Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಜೆಪಿಗೆ ಜೈ ಎಂದ ಸ್ಯಾಂಡಲ್ ವುಡ್ ನಟಿ ರಾಗಿಣಿ.!
ಸ್ಯಾಂಡಲ್ ವುಡ್ ನಟ ರಾಗಿಣಿ ದ್ವಿವೇದಿ ಸಿನಿಮಾದಿಂದ ರಾಜಕೀಯಕ್ಕೆ ಜಿಗಿಯುವ ಸೂಚನೆ ನೀಡಿದ್ದಾರೆ. ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ರಾಜ್ಯದಲ್ಲಿ ರಾಜಕೀಯ ಪಕ್ಷಗಳು ಹಾಗೂ ತಾರಾ ಪ್ರಚಾರಕರು ಎಲ್ಲಾ ಕಡೆಯೂ ಮತಯಾಚನೆ ಮಾಡ್ತಿದ್ದಾರೆ.
ಇಂತಹ ಸಮಯದಲ್ಲಿ ರಾಗಿಣಿ ಕೂಡ ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಮಾತನಾಡಿದ್ದು, ಅವಕಾಶ ಸಿಕ್ಕರೇ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುತ್ತೇನೆ ಎಂದಿದ್ದಾರೆ.
ಫಿಲ್ಮಿಬೀಟ್ ಸಂದರ್ಶನದಲ್ಲಿ ಮಾತನಾಡಿದ ರಾಗಿಣಿ, ''ನನಗೆ ರಾಜಕೀಯದಲ್ಲಿ ಒಳ್ಳೆಯ ಅವಕಾಶ ಸಿಕ್ಕರೆ ಪ್ರವೇಶ ಮಾಡಿದರೆ ತಪ್ಪೇನು? ನನ್ನಲ್ಲಿ ಇಷ್ಟೆಲ್ಲ ಅಭಿಮಾನ ಇರಿಸಿದವರಿಗಾಗಿ ನಾನು ಕೂಡ ಏನಾದರೂ ಸೇವೆ ಮಾಡಬೇಕು ಎನ್ನುವುದು ನನ್ನ ಸಹಜ ಅಭಿಲಾಷೆ. ವೈಯಕ್ತಿಕವಾಗಿ ನಾನು ಬಿಜೆಪಿ. ಆದರೆ ಈ ಬಾರಿ ಅದೇ ಪಕ್ಷವೇ ಅಧಿಕಾರಕ್ಕೆ ಬರಬೇಕು ಎಂಬ ಹಠ ನನಗಿಲ್ಲ. ಅಧಿಕಾರಕ್ಕೆ ಬರುವ ಪಕ್ಷ ಯಾವುದೇ ಆದರೂ ಜನತೆಗೆ ಉತ್ತಮ ಸೇವೆ ನೀಡಬೇಕು ಎನ್ನುವುದಷ್ಟೇ ಆಗ್ರಹ'' ಎಂದಿದ್ದಾರೆ.
ಸಂದರ್ಶನ: ನಾನು ರಾಗಿಣಿ: ಅವಕಾಶ ಸಿಕ್ಕರೆ ರಾಜಕಾರಣಿ.!
ಅಲ್ಲಿಗೆ ಭಾರತೀಯ ಜನತಾ ಪಾರ್ಟಿಗೆ ರಾಗಿಣಿಯ ಪರೋಕ್ಷ ಬೆಂಬಲ ಘೋಷಿಸಿಕೊಂಡಿದ್ದಾರೆ ಎನ್ನುವುದು ವಾಸ್ತವ. ಬಹುಶಃ ರಾಗಿಣಿ ಅವರ ಯೋಚನೆಯನ್ನ ಸೂಕ್ಷ್ಮವಾಗಿ ಗಮನಿಸಿದ್ರೆ, ಮುಂದಿನ ದಿನದಲ್ಲಿ ಅಧಿಕೃತವಾಗಿ ರಾಜಕೀಯ ಪಕ್ಷಕ್ಕೆ ಸೇರಿ ಜನಸೇವೆ ಮಾಡಬಹುದು.
ಸದ್ಯಕ್ಕೆ ರಾಗಿಣಿ ಶರಣ್ ಜೊತೆಗೆ 'ಅಧ್ಯಕ್ಷ ಇನ್ ಅಮೆರಿಕ' ಸಿನಿಮಾ ಮಾಡುತ್ತಿದ್ದಾರೆ. ಪ್ರೇಮ್ ಜೊತೆಗೆ 'ಗಾಂಧಿಗಿರಿ' ಸಿನಿಮಾದಲ್ಲಿ ಕೂಡ ನಟಿಸುತ್ತಿದ್ದಾರೆ. ಎರಡು ಬಾಲಿವುಡ್ ಸಿನಿಮಾಗಳ ಪ್ಲ್ಯಾನಿಂಗ್ ನಡೆಯುತ್ತಿದೆ. ವರ್ಷದ ಸೆಕೆಂಡ್ ಹಾಫ್ ನಲ್ಲಿ ನಾಯಕಿ ಪ್ರಾಧಾನ್ಯತೆಯ ಚಿತ್ರಗಲ್ಲಿಯೂ ನಟಿಸುವ ಸಾಧ್ಯತೆ ಇದೆಯಂತೆ.