Don't Miss!
- Sports
IND vs NZ 2nd T20: ಕಿವೀಸ್ ವಿರುದ್ಧ ಹೋರಾಡಿ ಗೆದ್ದ ಭಾರತ; ಸರಣಿ ಸಮಬಲ
- Lifestyle
ಫೆಬ್ರವರಿಯಲ್ಲಿದೆ ಈ 3 ಗ್ರಹಗಳ ಸಂಚಾರ: ಈ 4 ರಾಶಿಯವರಿಗೆ ಮಂಗಳಕರ
- News
Breaking: ಸಹಾಯಕ ಸಬ್ ಇನ್ಸ್ಪೆಕ್ಟರ್ ಗುಂಡಿನ ದಾಳಿ: ಆಸ್ಪತ್ರೆಯಲ್ಲಿ ಓಡಿಶಾ ಆರೋಗ್ಯ ಸಚಿವ ಸಾವು
- Finance
ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಮುಂದೂಡಿದ ಬ್ಯಾಂಕ್ ಯೂನಿಯನ್ಸ್: ಜ.31ಕ್ಕೆ ಮಹತ್ವದ ಸಭೆ
- Technology
ಬಜೆಟ್ ಬೆಲೆಯಲ್ಲಿ ಈ ಸ್ಮಾರ್ಟ್ಫೋನ್ಗಳು ಬೆಸ್ಟ್ ಎನಿಸಿಲಿವೆ! ಜಬರ್ದಸ್ತ್ ಫೀಚರ್ಸ್!
- Automobiles
ಬೆಲೆ ಏರಿಕೆ ಪಡೆದುಕೊಂಡ ಪರ್ಫಾಮೆನ್ಸ್ ಕಾರು ಪ್ರಿಯರ ಮೆಚ್ಚಿನ ಹ್ಯುಂಡೈ ಐ20 ಎನ್ ಲೈನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಎಲ್ಲಾ ಹೊರಗಿನ ಸೆಲೆಬ್ರಿಟಿಗಳು ಎಲ್ಲಿದ್ದೀರಾ? ಡಾ.ರಾಜ್ ಮೊಮ್ಮಗನ ಬೇಸರ
Recommended Video
ಬೇರೆ ಭಾಷೆಯ ಸೆಲೆಟ್ರಿಟಿಗಳು, ದೊಡ್ಡ ದೊಡ್ಡ ಸ್ಟಾರ್ಸ್, ಕ್ರಿಕೆಟ್ ಸ್ಟಾರ್ಸ್, ರಾಜಕಾರಣಿಗಳು ಈಗ ಎಲ್ಲಿದ್ದಾರೆ. ಕರ್ನಾಟಕದಲ್ಲಿ ಉಂಟಾದ ಬೀಕರ ಪ್ರವಾಹ ಅವರ ಕಣ್ಣಿಗೆ ಬಿದ್ದಿಲ್ಲವಾ. ಕರ್ನಾಟಕದ ಬಗ್ಗೆ ಅವರಿಗೆಲ್ಲ ಯಾಕಿಷ್ಟು ತಾತ್ಸಾರ? ಎಂದು ಡಾ.ರಾಜು ಕುಮಾರ್ ಮೊಮ್ಮಗ ಯುವರಾಜ್ ರಾಜ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಪ್ರವಾಹ: ಸಂತ್ರಸ್ತರಿಗೆ ನೆರವು ನೀಡುವುದು ಹೇಗೆ?
ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಗೆ ಬಗ್ಗೆ ಯುವರಾಜ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್ ಈಗ ಸಿಕ್ಕಾಪಟ್ಟೆ ವೈರಲ್ ಆಗಿದೆ.
ನಟಸಾರ್ವಭೌಮ
ಆಡಿಯೋ
ಶೋನಲ್ಲಿ
ಯುವರಾಜ್
ಕುಮಾರ್
ಸರ್ಪ್ರೈಸ್
ಬೀಕರ ಪ್ರವಾಹದಿಂದ ಲಕ್ಷಾಂತರ ಜನ ಮನೆ ಮಟ ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಒಂದು ಹೊತ್ತಿನ ಊಟಕ್ಕು ಪರದಾಡುವ ಸ್ಥಿತಿ ಉಂಟಾಗಿದೆ. ಪ್ರವಾಹ ಸಂತ್ರಸ್ತರಿಗೆ ನೆರವಿನ ಅಗತ್ಯವಿದೆ. ಸಾಕಷ್ಟು ಮಂದಿ ತಮ್ಮ ಕೈಲಾದಷ್ಟು ನೆರವು ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಪರರಾಜ್ಯದ ಸ್ಟಾರ್ಸ್, ಸೆಲೆಬ್ರೆಟಿಗಳು ಈಗ ಎಲ್ಲಿದ್ದಾರೆ ಎಂದು ಯುವ ರಾಜ್ ಕುಮಾರ್ ಬೇಸರ ಹೊರಹಾಕಿದ್ದಾರೆ.

ಪರಭಾಷೆಯ ಸ್ಟಾರ್ ಎಲ್ಲಿದ್ದೀರಾ?
ಕರ್ನಾಟಕದಲ್ಲಾದ ಬೀಕರ ಪ್ರವಾಹಕ್ಕೆ ಸಾಕಷ್ಟು ಜನರ ಬದುಕೇ ಕೊಚ್ಚಿ ಹೋಗಿದೆ. ನೆರೆ ಹಾವಳಿಯಿಂದ ಲಕ್ಷಂತರ ಜನ ಬೀದಿಗೆ ಬಂದಿದ್ದಾರೆ. ಇಡೀ ಕರ್ನಾಟಕ ನೋವಿನಲ್ಲಿದೆ. ಆದ್ರೆ ಪಕ್ಕದ ರಾಜ್ಯದವರು ಮಾತ್ರ ಇತ್ತ ಕಡೆ ತಿರುಗಿಯೂ ನೋಡುತ್ತಿಲ್ಲ. ಈ ಹಿಂದೆ ತಮಿಳುನಾಡು, ಕೇರಳದಲ್ಲಿ ಉಂಟಾದ ಪ್ರವಾಹದ ಸಮಯದಲ್ಲಿ ಇಡೀ ಕರ್ನಾಟಕ ಅವರ ನೋವಿಗೆ ಸ್ಪಂದಿಸಿತ್ತು. ಆದ್ರೆ ಕರ್ನಾಟಕದಲ್ಲಿ ಉಂಟಾದ ಬೀಕರ ಪರಿಸ್ಥಿಯನ್ನು ನೋಡಿಯು ನೋಡದಂತೆ ಮೌನವಹಿಸಿರುವುದು ನಿಜಕ್ಕು ಬೇಸರತರಿಸುತ್ತೆ.
ಉತ್ತರ
ಕರ್ನಾಟಕದಲ್ಲಿ
ಮಳೆ
ಹಾನಿ:
ಹುಟ್ಟುಹಬ್ಬ
ಬೇಡ
ಎಂದ
ರಾಘಣ್ಣ

ಸಂತ್ರಸ್ತರ ಕಷ್ಟಕ್ಕೆ ಮಿಡಿದ ಕರ್ನಾಟಕ
ಈ ಬಗ್ಗೆ ಡಾ.ರಾಜ್ ಕುಟುಂಬದ ಕುಡಿ ಯುವರಾಜ್ ಕುಮಾರ್ "ನಮ್ಮ ಕರ್ನಾಟಕದ ಎಷ್ಟೋ ಜಿಲ್ಲೆಗಳಲ್ಲಿ ಜಲ ಪ್ರಳಯದ ಪರಿಣಾಮ ಲಕ್ಷಾಂತರ ಜನರು ನಷ್ಟದಲ್ಲಿದಾರೆ. ಅವರಲ್ಲಿ ನೂರಾರು ಜನರು ನಿರಾಶ್ರಿತರಾಗಿದ್ದಾರೆ, ಆಹಾರವಿಲ್ಲ, ಮೂಲಭೂತ ಸೌಕರ್ಯಗಳಿಲ್ಲ. ನಾವು ಕನ್ನಡಿಗರು, ಇಲ್ಲಿನ ಸಂಘ ಸಂಸ್ಥೆಗಳು, ಸೇನೆ ದಳಗಳು, ಕರ್ನಾಟಕ ಸರ್ಕಾರ ಎಲ್ಲರೂ ಒಂದಾಗಿ ಕೈಲಾದಷ್ಟು ಸಹಾಯ ಮಾಡಲು ಪ್ರಯತ್ನ ಪಡುತ್ತಿದ್ದೇವೆ"

ಹೊರಗಿನ ಸ್ಟಾರ್ಸ್ ಈಗ ಎಲ್ಲಿದ್ದೀರಾ?
"ಎಲ್ಲಾ ಹೊರಗಿನ ಸೆಲೆಬ್ರಿಟಿಗಳು, ಸ್ಟಾರ್ಸ್, ರಾಜಕಾರಣಿಗಳು ತಮ್ಮ ಚಲನಚಿತ್ರಗಳನ್ನು ಪ್ರಚಾರ ಮಾಡಲು, ತಮ್ಮ ಬ್ರಾಂಡ್ ಅನ್ನು ಉತ್ತೇಜಿಸಲು, ನಮ್ಮ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಲು, ಮತ ಕೇಳಲು ಕರ್ನಾಟಕಕ್ಕೆ ಬರುವವರು ಎಲ್ಲಿದ್ದಾರೆ? ಇಲ್ಲಿ ಬರೋದು, ಸಹಾಯ ಮಾಡೋದು ಇರಲಿ, ನನಗೆ ಯಾರ ಟ್ವೀಟ್, ಪೋಸ್ಟ್ ನೋಡಿದ ನೆನಪು ಆಗುತ್ತಿಲ್ಲ" ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಉತ್ತರ
ಕರ್ನಾಟಕಕ್ಕೆ
ಏಕೆ
ಸಹಾಯ
ಮಾಡಿಲ್ಲ?
:
ಕಿಚ್ಚನಿಗೆ
ಅಭಿಮಾನಿಯ
ಸವಾಲು

ಕನ್ನಡಿಗರನ್ನು ಕಸ್ತೂರಿ ನಿವಾಸಕ್ಕೆ ಹೋಲಿಕೆ
"ಅಂದ ಹಾಗೆ ಸಹಾಯ ಮಾಡಲು ಮುಂದೆ ಬಂದಿರುವ ಎಲ್ಲರಿಗೂ ನಮ್ಮ ಕೋಟಿ ವಂದನೆಗಳು. ನಾನು ಏನಾದರೂ ತಪ್ಪು ಹೇಳುತ್ತಿದ್ದೇನೆಯೇ? ತಪ್ಪಿದರೆ ಕ್ಷಮೆ ಇರಲಿ. ಯಾರೇ ಬರಲಿ ಬಿಡಲಿ ನಮ್ಮವರ ಜೊತೆ, ಎಲ್ಲರ ಜೊತೆ ನಾವು ಇರೋಣ" ಎಂದು ಹೇಳುತ್ತ ಡಾ.ರಾಜ್ ಕುಮಾರ್ ಅಭಿನಯದ ಕಸ್ತೂರಿ ಸಿನಿಮಾ ಚಿತ್ರದ ಪೋಸ್ಟರ್ ಅನ್ನು ಶೇರ್ ಮಾಡುವ ಮೂಲಕ ಕನ್ನಡಿಗರನ್ನು ಕಸ್ತೂರಿ ನಿವಾಸಕ್ಕೆ ಹೋಲಿದ್ದಾರೆ.