Don't Miss!
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- News ಅಮಿತ್ ಶಾ ಓರ್ವ ಗೂಂಡಾ, ರೌಡಿ.! ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತುರುವೆಕೆರೆಯಲ್ಲಿ 'ಮುಸ್ಸಂಜೆ ಗೆಳತಿ' ನಾಯಕ ಅರೆಸ್ಟ್
ತುರುವೆಕೆರೆಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಶ್ರೀನಿವಾಸ್ ಅವರನ್ನು ಹಾಜರುಪಡಿಸಲಾಗಿದ್ದು, ಆರೋಪಿಯನ್ನು ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ. ದೇಶದಲ್ಲಿ ವಿವಿಧ ಬ್ಯಾಂಕ್ ಸ್ಥಾಪನೆ, ಚೀಟಿ ವ್ಯವಹಾರ ಸೇರಿದಂತೆ ವಿವಿಧ ನೆಪವೊಡ್ಡಿ ಕೋಟಿಗಟ್ಟಲೆ ವಂಚನೆ ಮಾಡಿರುವ ಆರೋಪ ಶ್ರೀನಿವಾಸ್ ಮೇಲಿದೆ.
ರಾಜಸ್ತಾನದ ಕಿಶೋರ್ ಸೇಠ್ ಎಂಬುವವರಿಂದ ರು.15 ಕೋಟಿ ಪಡೆದು ಅವರಿಗೆ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬ್ಯಾಂಕ್ ಒಂದನ್ನು ಪ್ರಾರಂಭಿಸುವುದಾಗಿ ಹೇಳಿ ಸೇಠ್ ಅವರಿಂದ 2008ರಲ್ಲಿ ರು.15 ಕೋಟಿಗಳನ್ನು ಶ್ರೀನಿವಾಸ್ ಪಡೆದಿದ್ದರು ಎನ್ನಲಾಗಿದೆ. ಆದರೆ ಹಣ ಪಡೆದು ಬ್ಯಾಂಕನ್ನು ಆರಂಭಿಸದೆ ತಪ್ಪಿಸಿಕೊಂಡು ಅಡ್ಡಾಡುತ್ತಿದ್ದರಂತೆ.
ತಮ್ಮ ಹಣ ವಾಪಸ್ ನೀಡುವಂತೆ ಅವರು ಶ್ರೀನಿವಾಸ್ ಗೆ ಕೇಳಲಾಗಿ ಬೆದರಿಕೆ ಹಾಕಿದ್ದರಂತೆ. ಈ ಸಂಬಂಧ ರಾಜಸ್ತಾನ ಪೊಲೀಸರಿಗೆ ಸೇಠ್ ದೂರು ನೀಡಿದ್ದರು. ತನಿಖೆ ಆರಂಭಿಸಿದ ಪೊಲೀಸರು ತುಮಕೂರಿನಲ್ಲಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅವರನ್ನು ಬಂಧಿಸಿದ್ದಾರೆ.
'ಮುಸ್ಸಂಜೆ ಗೆಳತಿ' ಎಂಬ ಚಿತ್ರದಲ್ಲಿ ನಟಿಸಿ ನಿರ್ದೇಶನದ ಜೊತೆಗೆ ನಿರ್ಮಾಣವನ್ನೂ ಮಾಡಿದ್ದರು. ಈ ಚಿತ್ರಕ್ಕೆ ನಾಯಕಿ ಶ್ರೀನಿವಾಸ್ ಅವರ ಪುತ್ರಿ ಶಾಲಿನಿ. ಇದಾದ ಬಳಿಕ ಇನ್ನೂ ತೆರೆಗೆ ಬಾರದ 'ಹರಿಶ್ಚಂದ್ರಘಾಟ್' ಎಂಬ ಚಿತ್ರವನ್ನೂ ಕೈಗೆತ್ತಿಕೊಂಡಿದ್ದರು. (ಏಜೆನ್ಸೀಸ್)