Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಾನೂನಿನ ಮೇಲೆ ನನ್ನ ನಂಬಿಕೆ ಬಲಗೊಂಡಿದೆ' ಎಂದು ಪೂಜೆಯ ಫೋಟೋ ಹಂಚಿಕೊಂಡ ನಟಿ ರಾಗಿಣಿ
ಡ್ರಗ್ಸ್ ಪ್ರಕರಣ ಸಂಬಂಧ ಜೈಲು ಸೇರಿದ್ದ ನಟಿ ರಾಗಿಣಿ ಸದ್ಯ ಜಾಮೀನಿನ ಮೇಲೆ ಹೊರಬಂದಿದ್ದು, ಕುಟುಂಬದ ಜೊತೆ ಕಾಲಕಳೆಯುತ್ತಿದ್ದಾರೆ. ಸುಮಾರು 140 ಕ್ಕೂ ಹೆಚ್ಚು ದಿನಗಳು ಜೈಲು ವಾಸ ಅನುಭವಿಸಿದ್ದ ರಾಗಿಣಿಗೆ ಜನವರಿ 21ರಂದು ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಜೈಲಿನಿಂದ ಹೊರಗೆ ಬಂದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ರಾಗಿಣಿ, 'ನ್ಯಾಯಕ್ಕೆ ಸಿಕ್ಕ ಜಯ ಇದು, ಸಾಕಷ್ಟು ವಿಚಾರಗಳನ್ನು ಮಾತನಾಡುವುದು ಬಾಕಿ ಇದೆ, ಪ್ರೆಸ್ ಮೀಟ್ ಮಾಡಿ ಎಲ್ಲವನ್ನು ಚರ್ಚೆ ಮಾಡುತ್ತೇನೆ, ಸದ್ಯಕ್ಕೆ ಏನೂ ಹೇಳುವುದಿಲ್ಲ' ಎಂದ ಹೇಳಿದ್ದರು.
140 ದಿನದ ನಂತರ ರಾ'ಗಿಣಿ' ಬಿಡುಗಡೆ: ಕಾನೂನು ಹೋರಾಟದಲ್ಲಿ ನಟಿ ಕಂಡ ಏಳು ಬೀಳು!
ಇದೀಗ ರಾಗಿಣಿ ಕುಟುಂಬದ ಜೊತೆ ಪೂಜೆ ಸಮಾರಂಭದಲ್ಲಿ ಭಾಗಿಯಾದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಹೊಸ ವರ್ಷಕ್ಕೆ ಎಲ್ಲರಿಗೂ ಶುಭಾಶಯ ಕೋರಿ, ಈ ವರ್ಷದಿಂದ ಕಾನೂನಿನ ಮೇಲಿದ್ದ ನಂಬಿಕೆ ಬಲವಾಗಿದೆ ಎಂದು ಹೇಳಿದ್ದಾರೆ.
'ಈ ಹೊಸ ವರ್ಷ ಕಾನೂನಿನ ನಿಯಮ ಮತ್ತು ನಮ್ಮ ಕಾನೂನು ವ್ಯವಸ್ಥೆಯಲ್ಲಿನ ನಂಬಿಕೆ ಬಲಗೊಂಡಿದೆ. ದೇವರ ಆಶೀರ್ವಾದದಿಂದ ನಾನು ಕೆಟ್ಟದರಿಂದ ಒಳ್ಳೆಯದನ್ನು ಜಯಿಸಿದ್ದೀನಿ. ನನ್ನ ಕುಟುಂಬ, ನನ್ನ ಅಭಿಮಾನಿಗಳು ಮತ್ತು ಬೆಂಬಲಿಗರಿಂದ ನಾನು ಗೆದ್ದು ಬರಲು ನನಗೆ ಶಕ್ತಿ ನೀಡಿತು. ಈ ವರ್ಷ ಎಲ್ಲರಿಗೂ ಸಂತೋಷವಾಗಿರಲಿ ಎಂದು ಹಾರೈಸುತ್ತೇನೆ' ಎಂದು ಹೇಳಿದ್ದಾರೆ.
ಇನ್ನು ಇಂದು ರಾಗಿಣಿ ಕೋರ್ಟಿಗೆ ಹಾಜರಾಗಿದ್ದರು. ಈ ಸಮಯದಲ್ಲಿ ಮಾತನಾಡಿದ ರಾಗಿಣಿ, 'ಕನ್ನಡ ಚಿತ್ರರಂಗದಲ್ಲಿ 12 ವರ್ಷಗಳಿಂದ ಕೆಲಸ ಮಾಡಿದ್ದೇನೆ. ನಾನು ಏನು ಎನ್ನುವುದು ಎಲ್ಲರಿಗೂ ಗೊತ್ತಿದೆ. ಈ ಪ್ರಕರಣದಲ್ಲಿ ನಾನು ಮುಗ್ಧೆ' ಎಂದು ರಾಗಿಣಿ ಹೇಳಿದ್ದಾರೆ.
Recommended Video
'ನಾನು ಮತ್ತು ನನ್ನ ಕುಟುಂಬ ಈ ಪ್ರಕರಣದಿಂದ ತುಂಬ ನೊಂದಿದ್ದೇವೆ. ನಾನು ತಪ್ಪು ಮಾಡಿಲ್ಲ ಎಂದು ವಿವರಣೆ ಕೊಡುವ ಅವಶ್ಯಕತೆ ಇಲ್ಲ. ನನಗೆ ಉಸಿರಾಡಲು ಸಮಯಕೊಡಿ, ಒಂದಷ್ಟು ವಿಚಾರಗಳನ್ನು ಮುಂದಿನ ದಿನಗಳಲ್ಲಿ ಹೇಳುತ್ತೇನೆ' ಎಂದು ಹೇಳಿದ್ದಾರೆ.