Don't Miss!
- News
ಮಾನ್ವಿ: ಮಂಜೂರಾದ ಬಡವರ ಭೂಮಿಗೆ ಕಣ್ಣು ಹಾಕಿದ ಪ್ರಭಾವಿಗಳು, ಜನಾಕ್ರೋಶ
- Sports
LLC 2023: ಲೆಜೆಂಡ್ಸ್ ಲೀಗ್ನಲ್ಲಿ ಕೈಫ್, ಗೇಲ್, ಗಂಭೀರ್ ಸೇರಿದಂತೆ ಹಲವು ಸ್ಟಾರ್ಗಳು
- Lifestyle
ಆರೋಗ್ಯವಾಗಿರಬೇಕೆ? ಹಾಗಾದರೆ ನೀವು 3 ವಿಷಯಗಳಲ್ಲಿ ನಂಬಿಕೆ ಇಡಲೇಬೇಕು
- Finance
Jio 5G services: ಇಂದಿನಿಂದ ಮತ್ತೆ 34 ನಗರಗಳಲ್ಲಿ ಪ್ರಾರಂಭ- ಮಧ್ಯ ಕರ್ನಾಟಕದ ಯಾವ ನಗರಕ್ಕೆ ಕೊಡುಗೆ? ಮಾಹಿತಿ ಪಡೆಯಿರಿ
- Automobiles
ಪೆಟ್ರೋಲ್ ಬೆಲೆ ಏರಿಕೆ ಚಿಂತೆ ಬಿಡಿ: ರೂ.1 ಲಕ್ಷ ಇದ್ರೆ ಆಕ್ಟಿವಾವನ್ನು ಎಲೆಕ್ಟ್ರಿಕ್ ಸ್ಕೂಟರ್ ಆಗಿ ಪರಿವರ್ತಿಸಬ
- Technology
ಆಂಡ್ರಾಯ್ಡ್ ಬಳಕೆದಾರರಿಗಾಗಿ 'ಕಿಡ್ಸ್ ಮಿಸ್ಟರಿ ಬಾಕ್ಸ್' ಫೀಚರ್ಸ್ ಪರಿಚಯಿಸಿದ ನೆಟ್ಫ್ಲಿಕ್ಸ್!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಆತ್ಮಹತ್ಯೆ ಯೋಚನೆ ಮಾಡಿದ್ದ ರಘು ದೀಕ್ಷಿತ್: ಅಂತರಂಗ ಬಿಚ್ಚಿಟ್ಟ ಗಾಯಕ
ಖ್ಯಾತ ಸಂಗೀತಗಾರ, ಗಾಯಕ ರಘು ದೀಕ್ಷಿತ್, ತಾವು ಖಿನ್ನತೆಗೆ ಒಳಗಾಗಿದ್ದರ ಬಗ್ಗೆ ಮಾತನಾಡಿದ್ದಾರೆ. ಆತ್ಮಹತ್ಯೆಯ ಅಂಚಿಗೆ ಹೋಗಿ ಹೊರಗೆ ಬಂದ ಅನುಭವವನ್ನು ಅವರು ಹಂಚಿಕೊಂಡಿದ್ದಾರೆ.
Recommended Video
ಸುಶಾಂತ್ ಸಿಂಗ್ ಸಾವಿನ ಬಳಿಕ ಖಿನ್ನತೆ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು, ಇದೀಗ ರಘು ದೀಕ್ಷಿತ್ ಅವರು, ನಿರೂಪಕಿ ಅನುಶ್ರಿ ಅವರೊಟ್ಟಿಗಿನ ಯೂಟ್ಯೂಬ್ ಸಂವಾದದಲ್ಲಿ ತಾವು ಅನುಭವಿಸಿದ ಖಿನ್ನತೆ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.
ವಿಚ್ಛೇದನ
ಕೋರಿ
ಕೋರ್ಟ್
ಮೆಟ್ಟಿಲೇರಿದ
ಖ್ಯಾತ
ಗಾಯಕ
ರಘುದೀಕ್ಷಿತ್
ದಂಪತಿ
ಲಾಕ್ಡೌನ್ ಸಮಯದಲ್ಲಿ ಬದುಕುವುದೋ-ಸಾಯುವುದೋ ಎಂಬ ಆಲೋಚನೆಗಳು ನನ್ನ ತಲೆಗೆ ಬಂದಿತ್ತು. ಬಹು ಕಷ್ಟ ಪಟ್ಟು, ಸೂಕ್ತ ಚಿಕಿತ್ಸೆಗಳನ್ನು ಪಡೆದುಕೊಂಡು ಖಿನ್ನತೆಯಿಂದ ಹೊರಗೆ ಬಿದ್ದೆ ಎಂದಿದ್ದಾರೆ ರಘು ದೀಕ್ಷಿತ್.

3-4 ವರ್ಷದಿಂದಲೂ ಖಿನ್ನತೆಯಿಂದ ಬಳಲಿದ್ದ ರಘು
ಅನುಶ್ರೀ ಜೊತೆಗೆ ಮಾತುಕತೆಯಲ್ಲಿ ತಮ್ಮ ಖಿನ್ನತೆಯ ಬಗ್ಗೆ ಮಾತನಾಡಿದ ರಘು ದೀಕ್ಷಿತ್, ಕಳೆದ 3-4 ವರ್ಷಗಳಿಂದಲೂ ಖಿನ್ನತೆಯಿಂದ ಬಳಲುತ್ತಿದ್ದೆ. ಆದರೆ ಇತ್ತೀಚೆಗೆ ಅದಕ್ಕೆ ಸೂಕ್ತ ಚಿಕಿತ್ಸೆ ಪಡೆದುಕೊಂಡು ಖಿನ್ನತೆಯನ್ನು ಹೋಗಲಾಡಿಸಿಕೊಂಡಿದ್ದೇನೆ ಎಂದಿದ್ದಾರೆ.

ಲಾಕ್ಡೌನ್ ಸಮಯದಲ್ಲಿ ತೀವ್ರ ಖಿನ್ನತೆ
ಲಾಕ್ಡೌನ್ ಸಮಯದಲ್ಲಂತೂ ನಾನು ತೀವ್ರ ಖಿನ್ನತೆ ಅನುಭವಿಸಿದೆ. ಸದಾ ಬೆಡ್ ಮೇಲೆ ಮಲಗಿರುತ್ತಿದ್ದೆ. ಸ್ವಿಗ್ಗಿಯಿಂದ ಊಟ ಆರ್ಡರ್ ಮಾಡಿಕೊಂಡು ತಿನ್ನುತ್ತಿದ್ದೆ. ಶೌಚಾಲಯಕ್ಕೆ ಮಾತ್ರವೇ ಎದ್ದು ನಡೆದುಕೊಂಡು ಹೋಗುತ್ತಿದ್ದೆ, ವಿಪರೀತ ದೇಹ ತೂಕ ಹೆಚ್ಚು ಮಾಡಿಕೊಂಡಿದ್ದೆ ಎಂದಿದ್ದಾರೆ ರಘು.