Don't Miss!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- News Rameshwar Cafe: ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣ: ದಾಳಿಗೆ ಸಹಾಯ ಮಾಡಿದ ವ್ಯಕ್ತಿ ಬಂಧನ- ತೀರ್ಥಹಳ್ಳಿ ಉಗ್ರನೊಂದಿಗೆ ಸಂಪರ್
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Lifestyle 2024: ಮದುವೆ, ಗಾಡಿ ಖರೀದಿ, ಗೃಹ ಪ್ರವೇಶ ಹೀಗೆ ಶುಭ ಕಾರ್ಯಕ್ಕೆ ಏಪ್ರಿಲ್ನಲ್ಲಿರುವ ಶುಭ ದಿನಾಂಕಗಳಿವು
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆತ್ಮಹತ್ಯೆ ಯೋಚನೆ ಮಾಡಿದ್ದ ರಘು ದೀಕ್ಷಿತ್: ಅಂತರಂಗ ಬಿಚ್ಚಿಟ್ಟ ಗಾಯಕ
ಖ್ಯಾತ ಸಂಗೀತಗಾರ, ಗಾಯಕ ರಘು ದೀಕ್ಷಿತ್, ತಾವು ಖಿನ್ನತೆಗೆ ಒಳಗಾಗಿದ್ದರ ಬಗ್ಗೆ ಮಾತನಾಡಿದ್ದಾರೆ. ಆತ್ಮಹತ್ಯೆಯ ಅಂಚಿಗೆ ಹೋಗಿ ಹೊರಗೆ ಬಂದ ಅನುಭವವನ್ನು ಅವರು ಹಂಚಿಕೊಂಡಿದ್ದಾರೆ.
Recommended Video
ಸುಶಾಂತ್ ಸಿಂಗ್ ಸಾವಿನ ಬಳಿಕ ಖಿನ್ನತೆ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು, ಇದೀಗ ರಘು ದೀಕ್ಷಿತ್ ಅವರು, ನಿರೂಪಕಿ ಅನುಶ್ರಿ ಅವರೊಟ್ಟಿಗಿನ ಯೂಟ್ಯೂಬ್ ಸಂವಾದದಲ್ಲಿ ತಾವು ಅನುಭವಿಸಿದ ಖಿನ್ನತೆ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.
ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ ಖ್ಯಾತ ಗಾಯಕ ರಘುದೀಕ್ಷಿತ್ ದಂಪತಿ
ಲಾಕ್ಡೌನ್ ಸಮಯದಲ್ಲಿ ಬದುಕುವುದೋ-ಸಾಯುವುದೋ ಎಂಬ ಆಲೋಚನೆಗಳು ನನ್ನ ತಲೆಗೆ ಬಂದಿತ್ತು. ಬಹು ಕಷ್ಟ ಪಟ್ಟು, ಸೂಕ್ತ ಚಿಕಿತ್ಸೆಗಳನ್ನು ಪಡೆದುಕೊಂಡು ಖಿನ್ನತೆಯಿಂದ ಹೊರಗೆ ಬಿದ್ದೆ ಎಂದಿದ್ದಾರೆ ರಘು ದೀಕ್ಷಿತ್.
3-4 ವರ್ಷದಿಂದಲೂ ಖಿನ್ನತೆಯಿಂದ ಬಳಲಿದ್ದ ರಘು
ಅನುಶ್ರೀ ಜೊತೆಗೆ ಮಾತುಕತೆಯಲ್ಲಿ ತಮ್ಮ ಖಿನ್ನತೆಯ ಬಗ್ಗೆ ಮಾತನಾಡಿದ ರಘು ದೀಕ್ಷಿತ್, ಕಳೆದ 3-4 ವರ್ಷಗಳಿಂದಲೂ ಖಿನ್ನತೆಯಿಂದ ಬಳಲುತ್ತಿದ್ದೆ. ಆದರೆ ಇತ್ತೀಚೆಗೆ ಅದಕ್ಕೆ ಸೂಕ್ತ ಚಿಕಿತ್ಸೆ ಪಡೆದುಕೊಂಡು ಖಿನ್ನತೆಯನ್ನು ಹೋಗಲಾಡಿಸಿಕೊಂಡಿದ್ದೇನೆ ಎಂದಿದ್ದಾರೆ.
ಲಾಕ್ಡೌನ್ ಸಮಯದಲ್ಲಿ ತೀವ್ರ ಖಿನ್ನತೆ
ಲಾಕ್ಡೌನ್ ಸಮಯದಲ್ಲಂತೂ ನಾನು ತೀವ್ರ ಖಿನ್ನತೆ ಅನುಭವಿಸಿದೆ. ಸದಾ ಬೆಡ್ ಮೇಲೆ ಮಲಗಿರುತ್ತಿದ್ದೆ. ಸ್ವಿಗ್ಗಿಯಿಂದ ಊಟ ಆರ್ಡರ್ ಮಾಡಿಕೊಂಡು ತಿನ್ನುತ್ತಿದ್ದೆ. ಶೌಚಾಲಯಕ್ಕೆ ಮಾತ್ರವೇ ಎದ್ದು ನಡೆದುಕೊಂಡು ಹೋಗುತ್ತಿದ್ದೆ, ವಿಪರೀತ ದೇಹ ತೂಕ ಹೆಚ್ಚು ಮಾಡಿಕೊಂಡಿದ್ದೆ ಎಂದಿದ್ದಾರೆ ರಘು.