Don't Miss!
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- News ಮಳೆ.. ಮಳೆ.. ಅಲ್ಲಲ್ಲ ಮುಂದಿನ 1 ವಾರ ಬೆಂಗಳೂರಲ್ಲಿ ಭಾರಿ ಬಿಸಿಲು!
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನ.20 ರಿಂದ ಕರ್ನಾಟಕದಲ್ಲಿ 'ರಾಜರಥ' ಸಂಚಾರ
ಬೆಂಗಳೂರಿನ ಕಂಠೀರವ ಸ್ಟುಡಿಯೋದ ಡಾ. ರಾಜಕುಮಾರ್ ಸಮಾಧಿ ಸ್ಥಳದಲ್ಲಿ ನಿರ್ಮಿಸಿರುವ ಸ್ಮಾರಕದ ಲೋಕಾರ್ಪಣೆ ಸಮಾರಂಭ ನ.29ರಂದು ನಡೆಯಲಿದೆ. ಈ ಕಾರ್ಯಕ್ರಮಕ್ಕೆ ರಾಜ್ಯದ ಜನರನ್ನು ಆಹ್ವಾನಿಸಲು ಬಣ್ಣದ ಲೋಕ ತಂಡ 'ರಾಜರಥ ರಾಜ್ಯ ಸಂಚಾರ ಮಹಾಭಿಯಾನ' ಹಮ್ಮಿಕೊಂಡಿದೆ.
ಬಣ್ಣದ
ಲೋಕದ
ಪ್ರಧಾನ
ಕಾರ್ಯದರ್ಶಿ
ಕೆ.ಎಸ್.ಎಲ್.ಸ್ವಾಮಿ
ಈ
ಕುರಿತು
ಬುಧವಾರ
ಪತ್ರಿಕಾಗೋಷ್ಠಿಯಲ್ಲಿ
ಮಾಹಿತಿ
ನೀಡಿದ್ದು,
ಗಾಜನೂರಿನಲ್ಲಿ
ನ.20ರಂದು
ರಾಜರಥ
ಸಂಚಾರಕ್ಕೆ
ಚಾಲನೆ
ದೊರೆಯಲಿದ್ದು,
ರಾಜ್ಯದ
ಜಿಲ್ಲೆಗಳಲ್ಲಿ
ಸಂಚರಿಸಿ
ರಥ
ನ.29ರಂದು
ಬೆಂಗಳೂರಿಗೆ
ತಲುಪಲಿದೆ
ಎಂದರು.
[ರಾಜ್
ಸ್ಮಾರಕ
ಲೋಕಾರ್ಪಣೆ
ಆಹ್ವಾನಿತರ
ಪಟ್ಟಿ]
ಬಭ್ರುವಾಹನ ಮಾದರಿಯ ಈ ರಥ ಕನ್ನಡ ಬಾವುಟಗಳಿಂದ ಅಲಂಕೃತವಾಗಿರುತ್ತದೆ. ರಥಯಾತ್ರೆ ಮೂಲಕ ರಾಜ್ಯದಲ್ಲಿ ಕನ್ನಡ ಭಾಷೆಯ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ರಾಜ ರಥ ಒಟ್ಟು 7,500 ಕಿ.ಮೀ.ಸಂಚರಿಸಲಿದೆ ಎಂದು ಕೆ.ಎಸ್.ಎಲ್.ಸ್ವಾಮಿ ಹೇಳಿದರು.
ನ.29ರಂದು ರಥ ಬೆಂಗಳೂರಿಗೆ ಆಗಮಿಸಲಿದ್ದು ಪಾರ್ವತಮ್ಮ ರಾಜಕುಮಾರ್ ಅವರು ರಥವನ್ನು ಕಂಠೀರವ ಸ್ಟುಡಿಯೋ ಬಳಿ ಬರಮಾಡಿಕೊಳ್ಳಲಿದ್ದು, ಈ ಕಾರ್ಯಕ್ರಮದಲ್ಲಿ ಹಲವಾರು ಕಲಾವಿದರು ಪಾಲ್ಗೊಳ್ಳಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ.ರಾಜ್ ಅಭಿಮಾನಿ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಅವರು, ರಾಜ್ಕುಮಾರ್ ಮೇಲೆ ಅಂದು ಜನರು ಇಟ್ಟುಕೊಂಡಿದ್ದ ಅಭಿಮಾನ ಇಂದಿಗೂ ಹಾಗೇ ಇದೆ. ಬೆಂಗಳೂರಿಗೆ ಬಂದವರು ರಾಜ್ ಸಮಾಧಿಗೆ ಭೇಟಿ ನೀಡಿ ಮರಳುತ್ತಾರೆ ಎಂದರು.
ರಾಘವೇಂದ್ರ ರಾಜಕುಮಾರ್, ನಿರ್ದೇಶಕ ಎಸ್.ನಾರಾಯಣ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಗಂಗರಾಜು, ರಾಜ್ ಮೊಮ್ಮಗ ವಿನಯ್ ರಾಜಕುಮಾರ್ ಮುಂತಾದವರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.