Don't Miss!
- Finance ಅಯೋಧ್ಯೆಯಲ್ಲಿ ಓಲಾ ಕ್ಯಾಬ್ ಸೇವೆ ಆರಂಭ
- News Samsung: ಮಾರುಕಟ್ಟೆ ಗ್ರ್ಯಾಂಡ್ ಎಂಟ್ರಿ ನೀಡಿದೆ ನ್ಯೂ ಫೋನ್
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎನ್ಡಿಪಿಎಸ್ ಕೋರ್ಟ್ ಮುಂದೆ ಮೂರು ಕೋರಿಕೆಯಿಟ್ಟ ನಟಿ ರಾಗಿಣಿ
ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಜೈಲಿನಲ್ಲಿರುವ ನಟಿ ರಾಗಿಣಿ ದ್ವಿವೇದಿ ಎನ್ಡಿಪಿಎಸ್ ವಿಶೇಷ ಕೋರ್ಟ್ ಮುಂದೆ ಮೂರು ಕೋರಿಕೆಯನ್ನಿಟ್ಟಿದ್ದಾರೆ. ರಾಗಿಣಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ಸೆಪ್ಟೆಂಬರ್ 28 ರಂದು ವಜಾಗೊಳಿಸಿ, ಅಕ್ಟೋಬರ್ 23ರವರೆಗೂ ನ್ಯಾಯಾಂಗ ಬಂಧನ ಮುಂದುವರಿಸುವಂತೆ ಆದೇಶಿಸಿತ್ತು.
ಇದರಿಂದ ಮತ್ತೆ ಕಂಗಲಾದ ನಟಿ ರಾಗಿಣಿ ದ್ವಿವೇದಿ ಪರ ವಕೀಲರು ಸೋಮವಾರ ಎನ್ಡಿಪಿಎಸ್ ಕೋರ್ಟ್ಗೆ ಮೂರು ಅರ್ಜಿಗಳನ್ನು ಸಲ್ಲಿಸಿದ್ದಾರೆ. ನಟಿ ರಾಗಿಣಿ ದ್ವಿವೇದಿ ಸಲ್ಲಿರುವ ಮೂರು ಅರ್ಜಿಗಳ ವಿಚಾರಣೆ ನಡೆಸಿಲಿರುವ ಕೋರ್ಟ್ ಅದಕ್ಕೆ ಸಮ್ಮತಿ ನೀಡುತ್ತಾ ಎಂಬ ಕುತೂಹಲ ಕಾಡಿದೆ. ಅಷ್ಟಕ್ಕೂ, ಏನದು ಮೂರು ಕೋರಿಕೆ? ಮುಂದೆ ಓದಿ...
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ
ಬೆನ್ನು ನೋವಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡಬೇಕು ಎಂಬುದು ಮೊದಲ ಮನವಿಯಾಗಿದೆ. ರಾಗಿಣಿ ದ್ವಿವೇದಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಂದರ್ಭದಲ್ಲಿ ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು ಎಂದು ನ್ಯಾಯಾಲಯ ಸೂಚನೆ ನೀಡಿತ್ತು. ಆದರೆ, ಈಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಮನವಿ ಮಾಡಲಾಗಿದೆ.
ನಟಿಯರ ನ್ಯಾಯಾಂಗ ಬಂಧನ ವಿಸ್ತರಣೆ: ಹೈ ಕೋರ್ಟ್ ಮೊರೆ ಹೋದ ಸಂಜನಾ
ಕುಟುಂಬ ಸದಸ್ಯರ ಭೇಟಿಗೆ ಅವಕಾಶ
ರಾಗಿಣಿ ದ್ವಿವೇದಿ ಸೆಪ್ಟೆಂಬರ್ 14ರಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೆ, ಕುಟುಂಬದವರನ್ನು ಭೇಟಿ ಮಾಡಲು ಅವಕಾಶ ಕೊಟ್ಟಿಲ್ಲ. ಹೀಗಾಗಿ, ಕುಟುಂಬದವರು, ವಕೀಲರ ಭೇಟಿಗೆ ಅವಕಾಶ ನೀಡುವಂತೆ ಮತ್ತೊಂದು ಅರ್ಜಿಯನ್ನು ಸಲ್ಲಿಕೆ ಮಾಡಲಾಗಿದೆ.
ಐಪಾಡ್, ಪೆನ್ ಡ್ರೈವ್ ವಾಪಸ್ ಕೊಡಿ
ಸಿಸಿಬಿ ಪೊಲೀಸರು ರಾಗಿಣಿ ನಿವಾಸದ ಮೇಲೆ ದಾಳಿ ಮಾಡಿದಾಗ ಐಪಾಡ್, ಪೆನ್ ಡ್ರೈವ್ ವಶಕ್ಕೆ ಪಡೆದುಕೊಂಡಿದ್ದರು. ತಾಯಿ, ತಮ್ಮನ ಐಪಾಡ್, ಪೆನ್ ಡ್ರೈವ್ ವಾಪಸ್ ನೀಡುವಂತೆ 3ನೇ ಅರ್ಜಿಯಲ್ಲಿ ರಾಗಿಣಿ ದ್ವಿವೇದಿ ಪರ ವಕೀಲರು ಮನವಿ ಮಾಡಿದ್ದಾರೆ.
Recommended Video
ಹೈಕೋರ್ಟ್ನಲ್ಲಿ ಜಾಮೀನು ಅರ್ಜಿ
ಸೆಪ್ಟೆಂಬರ್ 28ರಂದು ರಾಗಿಣಿ ಜಾಮೀನು ಅರ್ಜಿಯನ್ನು ಎನ್ಡಿಪಿಎಸ್ ವಿಶೇಷ ಕೋರ್ಟ್ ವಜಾಗೊಳಿಸಿತ್ತು. ಈಗ ಜಾಮೀನು ಪಡೆಯಲು ರಾಗಿಣಿ ಹೈಕೋರ್ಟ್ಗೆ ಅರ್ಜಿಯನ್ನು ಸಲ್ಲಿಸಬೇಕಿದೆ. ಮತ್ತೊಂದೆಡೆ ಸಂಜನಾ ಗಲ್ರಾನಿ ಪರ ವಕೀಲರು ಹೈಕೋರ್ಟ್ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.