Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೊಟ್ಟೆ ಕಥೆ ನಂತ್ರ ಗುಬ್ಬಿ ಕಥೆ ಹೇಳ್ತಾರೆ ರಾಜ್ ಬಿ ಶೆಟ್ಟಿ
ರಾಜ್ ಬಿ ಶೆಟ್ಟಿ 'ಒಂದು ಮೊಟ್ಟೆಯ ಕಥೆ' ಅಂತಹ ವಿಭಿನ್ನ ಸಿನಿಮಾವನ್ನು ಕನ್ನಡ ಅಭಿಮಾನಿಗಳಿಗೆ ನೀಡಿದ ನಾಯಕ ನಟ ಹಾಗೂ ನಿರ್ದೇಶಕ. ಸದ್ಯ ಗಾಂಧಿನಗರದಲ್ಲಿ ಮತ್ತಷ್ಟು ವಿಭಿನ್ನ ಚಿತ್ರಗಳಲ್ಲಿ ಅಭಿನಯಿಸಲು ರಾಜ್ ಬಿ ಶೆಟ್ಟಿ ಗ್ರೀನ್ ಸಿಗ್ನಲ್ ಕೊಟ್ಟಿದ್ದು ಅವುಗಳ ಸಾಲಿಗೆ ಮತ್ತೊಂದು ಸಿನಿಮಾ ಸೇರಿಕೊಂಡಿದೆ.
"ಗುಬ್ಬಿ ಮೇಲೆ ಬ್ರಹ್ಮಾಸ್ತ್ರ" ಚಿತ್ರದಲ್ಲಿ ರಾಜ್ ಬಿ ಶೆಟ್ಟಿ ನಾಯಕನಾಗಿ ಅಭಿನಯ ಮಾಡುತ್ತಿದ್ದು ಸಿನಿಮಾದ ಮುಹೂರ್ತ ಇಂದು ನಡೆದಿದೆ. 'ಚಮಕ್', 'ಅಯೋಗ್ಯ', 'ಬೀರ್ ಬಲ್', 'ಜಾನ್ ಸೀನಾ' ಸಿನಿಮಾವನ್ನ ನಿರ್ಮಾಣ ಮಾಡಿರುವ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಸಂಸ್ಥೆಯಿಂದಲೇ " ಗುಬ್ಬಿ ಮೇಲೆ ಬ್ರಹ್ಮಾಸ್ತ್ರ" ನಿರ್ಮಾಣವಾಗುತ್ತಿದೆ.
ಸೌತ್ ಫಿಲ್ಮ್ ಫೇರ್ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಯಾರ ಮುಡಿಗೆ ?
ಇಷ್ಟು ದಿನಗಳ ಕಾಲ ಸಿನಿಮಾ, ಧಾರಾವಾಹಿಗಳಲ್ಲಿ ನಟನಾಗಿ ಕಾಣಿಸಿಕೊಂಡಿದ್ದ ಸುಜಯ್ ಶಾಸ್ತ್ರಿ "ಗುಬ್ಬಿ ಮೇಲೆ ಬ್ರಹ್ಮಾಸ್ತ್ರ" ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಟೈಟಲ್ ಹೇಳುವಂತೆ "ಗುಬ್ಬಿ ಮೇಲೆ ಬ್ರಹ್ಮಾಸ್ತ್ರ" ಔಟ್ ಅಂಡ್ ಔಟ್ ಕಾಮಿಡಿ ಸಿನಿಮಾ.ವಿದ್ಯಾ ವಿನಾಯ ಧಾರಾವಾಹಿ ಖ್ಯಾತಿಯ ನಟಿ ಕವಿತಾ ಗೌಡ ಸಿನಿಮಾಗೆ ನಾಯಕಿ.
ಬೆಂಗಳೂರಿನ ರಾಜರಾಜೇಶ್ವರಿ ನಗರದ ದೇವಸ್ಥಾನದಲ್ಲಿ ಮುಹೂರ್ತ ಮುಗಿಸಿರುವ ಚಿತ್ರತಂಡ ಮುಂದಿನವಾರದಿಂದ ಚಿತ್ರೀಕರಣ ಆರಂಭಿಸಲಿದೆ. ಈಗಾಗಲೇ ವಿಭಿನ್ನ ಸಿನಿಮಾ ಮೂಲಕ ಪ್ರೇಕ್ಷಕರ ಮನಸ್ಸು ಗೆದ್ದಿರುವ ರಾಜ್ ಬಿ ಶೆಟ್ಟಿ "ಗುಬ್ಬಿ ಮೇಲೆ ಬ್ರಹ್ಮಾಸ್ತ್ರ" ಚಿತ್ರದ ಮೂಲಕ ಮತ್ತೆ ಸಿನಿಮಾ ಪ್ರೇಮಿಗಳ ಮೆಚ್ಚುಗೆಯನ್ನು ಪಡೆದುಕೊಳ್ಳುತ್ತಾರಾ ಕಾದು ನೋಡಬೇಕು.