Don't Miss!
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಾನೂನಿನ ಮೇಲೆ ನನ್ನ ನಂಬಿಕೆ ಬಲಗೊಂಡಿದೆ' ಎಂದು ಪೂಜೆಯ ಫೋಟೋ ಹಂಚಿಕೊಂಡ ನಟಿ ರಾಗಿಣಿ
ಡ್ರಗ್ಸ್ ಪ್ರಕರಣ ಸಂಬಂಧ ಜೈಲು ಸೇರಿದ್ದ ನಟಿ ರಾಗಿಣಿ ಸದ್ಯ ಜಾಮೀನಿನ ಮೇಲೆ ಹೊರಬಂದಿದ್ದು, ಕುಟುಂಬದ ಜೊತೆ ಕಾಲಕಳೆಯುತ್ತಿದ್ದಾರೆ. ಸುಮಾರು 140 ಕ್ಕೂ ಹೆಚ್ಚು ದಿನಗಳು ಜೈಲು ವಾಸ ಅನುಭವಿಸಿದ್ದ ರಾಗಿಣಿಗೆ ಜನವರಿ 21ರಂದು ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಜೈಲಿನಿಂದ ಹೊರಗೆ ಬಂದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ರಾಗಿಣಿ, 'ನ್ಯಾಯಕ್ಕೆ ಸಿಕ್ಕ ಜಯ ಇದು, ಸಾಕಷ್ಟು ವಿಚಾರಗಳನ್ನು ಮಾತನಾಡುವುದು ಬಾಕಿ ಇದೆ, ಪ್ರೆಸ್ ಮೀಟ್ ಮಾಡಿ ಎಲ್ಲವನ್ನು ಚರ್ಚೆ ಮಾಡುತ್ತೇನೆ, ಸದ್ಯಕ್ಕೆ ಏನೂ ಹೇಳುವುದಿಲ್ಲ' ಎಂದ ಹೇಳಿದ್ದರು.
140 ದಿನದ ನಂತರ ರಾ'ಗಿಣಿ' ಬಿಡುಗಡೆ: ಕಾನೂನು ಹೋರಾಟದಲ್ಲಿ ನಟಿ ಕಂಡ ಏಳು ಬೀಳು!
ಇದೀಗ ರಾಗಿಣಿ ಕುಟುಂಬದ ಜೊತೆ ಪೂಜೆ ಸಮಾರಂಭದಲ್ಲಿ ಭಾಗಿಯಾದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಹೊಸ ವರ್ಷಕ್ಕೆ ಎಲ್ಲರಿಗೂ ಶುಭಾಶಯ ಕೋರಿ, ಈ ವರ್ಷದಿಂದ ಕಾನೂನಿನ ಮೇಲಿದ್ದ ನಂಬಿಕೆ ಬಲವಾಗಿದೆ ಎಂದು ಹೇಳಿದ್ದಾರೆ.
'ಈ ಹೊಸ ವರ್ಷ ಕಾನೂನಿನ ನಿಯಮ ಮತ್ತು ನಮ್ಮ ಕಾನೂನು ವ್ಯವಸ್ಥೆಯಲ್ಲಿನ ನಂಬಿಕೆ ಬಲಗೊಂಡಿದೆ. ದೇವರ ಆಶೀರ್ವಾದದಿಂದ ನಾನು ಕೆಟ್ಟದರಿಂದ ಒಳ್ಳೆಯದನ್ನು ಜಯಿಸಿದ್ದೀನಿ. ನನ್ನ ಕುಟುಂಬ, ನನ್ನ ಅಭಿಮಾನಿಗಳು ಮತ್ತು ಬೆಂಬಲಿಗರಿಂದ ನಾನು ಗೆದ್ದು ಬರಲು ನನಗೆ ಶಕ್ತಿ ನೀಡಿತು. ಈ ವರ್ಷ ಎಲ್ಲರಿಗೂ ಸಂತೋಷವಾಗಿರಲಿ ಎಂದು ಹಾರೈಸುತ್ತೇನೆ' ಎಂದು ಹೇಳಿದ್ದಾರೆ.
ಇನ್ನು ಇಂದು ರಾಗಿಣಿ ಕೋರ್ಟಿಗೆ ಹಾಜರಾಗಿದ್ದರು. ಈ ಸಮಯದಲ್ಲಿ ಮಾತನಾಡಿದ ರಾಗಿಣಿ, 'ಕನ್ನಡ ಚಿತ್ರರಂಗದಲ್ಲಿ 12 ವರ್ಷಗಳಿಂದ ಕೆಲಸ ಮಾಡಿದ್ದೇನೆ. ನಾನು ಏನು ಎನ್ನುವುದು ಎಲ್ಲರಿಗೂ ಗೊತ್ತಿದೆ. ಈ ಪ್ರಕರಣದಲ್ಲಿ ನಾನು ಮುಗ್ಧೆ' ಎಂದು ರಾಗಿಣಿ ಹೇಳಿದ್ದಾರೆ.
Recommended Video
'ನಾನು ಮತ್ತು ನನ್ನ ಕುಟುಂಬ ಈ ಪ್ರಕರಣದಿಂದ ತುಂಬ ನೊಂದಿದ್ದೇವೆ. ನಾನು ತಪ್ಪು ಮಾಡಿಲ್ಲ ಎಂದು ವಿವರಣೆ ಕೊಡುವ ಅವಶ್ಯಕತೆ ಇಲ್ಲ. ನನಗೆ ಉಸಿರಾಡಲು ಸಮಯಕೊಡಿ, ಒಂದಷ್ಟು ವಿಚಾರಗಳನ್ನು ಮುಂದಿನ ದಿನಗಳಲ್ಲಿ ಹೇಳುತ್ತೇನೆ' ಎಂದು ಹೇಳಿದ್ದಾರೆ.