಿಸುವ ಸಾಧ್ಯತೆಗಳು ಹೆಚ್ಚಾಗಿದೆಯಂತೆ.
ಮನೋರಂಜನ್ ಜೊತೆ ರಾಘಣ್ಣ
ಚಿಲಂ ಮನೋರಂಜನ್ ರವಿಚಂದ್ರನ್ ನಾಯಕನಾಗಿ ಅಭಿನಯ ಮಾಡುತ್ತಿರುವ ಸಿನಿಮಾ. ಇದೇ ಸಿನಿಮಾದಲ್ಲಿ ರಾಘವೇಂದ್ರ ರಾಜ್ ಕುಮಾರ್ ವಿಲನ್ ಆಗಿ ಆಕ್ಟ್ ಮಾಡುತ್ತಿದ್ದಾರೆ.
ಕ್ವಾಟ್ಲೆ ನಿರ್ದೇಶಕರ ಸಿನಿಮಾ
ಈ ಹಿಂದೆ ಚಂದನವನದಲ್ಲಿ ಕ್ವಾಟ್ಲೆ ಎನ್ನುವ ಸಿನಿಮಾವನ್ನ ನಿರ್ದೇಶನ ಮಾಡಿ ಗುರುತಿಸಿಕೊಂಡಿದ್ದ ಚಂದ್ರಕಲಾ ಚಿಲಂ ಸಿನಿಮಾವನ್ನ ನಿರ್ದೇಶನ ಮಾಡುತ್ತಿದ್ದಾರೆ. ಡ್ರಗ್ಸ್ ಮಾಫಿಯಾ ಬಗೆಗಿನ ಕಥೆಯ ಚಿತ್ರವಿದು.
ಕಥೆ ಕೇಳಿರುವ ರಾಘವೇಂದ್ರ ರಾಜ್ ಕುಮಾರ್
ಈಗಾಗಲೇ ಚಿಲಂ ಸಿನಿಮಾದ ಕಥೆಯನ್ನ ಕೇಳಿರುವ ರಾಘವೇಂದ್ರ ರಾಜ್ ಕುಮಾರ್ ಚಿತ್ರದಲ್ಲಿನ ತಮ್ಮ ಪಾತ್ರದ ಬಗ್ಗೆ ಮೆಚ್ಚುಗೆಯನ್ನ ವ್ಯಕ್ತ ಪಡಿಸಿದ್ದಾರಂತೆ. ಸಾಕಷ್ಟು ದಿನಗಳ ನಂತರ ಮತ್ತೆ ಬಣ್ಣ ಹಚ್ಚಲು ಮುಂದಾಗಿದ್ದು ಅಂತಿಮ ನಿರ್ಧಾರವಷ್ಟೇ ಬಾಕಿ ಉಳಿದಿದೆ.