Don't Miss!
- Automobiles Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ.. 320 ಕಿ.ಮೀ ವೇಗದಲ್ಲಿ ಓಡುತ್ತೆ ರೈಲು!
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಾರ್ವತಮ್ಮ ಸಮಾಧಿಗೆ ಕುಟುಂಬದವರಿಂದ ಹಾಲು ತುಪ್ಪ ಕಾರ್ಯ
ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಸಮಾಧಿಗೆ ಹಾಲು ತುಪ್ಪ ಬಿಡುವ ಕಾರ್ಯವನ್ನು ಇಂದು ನಡೆಸಲಾಗಿದೆ. ಇಂದು ಬೆಳಗ್ಗೆ 10.30ರ ಸುಮಾರಿಗೆ ಪಾರ್ವತಮ್ಮ ಅವರ ಸಮಾಧಿಗೆ ಕುಟುಂಬದವರು ವಿಶೇಷ ಪೂಜೆ ಸಲ್ಲಿಸಿದರು.
ಶಿವಣ್ಣ, ರಾಘಣ್ಣ, ಪುನೀತ್ ರಾಜ್ ಕುಮಾರ್ ಪೂಜಾ ಕಾರ್ಯಗಳನ್ನು ಮಾಡಿದರು. ಪಾರ್ವತಮ್ಮ ಸಹೋದರ ಚಿನ್ನೇಗೌಡ ಮತ್ತು ದಂಪತಿ, ಪಾರ್ವತಮ್ಮ ಪುತ್ರಿ ಲಕ್ಷ್ಮಿ ಮತ್ತು ಎಸ್ ಎ ಗೋವಿಂದರಾಜು ದಂಪತಿ, ಪಾರ್ವತಮ್ಮ ಮೊಮ್ಮಕ್ಕಳಾದ ವಿನಯ್ ರಾಜ್ ಕುಮಾರ್, ಗುರು ರಾಜ್, ಪೂಜಾ ಕಾರ್ಯದಲ್ಲಿ ಭಾಗಿಯಾಗಿದ್ದರು.[ಪಾರ್ವತಮ್ಮ ಅವರ ಬಹುದಿನಗಳ ಈ ಆಸೆ ಕೊನೆಗೂ ಈಡೇರಲೇ ಇಲ್ಲ.!]
ಇಂದು ಸಹ ಕಂಠೀರವ ಸ್ಟುಡಿಯೋದ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಪಾರ್ವತಮ್ಮ ಸಮಾಧಿ ಬಳಿ ಸಾಮಾನ್ಯರಿಗೆ ಪ್ರವೇಶವಿಲ್ಲದರಿಂದ ರಾಜ್ ಸ್ಮಾರಕದ ಬಳಿಯೇ ನಿಂತು ಅಭಿಮಾನಿಗಳು ಪಾರ್ವತಮ್ಮ ಸಮಾಧಿಗೆ ನಮಸ್ಕಾರ ಮಾಡಿದರು.[ಮಣ್ಣಲ್ಲಿ ಮಣ್ಣಾದ ಕನ್ನಡ ಚಿತ್ರರಂಗದ 'ವಜ್ರೇಶ್ವರಿ' ಪಾರ್ವತಮ್ಮ ರಾಜ್ ಕುಮಾರ್]
ಅಂದಹಾಗೆ, ಇಂದಿನ ಪೂಜಾ ಕಾರ್ಯದಲ್ಲಿ ರಾಜ್ ಕುಟುಂಬದೊಂದಿಗೆ ನಟ ಹೊನ್ನವಳ್ಳಿ ಕೃಷ್ಣ, ಫಿಲ್ಮ್ ಚೇಂಬರ್ ಅಧ್ಯಕ್ಷ ಸಾ.ರಾ ಗೋವಿಂದು, ನಿರ್ಮಾಪಕ ರಾಮು, ಮತ್ತು ರಾಕ್ ಲೈನ್ ವೆಂಕಟೇಶ್ ಸಹ ಹಾಜರಾಗಿದ್ದರು.['ಶ್ರೇಷ್ಠ ಹೆಣ್ಣು' ಪಾರ್ವತಮ್ಮ ರನ್ನ ನೆನೆದು ಕಣ್ಣೀರಿಟ್ಟ ಹಿರಿಯ ನಟಿ ಲೀಲಾವತಿ ]