Don't Miss!
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- News ಲೋಕಸಭಾ ಚುನಾವಣೆ 2ನೇ ಹಂತದ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ; ಮನೆ ಮನೆ ಪ್ರಚಾರಕ್ಕೆ ಅವಕಾಶ
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಗೊಳ್ಳಿ ರಾಯಣ್ಣ ವಿಶೇಷ ಪ್ರದರ್ಶನಕ್ಕೆ ಅವ್ರು ಬರ್ಲಿಲ್ಲ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಚಿತ್ರದ ವಿಶೇಷ ಪ್ರದರ್ಶನ ಸೋಮವಾರ (ನ 5) ನಗರದ ಕಾವೇರಿ ಚಿತ್ರಮಂದಿರದಲ್ಲಿ ಏರ್ಪಾಡಾಗಿತ್ತು. ಚಿತ್ರರಂಗದ ಗಣ್ಯಾತಿಗಣ್ಯರು ಈ ವಿಶೇಷ ಪ್ರದರ್ಶನಕ್ಕೆ ಆಗಮಿಸಿದ್ದರು.
ಸಂಜೆ ಆರು ಗಂಟೆಗೆ ಶುರುವಾಗ ಬೇಕಿದ್ದ ಈ ವಿಶೇಷ ಶೋ ರಾತ್ರಿ 7 ಗಂಟೆಗೆ ಆರಂಭವಾಯಿತು. ರೆಬೆಲ್ ಸ್ಟಾರ್ ಅಂಬರೀಶ್ ಅವರಿಗಾಗಿ ಕಾದು ನಂತರ ಚಿತ್ರ ಪ್ರದರ್ಶನ ಆರಂಭವಾಯಿತು ಎನ್ನುವುದು ಸುದ್ದಿ.
ಅಂಬರೀಶ್ ವಿದೇಶದಲ್ಲಿ ಇದ್ದಿದ್ದರಿಂದ ಸಂಗೊಳ್ಳಿ ರಾಯಣ್ಣ ಚಿತ್ರ ವೀಕ್ಷಿಸಲು ಬರಲಿಲ್ಲವಂತೆ.
ವಿಶೇಷ ಪ್ರದರ್ಶನಕ್ಕೆ ಆಗಮಿಸಿದ್ದ ಗಣ್ಯರನ್ನು ನಿರ್ಮಾಪಕ ಆನಂದ್ ಅಪ್ಪುಗೋಳ್, ನಿರ್ದೇಶಕ ನಾಗಣ್ಣ, ಚಿತ್ರಕ್ಕೆ ಸಂಭಾಷಣೆ ಬರೆದ ಕೇಶವಾದಿತ್ಯ ಆದರದಿಂದ ಬರಮಾಡಿಕೊಂಡರು.
ಈಗಾಗಲೇ ಜನರಿಂದ ಮತ್ತು ಮಾಧ್ಯಮಗಳಿಂದ ಭೇಷ್ ಅನಿಸಿಕೊಂಡಿರುವ ಸಂಗೊಳ್ಳಿ ರಾಯಣ್ಣ ಚಿತ್ರಕ್ಕೆ ಚಿತ್ರರಂಗದ ಗಣ್ಯರು ಕೂಡಾ ಬಹುಪರಾಕ್ ಎಂದಿದ್ದಾರೆ.
ಸಂಗೊಳ್ಳಿ ರಾಯಣ್ಣ ಯುಗಳ ಗೀತೆ ಹಾಡುವುದಿಲ್ಲ. ಸಿಕ್ಕರೆ ಇಂತಹ ಗಂಡ ಸಿಗಬೇಕೆಂದು ಹೆಣ್ಣು ಕಲ್ಪಿಸಿಕೊಳ್ಳುತ್ತಾಳೆ. ಹಾಗಾಗಿ ಚಿತ್ರದಲ್ಲಿ ಒಂದು ಡ್ಯುಯೆಟ್ ಹಾಡು ಹಾಕಿದ್ದೇವೆ.
ಯಾರಿಗೂ ನೋವುಂಟು ಮಾಡುವ ಉದ್ದೇಶ ನಮಗಿಲ್ಲ. ಈ ಹಾಡಿನಿಂದ ಕನ್ನಡಿಗರಿಗೆ, ಕನ್ನಡಪರ ಸಂಘಟನೆಗಳಿಗೆ ಮತ್ತು ದೇಶಭಕ್ತರಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇವೆ ಎಂದು ನಿರ್ಮಾಪಕ ಅಪ್ಪುಗೋಳ್ ಹೇಳಿದ್ದಾರೆ.
ಸಂಗೊಳ್ಳಿ ರಾಯಣ್ಣ ವಿಶೇಷ ಪ್ರದರ್ಶನಕ್ಕೆ ಮುಖ್ಯವಾಗಿ ರಾಜ್ ಕುಟುಂಬ, ಅಂಬರೀಶ್ ಕುಟುಂಬ, ಸುದೀಪ್ ಬಂದಿರಲಿಲ್ಲ. ಸುದೀಪ್ ಈಗಾಗಲೇ ಚಿತ್ರ ವೀಕ್ಷಿಸಿದ್ದರಿಂದ ವಿಶೇಷ ಪ್ರದರ್ಶನಕ್ಕೆ ಬರಲಿಲ್ಲ ಎನ್ನಲಾಗಿದೆ.
ದರ್ಶನ್ ಕುಟುಂಬ ಸಮೇತ ಚಿತ್ರ ವೀಕ್ಷಿಸಲು ಆಗಮಿಸಿದ್ದರು. ದ್ವಾರಕೀಶ್, ಉಪೇಂದ್ರ, ಸುಧಾರಾಣಿ, ಸಾ.ರಾ.ಗೋವಿಂದು, ನಾಗತಿಹಳ್ಳಿ ಚಂದ್ರಶೇಖರ್, ಹರ್ಷಿಕಾ ಪೂಣಚ್ಚ, ವಿಜಯ್ ರಾಘವೇಂದ್ರ, ಶರಣ್, ಧ್ರುವ್, ಮುರಳಿ, ಶಿವಮಣಿ, ಫಣಿ ರಾಮಚಂದ್ರ ಮುಂತಾದವರು ಚಿತ್ರ ವೀಕ್ಷಿಸಿದರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಚಿತ್ರದ ಗ್ಯಾಲರಿಗೆ ಇಲ್ಲಿ ಕ್ಲಿಕ್ಕಿಸಿ