Don't Miss!
- News Yaduveer Wadiyar: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ಗೆ ಶಾಕ್ ಕೊಟ್ಟ ಒಕ್ಕಲಿಗರು!
- Automobiles ದೊಡ್ಡ ಸಿಗ್ನಲ್ ಕೊಟ್ಟ ಫೋರ್ಡ್: ಭಾರತಕ್ಕೆ ಬರುತ್ತಿದೆ ಹೊಸ ಎಸ್ಯುವಿ... ಟಾಟಾಗೆ ಆತಂಕ ಶುರು
- Finance Gold rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಫ್ತಿ' ನಂತರ ರಾಜ್.ಬಿ.ಶೆಟ್ಟಿ ಚಿತ್ರಕ್ಕೆ ಕ್ಯಾಮರಾ ಹಿಡಿದ ನವೀನ್
ಶಿವರಾಜ್ ಕುಮಾರ್ ಅಭಿನಯದ 'ಮಫ್ತಿ' ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಸಿನಿಮಾದ ಗೆಲುವಿಗೆ ಕಾರಣವಾದ ಬಹುಮುಖ್ಯ ಅಂಶಗಳಲ್ಲಿ ಸಿನಿಮಾಟೋಗ್ರಾಫಿ ಕೂಡ ಒಂದಾಗಿತ್ತು. ನವೀನ್ ಕುಮಾರ್ ಮಾಡಿದ ಕೆಲಸವನ್ನು ಸಿನಿಮಾ ನೋಡಿದ ಮಂದಿ ಕೊಂಡಾಡಿದರು. ಈ ಚಿತ್ರದಿಂದ ಅವರಿಗೆ ದೊಡ್ಡ ಹೆಸರು ಬಂತು.
ಇನ್ನು 'ಮಫ್ತಿ' ನಂತರ ನವೀನ್ ಈಗ ಮತ್ತೊಂದು ವಿಭಿನ್ನ ಸಿನಿಮಾಗೆ ಕ್ಯಾಮರಾ ಹಿಡಿದಿದ್ದಾರೆ. 'ಒಂದು ಮೊಟ್ಟೆಯ ಕಥೆ' ಖ್ಯಾತಿಯ ರಾಜ್ ಬಿ. ಶೆಟ್ಟಿ ಈ ಸಿನಿಮಾದ ನಾಯಕನಾಗಿದ್ದಾರೆ. 'ಅಮ್ಮಚ್ಚಿಯೆಂಬ ನೆನಪು' ಎಂಬ ಹೆಸರನ್ನು ಈ ಚಿತ್ರಕ್ಕೆ ಇಡಲಾಗಿದೆ. ಇದೊಂದು ಸದಭಿರುಚಿಯ ಸಿನಿಮಾವಾಗಿದೆಯಂತೆ. ಅಂದಹಾಗೆ, ಸದ್ಯ 'ಅಮ್ಮಚ್ಚಿಯೆಂಬ ನೆನಪು' ಸಿನಿಮಾದ ಒಂದು ಪೋಸ್ಟರ್ ರಿಲೀಸ್ ಆಗಿದ್ದು, ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ನವೀನ್ ಕುಮಾರ್ ಮೋಡಿ ಈ ಚಿತ್ರದಲ್ಲಿಯೂ ಮುಂದುವರೆದಿದೆ. ಫಸ್ಟ್ ಲುಕ್ ಪೋಸ್ಟರ್ ತುಂಬ ಫ್ರೆಶ್ ಆದ ಫೀಲ್ ನೀಡುತ್ತಿದೆ.
ಅಂದಹಾಗೆ, ವೈದೇಹಿ ಅವರ 'ಅಕ್ಕು' ನಾಟಕವನ್ನು ಇಟ್ಟುಕೊಂಡು 'ಅಮ್ಮಚ್ಚಿಯೆಂಬ ನೆನಪು' ಸಿನಿಮಾ ಮಾಡಲಾಗಿದೆ. ಈ ಸಿನಿಮಾದ ಮೂಲಕ ಚಂಪಾ ಶೆಟ್ಟಿ ನಿರ್ದೇಶಕಿ ಆಗಿದ್ದಾರೆ. ಈ ಹಿಂದೆ ಇವರು ಅನೇಕ ನಾಟಗಳನ್ನು ನಿರ್ದೇಶನ ಮಾಡಿದ್ದರು. ನಾಟಕದ ಅಪಾರ ಅನುಭವದ ನಂತರ ಈಗ ಸಿನಿಮಾವನ್ನು ಮಾಡಲು ಇವರು ಒಂದು ಹೆಜ್ಜೆ ಮುಂದೆ ಇಟ್ಟಿದ್ದಾರೆ.