Don't Miss!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- News Agniveer: 'ಅಗ್ನಿವೀರ್' ಯೋಜನೆಗೆ ಬದಲಾವಣೆ ತರಲು ಕೇಂದ್ರ ಮುಕ್ತ: ರಕ್ಷಣಾ ಸಚಿವ
- Automobiles ಯುಎಸ್ಎ, ಕೆನಡಾಗೂ ಕಾಲಿಟ್ಟ ಭಾರತೀಯ ಬೈಕ್: ಮುಂದುವರೆದ ವಿಶ್ವಗುರು ಭಾರತದ ನಾಗಾಲೋಟ
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟಿ ರಾಗಿಣಿಗೆ ಜಾಮೀನು ಸಿಕ್ಕರೂ ಜೈಲಿನಿಂದ ಹೊರಬರಲು ಪರದಾಟ
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಸಂಬಂಧ ಜೈಲು ಸೇರಿದ್ದ ನಟಿ ರಾಗಿಣಿಗೆ ಕೊನೆಗೂ ಜಾಮೀನು ಮಂಜುರಾಗಿದೆ. 140ಕ್ಕೂ ಹೆಚ್ಚು ದಿನಗಳು ಜೈಲು ವಾಸ ಅನುಭವಿಸಿದ್ದ ರಾಗಿಣಿಗೆ ಸುಪ್ರೀಂ ಕೋರ್ಟ್ ಷರತ್ತುಬದ್ದ ಜಾಮೀನು ನೀಡಿದೆ.
ಜಾಮೀನು ಸಿಕ್ಕರು ರಾಗಿಣಿಗೆ ಜೈನಿಂದ ಬಿಡುಗಡೆ ಭಾಗ್ಯಸಿಕ್ಕಿಲ್ಲ. ಜಾಮೀನು ಸಿಕ್ಕಿ ಇಂದಿಗೆ ಮೂರು ದಿನಗಳಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಪ್ರತಿ ಹಿಡಿದು ವಕೀಲರು ದೆಹಲಿಯಿಂದ ನಿನ್ನ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದು ಸುಪ್ರೀಂ ಕೋರ್ಟ್ ಆದೇಶ ಪ್ರತಿಯನ್ನು ಎನ್ ಡಿ ಪಿ ಎಸ್ ಕೋರ್ಟ್ ನಲ್ಲಿ ಹಾಜರು ಪಡಿಸಿದ್ದಾರೆ.
140 ದಿನದ ನಂತರ ರಾ'ಗಿಣಿ' ಬಿಡುಗಡೆ: ಕಾನೂನು ಹೋರಾಟದಲ್ಲಿ ನಟಿ ಕಂಡ ಏಳು ಬೀಳು!
ಜಾಮೀನು ಮಂಜೂರು ಮಾಡಲು ಕೋರ್ಟ್ ಷರತ್ತುಗಳನ್ನು ವಿಧಿಸಿದೆ. 3 ಲಕ್ಷ ಮೌಲ್ಯದ ಬಾಂಡ್, ಇಬ್ಬರು ಶ್ಯೂರಿಟಿ ಹಾಗೂ 15 ದಿನಕೊಮ್ಮೆ ತನಿಖಾಧಿಕಾರಿ ಮುಂದೆ ಹಾಜರಾಗಿ ಸಹಿ ಹಾಕಬೇಕು ಸೇರಿದಂತೆ ಅನೇಕ ಷರತ್ತು ವಿಧಿಸಿದೆ. ಷರತ್ತುಗಳನ್ನು ಪೂರೈಸಲು ಸಮಯಾವಕಾಶ ಕಡಿಮೆ ಇರುವ ಹಿನ್ನಲೆ ಇವತ್ತು ಸಹ ರಾಗಿಣಿಗೆ ಜೈಲಿನಿಂದ ಹೊರಬರಲು ಸಾಧ್ಯವಾಗಿಲ್ಲ. ನಾಳೆ ಭಾನುವಾರ ಆಗಿದ್ದರಿಂದ ಇನ್ನು ಒಂದು ಜೈಲಿನಲ್ಲೇ ಇರಬೇಕಾಗಿದೆ.
ಸೋಮವಾರ ಷರತ್ತು ಪೂರೈಸಿ ಬಿಡುಗಡೆ ಆದೇಶ ಪಡೆಯಲು ರಾಗಿಣಿ ಪರ ವಕೀಲರ ನಿರ್ಧಾರಿದ್ದಾರೆ. ಸೋಮವಾರ ರಾಗಿಣಿಗೆ ಜೈಲಿನಿಂದ ಬಿಡುಗಡೆ ಭಾಗ್ಯ ಸಿಗುವ ಸಾಧ್ಯತೆ ಇದೆ.
Recommended Video
ಡ್ರಗ್ ಪೆಡ್ಲರ್ ಗಳ ಜೊತೆ ನಂಟು ಹೊಂದಿದ್ದಾರೆ ಎಂಬ ಅನುಮಾನದ ಹಿನ್ನೆಲೆ ಸೆಪ್ಟೆಂಬರ್ 4 ರಂದು ಸಿಸಿಬಿ ಪೊಲೀಸರು ನಟಿ ರಾಗಿಣಿ ಅವರ ನಿವಾಸದ ಮೇಲೆ ದಿಢೀರ್ ದಾಳಿ ನಡೆಸಿದ್ದರು. ಈ ವೇಳೆ ಡ್ರಗ್ಸ್ ಸೇವನೆ ಹಾಗೂ ಪೆಡ್ಲರ್ ಗಳ ಜೊತೆ ಸಂಪರ್ಕದಲ್ಲಿರುವುದರ ಬಗ್ಗೆ ಮಾಹಿತಿ ಸಿಕ್ಕ ಹಿನ್ನಲೆ ನಟಿಯರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡರು. ಅಧಿಕೃತವಾಗಿ ರಾಗಿಣಿಯನ್ನು ಬಂಧಿಸಿದ್ದರು.