Don't Miss!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Automobiles 20 ವರ್ಷದ ಬಳಿಕ ಲ್ಯಾಂಬೋರ್ಗಿನಿ ಲೋಗೋಗೆ ಹೊಸ ಟಚ್: ಈ ಕಂಪನಿಯ ಕಾರುಗಳು ಯಾಕೆ ಫೇಮಸ್?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಾಜ್ ವಿಷ್ಣು' ತೆರೆಗೆ ಬರಲು ಕೌಂಟ್ಡೌನ್ ಶುರು
ಸೂಪರ್ ಹಿಟ್ ಚಿತ್ರ 'ಅಧ್ಯಕ್ಷ' ಮೂಲಕ ಕನ್ನಡ ಸಿನಿ ಪ್ರಿಯರಿಗೆ ಸಖತ್ ಮನರಂಜನೆ ನೀಡಿದ ನಟ ಶರಣ್ ಮತ್ತು ಕಾಮಿಡಿ ಕಿಂಗ್ ಚಿಕ್ಕಣ್ಣ ಮತ್ತೆ ಒಂದೇ ಚಿತ್ರದಲ್ಲಿ ನಟಿಸಿರುವ 'ರಾಜ್ ವಿಷ್ಣು' ತೆರೆಮೇಲೆ ಬರಲು ಸಜ್ಜಾಗಿದೆ.
'ರಾಜ್-ವಿಷ್ಣು' ಜೊತೆ 'ಬಾಹುಬಲಿ-ಕಟ್ಟಪ್ಪ'ನ ಸರ್ಪ್ರೈಸ್ ಎಂಟ್ರಿ!
ಶರಣ್ ಮತ್ತು ಚಿಕ್ಕಣ್ಣ ಅಭಿನಯದ 'ರಾಜ್-ವಿಷ್ಣು' ಚಿತ್ರವು ಸೆನ್ಸಾರ್ ಮಂಡಳಿಯಿಂದ 'U/A' ಪ್ರಮಾಣ ಪತ್ರ ಸ್ವೀಕರಿಸಿದೆ. ಚಿತ್ರ ಬಿಡುಗಡೆ ದಿನಾಂಕ ಸಹ ಫಿಕ್ಸ್ ಆಗಿದ್ದು, ಆಗಸ್ಟ್ 4 ರಂದು ತೆರೆಗೆ ಬರಲಿದೆ. ಈ ಚಿತ್ರದ ಟ್ರೈಲರ್ ಗೆ ಈಗಾಗಲೇ ಉತ್ತಮ ರೆಸ್ಪಾನ್ಸ್ ಸಿಕ್ಕಿದ್ದು, 'ಅಧ್ಯಕ್ಷ' ಚಿತ್ರದಷ್ಟೇ ಇಬ್ಬರು ಮತ್ತೆ ಕಮಾಲ್ ಮಾಡುವ ಭರವಸೆ ಮೂಡಿಸಿದ್ದಾರೆ.
ಅಂದಹಾಗೆ 'ರಾಜ್ ವಿಷ್ಣು' ಚಿತ್ರ ತಮಿಳಿನ 'ರಜನಿ ಮುರುಗನ್' ಚಿತ್ರದ ರಿಮೇಕ್ ಸಿನಿಮಾ ಆಗಿದ್ದು, ಕನ್ನಡದ ಸ್ಟಾರ್ ನಿರ್ದೇಶಕರಲ್ಲಿ ಒಬ್ಬರಾದ ಕೆ.ಮಾದೇಶ್ ರವರು ಆಕ್ಷನ್ ಹೇಳಿದ್ದಾರೆ. ಜನಾರ್ಧನ್ ಮಹರ್ಷಿ ಚಿತ್ರಕಥೆ ಬರೆದಿದ್ದು, ರಾಜೇಶ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ.
ಚಿತ್ರದಲ್ಲಿ ಮುಂಬೈ ಮೂಲದ ನಟಿ ವೈಭವಿ ನಾಯಕಿ ಆಗಿ ನಟಿಸಿದ್ದಾರೆ. ರೋರಿಂಗ್ ಸ್ಟಾರ್ ಶ್ರೀಮುರುಳಿ ಅತಿಥಿ ಪಾತ್ರವನ್ನ ನಿರ್ವಹಿಸಿದ್ದು ಉಳಿದಂತೆ ಸಾಧುಕೋಕಿಲಾ, ರವಿಶಂಕರ್, ವೀಣಾ ಸುಂದರ್, ಮಿಮಿಕ್ರಿ ಗೋಪಿ, ರಮೇಶ್ ಪಂಡಿತ್ ಮತ್ತು ಮುಂತಾದವರು ಅಭಿನಯಿಸಿದ್ದಾರೆ. ಚಿತ್ರದ ಹಾಡುಗಳಿಗೆ ಯೋಗರಾಜ್ ಭಟ್, ವಿ ನಾಗೇಂದ್ರ ಪ್ರಸಾದ್, ಕವಿರಾಜ್ ಅವರು ಸಾಹಿತ್ಯ ಬರೆದಿದ್ದಾರೆ. ರಾಮು ಎಂಟರ್ ಪ್ರೈಸಸ್ ಅಡಿಯಲ್ಲಿ ಚಿತ್ರ ನಿರ್ಮಾಣ ಮಾಡಲಾಗಿದೆ.