ಭೈರಪ್ಪ 'ಪರ್ವ' ಕಾದಂಬರಿ ಬಗ್ಗೆ ರಾಜಮೌಳಿ ಸ್ಪಷ್ಟನೆ
ತೆಲುಗಿನ ಯಶಸ್ವಿ ಚಿತ್ರ ನಿರ್ದೇಶಕ ಎಸ್ ಎಸ್ ರಾಜಮೌಳಿ ಅವರು ಸದ್ಯಕ್ಕೆ ಅವರ ಮಹತ್ವಾಕಾಂಕ್ಷಿ 'ಬಾಹುಬಲಿ' ಚಿತ್ರದಲ್ಲಿ ಬಿಜಿಯಾಗಿದ್ದಾರೆ. ಆ ಚಿತ್ರದ ಬಳಿಕ ಅವರು ಖ್ಯಾತ ಕಾದಂಬರಿಕಾರ ಎಸ್ ಎಲ್ ಭೈರಪ್ಪ ಅವರ 'ಪರ್ವ' ಆಧಾರಿತ ಚಿತ್ರ ಕೈಗೆತ್ತಿಕೊಳ್ಳಲಿದ್ದಾರೆ ಎಂಬ ಸುದ್ದಿ ಇತ್ತು.
ಈ ಬಗ್ಗೆ ಸ್ಪಷ್ಟೀಕರಣ ನೀಡಿರುವ ರಾಜಮೌಳಿ ಅವರು, "ಕನ್ನಡ ಕಾದಂಬರಿ ಆಧಾರಿಸಿ ನಾನು ಚಿತ್ರ ಮಾಡಲಿದ್ದೇನೆ ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು. ಬಾಹುಬಲಿ ಚಿತ್ರದ ಬಳಿಕ ನಾನು ಯಾವ ಚಿತ್ರ ಮಾಡಬೇಕು ಎಂಬುದನ್ನು ಯೋಚಿಸಿಲ್ಲ" ಎಂದಿದ್ದಾರೆ. ['ಬಾಹುಬಲಿ'ಯಲ್ಲಿ ಸುದೀಪ್ ಹೆಸರು, ಪಾತ್ರ ಬಹಿರಂಗ]

ರಾಜಮೌಳಿ ಚಿತ್ರಗಳೆಂದರೆ ಅದನ್ನು ಕಾತುರದಿಂದ ನಿರೀಕ್ಷಿಸುವ ಬಹಳ ದೊಡ್ಡ ಪ್ರೇಕ್ಷಕ ವರ್ಗವೇ ಇದೆ. ಇದೀಗ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಾಹುಬಲಿ ಚಿತ್ರವೂ ಭಾರಿ ಬಜೆಟ್ ನಿಂದ ಕೂಡಿದ್ದು ಭಾರತೀಯ ಚಿತ್ರರಂಗವೇ ಎದುರು ನೋಡುವಂತೆ ಮಾಡಿದೆ.
ಇನ್ನು ಈ ಚಿತ್ರದ ಶೂಟಿಂಗ್ ಟೈಮಲ್ಲಿ ಯಾರೂ ಮೊಬೈಲ್ ಬಳಸದಂತೆ ನಿಷೇಧ ಹೇರಲಾಗಿದೆ. ಚಿತ್ರದ ಮಾಹಿತಿ ಸೋರಿಕೆಯಾದಂತೆ ಸಾಕಷ್ಟು ಮುಂಜಾಗ್ರತೆಗಳನ್ನು ತೆಗೆದುಕೊಂಡಿದ್ದಾರೆ ರಾಜಮೌಳಿ ಚಿತ್ರವನ್ನು ತರುತ್ತಿರುವುದು ಇನ್ನಷ್ಟು ಕುತೂಹಲ ಹೆಚ್ಚಿಸಿದೆ.


Click it and Unblock the Notifications











