Don't Miss!
- Automobiles
ಜನಪ್ರಿಯ ನಟನ ಮನೆಗೆ ಕಥೆ ಹೇಳಲು ಹೋಗಿ ಆತನ ದುಬಾರಿ ಕಾರ್ ಓಡಿಸಿಬಂದ ನಿರ್ದೇಶಕ...
- News
Indira Canteens: ಇಂದಿರಾ ಕ್ಯಾಂಟೀನ್ಗಳಲ್ಲಿ ಕುಡಿಯಲು ನೀರಿಲ್ಲ, ಬಿಲ್ ಕಟ್ಟಿಲ್ಲ ಎಂದು ಸಂಪರ್ಕ ಕಡಿತ
- Sports
ಮೂಲೆಗುಂಪಾದ ಶಿಖರ್ ಧವನ್ ಬಗ್ಗೆ ಅಶ್ವಿನ್ ಅಚ್ಚರಿಯ ಹೇಳಿಕೆ: ಇಶಾನ್, ಗಿಲ್ ಬಗ್ಗೆ ಹೇಳಿದ್ದೇನು?
- Technology
ಭಾರತದಲ್ಲಿ ಇನ್ಫಿನಿಕ್ಸ್ ಝೀರೋ ಬುಕ್ ಅಲ್ಟ್ರಾ ಲ್ಯಾಪ್ಟಾಪ್ ಲಾಂಚ್; ಏನೆಲ್ಲಾ ಫೀಚರ್ಸ್ ಇವೆ ಗೊತ್ತಾ!?
- Lifestyle
ಫೆ.1ಕ್ಕೆ ಜಯ ಏಕಾದಶಿ: ಈ ರೀತಿ ಮಾಡಿದರೆ ದಾರಿದ್ರ್ಯ ಹೋಗಿ ಸಂಪತ್ತು ವೃದ್ಧಿಸುವುದು
- Finance
Economic Survey: ಶೇ.6-6.8 ಜಿಡಿಪಿ ಬೆಳವಣಿಗೆ, 3 ವರ್ಷದಲ್ಲೇ ಮಂದಗತಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ರಾಜ್ ವಿಷ್ಣು' ತೆರೆಗೆ ಬರಲು ಕೌಂಟ್ಡೌನ್ ಶುರು
ಸೂಪರ್ ಹಿಟ್ ಚಿತ್ರ 'ಅಧ್ಯಕ್ಷ' ಮೂಲಕ ಕನ್ನಡ ಸಿನಿ ಪ್ರಿಯರಿಗೆ ಸಖತ್ ಮನರಂಜನೆ ನೀಡಿದ ನಟ ಶರಣ್ ಮತ್ತು ಕಾಮಿಡಿ ಕಿಂಗ್ ಚಿಕ್ಕಣ್ಣ ಮತ್ತೆ ಒಂದೇ ಚಿತ್ರದಲ್ಲಿ ನಟಿಸಿರುವ 'ರಾಜ್ ವಿಷ್ಣು' ತೆರೆಮೇಲೆ ಬರಲು ಸಜ್ಜಾಗಿದೆ.
'ರಾಜ್-ವಿಷ್ಣು'
ಜೊತೆ
'ಬಾಹುಬಲಿ-ಕಟ್ಟಪ್ಪ'ನ
ಸರ್ಪ್ರೈಸ್
ಎಂಟ್ರಿ!
ಶರಣ್ ಮತ್ತು ಚಿಕ್ಕಣ್ಣ ಅಭಿನಯದ 'ರಾಜ್-ವಿಷ್ಣು' ಚಿತ್ರವು ಸೆನ್ಸಾರ್ ಮಂಡಳಿಯಿಂದ 'U/A' ಪ್ರಮಾಣ ಪತ್ರ ಸ್ವೀಕರಿಸಿದೆ. ಚಿತ್ರ ಬಿಡುಗಡೆ ದಿನಾಂಕ ಸಹ ಫಿಕ್ಸ್ ಆಗಿದ್ದು, ಆಗಸ್ಟ್ 4 ರಂದು ತೆರೆಗೆ ಬರಲಿದೆ. ಈ ಚಿತ್ರದ ಟ್ರೈಲರ್ ಗೆ ಈಗಾಗಲೇ ಉತ್ತಮ ರೆಸ್ಪಾನ್ಸ್ ಸಿಕ್ಕಿದ್ದು, 'ಅಧ್ಯಕ್ಷ' ಚಿತ್ರದಷ್ಟೇ ಇಬ್ಬರು ಮತ್ತೆ ಕಮಾಲ್ ಮಾಡುವ ಭರವಸೆ ಮೂಡಿಸಿದ್ದಾರೆ.
ಅಂದಹಾಗೆ 'ರಾಜ್ ವಿಷ್ಣು' ಚಿತ್ರ ತಮಿಳಿನ 'ರಜನಿ ಮುರುಗನ್' ಚಿತ್ರದ ರಿಮೇಕ್ ಸಿನಿಮಾ ಆಗಿದ್ದು, ಕನ್ನಡದ ಸ್ಟಾರ್ ನಿರ್ದೇಶಕರಲ್ಲಿ ಒಬ್ಬರಾದ ಕೆ.ಮಾದೇಶ್ ರವರು ಆಕ್ಷನ್ ಹೇಳಿದ್ದಾರೆ. ಜನಾರ್ಧನ್ ಮಹರ್ಷಿ ಚಿತ್ರಕಥೆ ಬರೆದಿದ್ದು, ರಾಜೇಶ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ.
ಚಿತ್ರದಲ್ಲಿ ಮುಂಬೈ ಮೂಲದ ನಟಿ ವೈಭವಿ ನಾಯಕಿ ಆಗಿ ನಟಿಸಿದ್ದಾರೆ. ರೋರಿಂಗ್ ಸ್ಟಾರ್ ಶ್ರೀಮುರುಳಿ ಅತಿಥಿ ಪಾತ್ರವನ್ನ ನಿರ್ವಹಿಸಿದ್ದು ಉಳಿದಂತೆ ಸಾಧುಕೋಕಿಲಾ, ರವಿಶಂಕರ್, ವೀಣಾ ಸುಂದರ್, ಮಿಮಿಕ್ರಿ ಗೋಪಿ, ರಮೇಶ್ ಪಂಡಿತ್ ಮತ್ತು ಮುಂತಾದವರು ಅಭಿನಯಿಸಿದ್ದಾರೆ. ಚಿತ್ರದ ಹಾಡುಗಳಿಗೆ ಯೋಗರಾಜ್ ಭಟ್, ವಿ ನಾಗೇಂದ್ರ ಪ್ರಸಾದ್, ಕವಿರಾಜ್ ಅವರು ಸಾಹಿತ್ಯ ಬರೆದಿದ್ದಾರೆ. ರಾಮು ಎಂಟರ್ ಪ್ರೈಸಸ್ ಅಡಿಯಲ್ಲಿ ಚಿತ್ರ ನಿರ್ಮಾಣ ಮಾಡಲಾಗಿದೆ.