Don't Miss!
- Automobiles ವಂದೇ ಭಾರತ್ ಸ್ಲೀಪರ್, ಸೂಪರ್ ಆಪ್.. ರೈಲ್ವೆಯಿಂದ ಬಿಗ್ ಪ್ಲ್ಯಾನ್: ನೀವು ತಿಳಿಯಬೇಕಾದ ವಿಚಾರಗಳಿವು!
- News Siddaramaiah campaign: ಬಾಗೇಪಲ್ಲಿಯಲ್ಲಿಂದು ಸಿಎಂ ಸಿದ್ದರಾಮಯ್ಯ ಪ್ರಚಾರ ಸಭೆ, ಡಿಕೆಶಿ ಭಾಗಿ
- Finance Real Estate: ಬೆಂಗಳೂರಿನ ಕೋರಮಂಗಲದಲ್ಲಿ ದುಬಾರಿ ಬೆಲೆಗೆ ಆಸ್ತಿ ಖರೀದಿಸಿದ ಅಜಿತ್ ಐಸಾಕ್
- Technology Infinix: ಭಾರತದಲ್ಲಿಂದು ಇನ್ಫಿನಿಕ್ಸ್ ನೋಟ್ 40 ಪ್ರೊ 5G ಮೊದಲ ಸೇಲ್: ಬೆಲೆ, ಫೀಚರ್ಸ್ ಪರಿಶೀಲಿಸಿ
- Lifestyle ಎಳ ನೀರು ಹಾಕಿ ಮಾಡುವ 2 ದೋಸೆ ರೆಸಿಪಿ: ರುಚಿ ಸೂಪರ್, ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಡೆಲ್ಲಿ ವಿರುದ್ಧದ ಹೀನಾಯ ಸೋಲಿಗೆ ಇವರೇ ಕಾರಣ; ಶುಭ್ಮನ್ ಗಿಲ್ ಗರಂ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಸಿಕೆ ಪಡೆಯುವ ಮುನ್ನ ರಕ್ತದಾನ ಮಾಡಿದ ರಾಗಿಣಿ
ನಟಿ ರಾಗಿಣಿ ದ್ವಿವೇದಿ ಕೆಲವು ದಿನಗಳಿಂದ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಕೊರೊನಾ ಸಂಕಷ್ಟದ ಸಮಯದಲ್ಲಿ ಉಚಿತ ಆಹಾರ ವಿತರಣೆ, ದಿನಸಿ ಸಾಮಗ್ರಿ ವಿತರಣೆ ಇನ್ನಿತರೆ ಕಾರ್ಯಗಳನ್ನು ಮಾಡುತ್ತಿದ್ದಾರೆ.
Recommended Video
ನಟಿ ರಾಗಿಣಿ ದ್ವಿವೇದಿ ಇಂದು ಕೋವಿಡ್ ಲಸಿಕೆ ಪಡೆದಿದ್ದು ಲಸಿಕೆ ಪಡೆಯುವ ಮುನ್ನ ರಕ್ತದಾನ ಮಾಡಿದ್ದಾರೆ. ಲಸಿಕೆ ಪಡೆದವರು ಒಂದು ತಿಂಗಳ ಕಾಲ ರಕ್ತದಾನ ಮಾಡುವಂತಿಲ್ಲ. ಹಾಗಾಗಿ ರಾಗಿಣಿ ತಾವು ಲಸಿಕೆ ಪಡೆಯುವ ಮುನ್ನ ರಕ್ತದಾನ ಮಾಡಿದ್ದಾರೆ.
ರಕ್ತದಾನ ಮಾಡಿ ಪ್ರಮಾಣ ಪತ್ರ ಪಡೆದ ಚಿತ್ರಗಳನ್ನು ರಾಗಿಣಿ ಫೇಸ್ಬುಕ್ನಲ್ಲಿ ಹಾಕಿಕೊಂಡಿದ್ದು, ಹಲವಾರು ಮಂದಿ ರಾಗಿಣಿ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಇತ್ತೀಚೆಗಷ್ಟೆ ನಟ ವಶಿಷ್ಟ ಸಿಂಹ ಸಹ ಲಸಿಕೆ ಪಡೆಯುವ ಮುನ್ನ ರಕ್ತದಾನ ಮಾಡಿ ಮಾದರಿಯಾಗಿದ್ದರು.
ಲಸಿಕೆ ಪಡೆದ ಬಳಿಕ ಸಮಾಜ ಸೇವಾ ಕಾರ್ಯ ಮುಂದುವರೆಸಿರುವ ರಾಗಿಣಿ, ಸುಮಾರು 500 ಮಂದಿಗೆ ಉಚಿತವಾಗಿ ಆಹಾರ ನೀಡಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೆ ಸ್ಮಶಾನದಲ್ಲಿ ಕೆಲಸ ಮಾಡುವ ಸಿಬ್ಬಂದಿ ಹಾಗೂ ಅವರ ಕುಟುಂಬದವರಿಗೆ ಉಚಿತವಾಗಿ ದಿನಸಿ ಸಾಮಗ್ರಿಗಳನ್ನು ರಾಗಿಣಿ ಹಂಚಿದ್ದರು. ಪ್ರತಿದಿನವೂ ಆಹಾರ ವಿತರಣೆ ಮಾಡುತ್ತಿರುವ ರಾಗಿಣಿ, ಸಮಾಜ ಸೇವೆಯ ವಿಡಿಯೋ, ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.
ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ನಟಿ ರಾಗಿಣಿ ದ್ವಿವೇದಿ ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದರು. 140 ದಿನಗಳ ಕಾಲ ಜೈಲುವಾಸ ಅನುಭವಿಸಿದ ರಾಗಿಣಿ ಆ ನಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದರು. ಪ್ರಕರಣದ ವಿಚಾರಣೆ ಇನ್ನೂ ಜಾರಿಯಲ್ಲಿದೆ.
ರಾಗಿಣಿ ಜೊತೆಗೆ ನಟಿ ಸಂಜನಾ ಗಲ್ರಾನಿಯನ್ನು ಸಹ ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಅವರೂ ಸಹ ಜಾಮೀನಿನ ಮೇಲೆ ಹೊರಗೆ ಇದ್ದು, ಸಂಜನಾ ಸಹ ಈಗ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.