Don't Miss!
- News India Rain: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆ, ಹಿಮಪಾತ ಸಾಧ್ಯತೆ: ಭಾರತದ ಈ ಭಾಗದಲ್ಲಿ ತಂಪೆರೆಯಲಿರುವ ವರುಣ
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Technology Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆತ್ಮಹತ್ಯೆ ಯೋಚನೆ ಮಾಡಿದ್ದ ರಘು ದೀಕ್ಷಿತ್: ಅಂತರಂಗ ಬಿಚ್ಚಿಟ್ಟ ಗಾಯಕ
ಖ್ಯಾತ ಸಂಗೀತಗಾರ, ಗಾಯಕ ರಘು ದೀಕ್ಷಿತ್, ತಾವು ಖಿನ್ನತೆಗೆ ಒಳಗಾಗಿದ್ದರ ಬಗ್ಗೆ ಮಾತನಾಡಿದ್ದಾರೆ. ಆತ್ಮಹತ್ಯೆಯ ಅಂಚಿಗೆ ಹೋಗಿ ಹೊರಗೆ ಬಂದ ಅನುಭವವನ್ನು ಅವರು ಹಂಚಿಕೊಂಡಿದ್ದಾರೆ.
Recommended Video
ಸುಶಾಂತ್ ಸಿಂಗ್ ಸಾವಿನ ಬಳಿಕ ಖಿನ್ನತೆ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು, ಇದೀಗ ರಘು ದೀಕ್ಷಿತ್ ಅವರು, ನಿರೂಪಕಿ ಅನುಶ್ರಿ ಅವರೊಟ್ಟಿಗಿನ ಯೂಟ್ಯೂಬ್ ಸಂವಾದದಲ್ಲಿ ತಾವು ಅನುಭವಿಸಿದ ಖಿನ್ನತೆ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.
ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ ಖ್ಯಾತ ಗಾಯಕ ರಘುದೀಕ್ಷಿತ್ ದಂಪತಿ
ಲಾಕ್ಡೌನ್ ಸಮಯದಲ್ಲಿ ಬದುಕುವುದೋ-ಸಾಯುವುದೋ ಎಂಬ ಆಲೋಚನೆಗಳು ನನ್ನ ತಲೆಗೆ ಬಂದಿತ್ತು. ಬಹು ಕಷ್ಟ ಪಟ್ಟು, ಸೂಕ್ತ ಚಿಕಿತ್ಸೆಗಳನ್ನು ಪಡೆದುಕೊಂಡು ಖಿನ್ನತೆಯಿಂದ ಹೊರಗೆ ಬಿದ್ದೆ ಎಂದಿದ್ದಾರೆ ರಘು ದೀಕ್ಷಿತ್.
3-4 ವರ್ಷದಿಂದಲೂ ಖಿನ್ನತೆಯಿಂದ ಬಳಲಿದ್ದ ರಘು
ಅನುಶ್ರೀ ಜೊತೆಗೆ ಮಾತುಕತೆಯಲ್ಲಿ ತಮ್ಮ ಖಿನ್ನತೆಯ ಬಗ್ಗೆ ಮಾತನಾಡಿದ ರಘು ದೀಕ್ಷಿತ್, ಕಳೆದ 3-4 ವರ್ಷಗಳಿಂದಲೂ ಖಿನ್ನತೆಯಿಂದ ಬಳಲುತ್ತಿದ್ದೆ. ಆದರೆ ಇತ್ತೀಚೆಗೆ ಅದಕ್ಕೆ ಸೂಕ್ತ ಚಿಕಿತ್ಸೆ ಪಡೆದುಕೊಂಡು ಖಿನ್ನತೆಯನ್ನು ಹೋಗಲಾಡಿಸಿಕೊಂಡಿದ್ದೇನೆ ಎಂದಿದ್ದಾರೆ.
ಲಾಕ್ಡೌನ್ ಸಮಯದಲ್ಲಿ ತೀವ್ರ ಖಿನ್ನತೆ
ಲಾಕ್ಡೌನ್ ಸಮಯದಲ್ಲಂತೂ ನಾನು ತೀವ್ರ ಖಿನ್ನತೆ ಅನುಭವಿಸಿದೆ. ಸದಾ ಬೆಡ್ ಮೇಲೆ ಮಲಗಿರುತ್ತಿದ್ದೆ. ಸ್ವಿಗ್ಗಿಯಿಂದ ಊಟ ಆರ್ಡರ್ ಮಾಡಿಕೊಂಡು ತಿನ್ನುತ್ತಿದ್ದೆ. ಶೌಚಾಲಯಕ್ಕೆ ಮಾತ್ರವೇ ಎದ್ದು ನಡೆದುಕೊಂಡು ಹೋಗುತ್ತಿದ್ದೆ, ವಿಪರೀತ ದೇಹ ತೂಕ ಹೆಚ್ಚು ಮಾಡಿಕೊಂಡಿದ್ದೆ ಎಂದಿದ್ದಾರೆ ರಘು.