Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಬ್ಬರು ಡೈರೆಕ್ಟ್ರು ಒಂದಾದ್ರು: ಹೊಸ ಸಿನಿಮಾ ಅನೌನ್ಸ್ ಮಾಡಿದ್ರು
'ಒಂದು ಮೊಟ್ಟೆಯ ಕಥೆ' ಚಿತ್ರದ ಮೂಲಕ ಜನಪ್ರಿಯತೆ ಗಳಿಸಿಕೊಂಡ ರಾಜ್ ಬಿ ಶೆಟ್ಟಿ ನಟನೆಯ ಜೊತೆ ನಿರ್ದೇಶನದಲ್ಲೂ ಕಮಾಲ್ ಮಾಡಿದ್ದರು. ಮೊದಲ ಸಿನಿಮಾದಲ್ಲಿ ಯಶಸ್ಸು ಕಂಡ ರಾಜ್ ಬಿ ಶೆಟ್ಟಿ ನಂತರ ರಿಷಬ್ ಶೆಟ್ಟಿ ನಿರ್ದೇಶನದ 'ಸರ್ಕಾರಿ ಹಿರಿಯ ಪ್ರಾ.ಶಾಲೆ' ಚಿತ್ರದಲ್ಲಿ ಕಾಣಿಸಿಕೊಂಡರು.
Recommended Video
ಅದಾದ ಮೇಲೆ ಅಮ್ಮಚ್ಚಿಯೆಂಬ ನೆನಪು, ಮಹಿರಾ, ಗುಬ್ಬಿ ಮೇಲೆ ಬ್ರಹ್ಮಾಸ್ತ್ರ, ಕಥಾ ಸಂಗಮ ಹೀಗೆ ಹಾಸ್ಯ ಪ್ರಧಾನ ಹಾಗೂ ಸಾಮಾಜಿಕ ಸಂದೇಶವುಳ್ಳ ಚಿತ್ರಗಳ ಮೂಲಕ ರಾಜ್ ಬಿ ಶೆಟ್ಟಿ ಗಮನ ಸೆಳೆದಿದ್ದರು.
ರಿಷಬ್ ಶೆಟ್ಟಿ ಮುಂದಿನ ಸಿನಿಮಾ 'ರುದ್ರಪ್ರಯಾಗ'
ಇದೀಗ, ತಮ್ಮ ಮುಂದಿನ ಚಿತ್ರವನ್ನು ಘೋಷಣೆ ಮಾಡಿದ್ದಾರೆ. ಪ್ರೇಮಿಗಳ ದಿನದ ವಿಶೇಷವಾಗಿ ಹೊಸ ಸಿನಿಮಾದ ಹೆಸರು ಮತ್ತು ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಈ ಚಿತ್ರದ ಹೆಸರು 'ಗರುಡ ವಾಹನ ವೃಷಭ ವಾಹನ'.
ಅಂದ್ಹಾಗೆ, ಈ ಚಿತ್ರವನ್ನು ರಾಜ್ ಬಿ ಶೆಟ್ಟಿ ನಿರ್ದೇಶನ ಮಾಡುತ್ತಿದ್ದು ಜೊತೆಗೆ ಪ್ರಧಾನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ವಿಶೇಷ ಅಂದ್ರೆ ರಾಜ್ ಬಿ ಶೆಟ್ಟಿ ಜೊತೆ ಖ್ಯಾತ ನಿರ್ದೇಶಕ-ನಟ ರಿಷಬ್ ಶೆಟ್ಟಿ ನಾಯಕರಾಗಿ ನಟಿಸುತ್ತಿದ್ದಾರೆ.
ಬಾಲಿವುಡ್ ಗೆ ಕಾಲಿಟ್ಟ ಕನ್ನಡದ ಖ್ಯಾತ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ
ರಿಷಬ್ ಶೆಟ್ಟಿ ನಿರ್ದೇಶನದ ಸರ್ಕಾರಿ ಹಿರಿಯ ಪ್ರಾ.ಶಾಲೆ ಹಾಗೂ ಕಥಾಸಂಗಮ ಚಿತ್ರಗಳಲ್ಲಿ ರಾಜ್ ಬಿ ಶೆಟ್ಟಿ ಅಭಿನಯಿಸಿದ್ದರು. ಈಗ ರಾಜ್ ಬಿ ಶೆಟ್ಟಿ ನಿರ್ದೇಶನದ ಚಿತ್ರದಲ್ಲಿ ರಿಷಬ್ ಶೆಟ್ಟಿ ಬಣ್ಣ ಹಚ್ಚುತ್ತಿದ್ದಾರೆ. ಹೀಗಾಗಿ, ಈ ಸಿನಿಮಾ ಆರಂಭದಲ್ಲಿ ಕುತೂಹಲ ಮೂಡಿಸುತ್ತಿದೆ.
ಲೈಟರ್ ಬುದ್ದ ಫಿಲಂಸ್ ಈ ಚಿತ್ರ ನಿರ್ಮಿಸುತ್ತಿದ್ದು, ಮಿಧುನ್ ಮುಕುಂದನ್ ಸಂಗೀತ ನೀಡುತ್ತಿದ್ದಾರೆ. ಇನ್ನುಳಿದಂತೆ ಕಲಾವಿದರು ಹಾಗೂ ನಾಯಕಿ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ. ಎಲ್ಲ ಅಂದುಕೊಂಡಂತೆ ಆದರೆ ಜೂನ್ ತಿಂಗಳಲ್ಲಿ ಈ ಚಿತ್ರವನ್ನು ತೆರೆಗೆ ತರುವ ಪ್ಲಾನ್ ಮಾಡಿದ್ದಾರೆ ನಿರ್ದೇಶಕ ರಾಜ್ ಬಿ ಶೆಟ್ಟಿ.