Don't Miss!
- News 5 ವರ್ಷಗಳಲ್ಲಿ ಕರ್ನಾಟಕ ಸಂಸದರ ಸಾಧನೆ ಏನು? ಅಧ್ಯಯನ ಹೇಳೋದೇನು?
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತುರುವೆಕೆರೆಯಲ್ಲಿ 'ಮುಸ್ಸಂಜೆ ಗೆಳತಿ' ನಾಯಕ ಅರೆಸ್ಟ್
ತುರುವೆಕೆರೆಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಶ್ರೀನಿವಾಸ್ ಅವರನ್ನು ಹಾಜರುಪಡಿಸಲಾಗಿದ್ದು, ಆರೋಪಿಯನ್ನು ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ. ದೇಶದಲ್ಲಿ ವಿವಿಧ ಬ್ಯಾಂಕ್ ಸ್ಥಾಪನೆ, ಚೀಟಿ ವ್ಯವಹಾರ ಸೇರಿದಂತೆ ವಿವಿಧ ನೆಪವೊಡ್ಡಿ ಕೋಟಿಗಟ್ಟಲೆ ವಂಚನೆ ಮಾಡಿರುವ ಆರೋಪ ಶ್ರೀನಿವಾಸ್ ಮೇಲಿದೆ.
ರಾಜಸ್ತಾನದ ಕಿಶೋರ್ ಸೇಠ್ ಎಂಬುವವರಿಂದ ರು.15 ಕೋಟಿ ಪಡೆದು ಅವರಿಗೆ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬ್ಯಾಂಕ್ ಒಂದನ್ನು ಪ್ರಾರಂಭಿಸುವುದಾಗಿ ಹೇಳಿ ಸೇಠ್ ಅವರಿಂದ 2008ರಲ್ಲಿ ರು.15 ಕೋಟಿಗಳನ್ನು ಶ್ರೀನಿವಾಸ್ ಪಡೆದಿದ್ದರು ಎನ್ನಲಾಗಿದೆ. ಆದರೆ ಹಣ ಪಡೆದು ಬ್ಯಾಂಕನ್ನು ಆರಂಭಿಸದೆ ತಪ್ಪಿಸಿಕೊಂಡು ಅಡ್ಡಾಡುತ್ತಿದ್ದರಂತೆ.
ತಮ್ಮ ಹಣ ವಾಪಸ್ ನೀಡುವಂತೆ ಅವರು ಶ್ರೀನಿವಾಸ್ ಗೆ ಕೇಳಲಾಗಿ ಬೆದರಿಕೆ ಹಾಕಿದ್ದರಂತೆ. ಈ ಸಂಬಂಧ ರಾಜಸ್ತಾನ ಪೊಲೀಸರಿಗೆ ಸೇಠ್ ದೂರು ನೀಡಿದ್ದರು. ತನಿಖೆ ಆರಂಭಿಸಿದ ಪೊಲೀಸರು ತುಮಕೂರಿನಲ್ಲಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅವರನ್ನು ಬಂಧಿಸಿದ್ದಾರೆ.
'ಮುಸ್ಸಂಜೆ ಗೆಳತಿ' ಎಂಬ ಚಿತ್ರದಲ್ಲಿ ನಟಿಸಿ ನಿರ್ದೇಶನದ ಜೊತೆಗೆ ನಿರ್ಮಾಣವನ್ನೂ ಮಾಡಿದ್ದರು. ಈ ಚಿತ್ರಕ್ಕೆ ನಾಯಕಿ ಶ್ರೀನಿವಾಸ್ ಅವರ ಪುತ್ರಿ ಶಾಲಿನಿ. ಇದಾದ ಬಳಿಕ ಇನ್ನೂ ತೆರೆಗೆ ಬಾರದ 'ಹರಿಶ್ಚಂದ್ರಘಾಟ್' ಎಂಬ ಚಿತ್ರವನ್ನೂ ಕೈಗೆತ್ತಿಕೊಂಡಿದ್ದರು. (ಏಜೆನ್ಸೀಸ್)